Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...