Homeಕರ್ನಾಟಕರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

- Advertisement -
- Advertisement -

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಧ್ವಜ ವಿವಾದದ ಕುರಿತು ಮಾತನಾಡುವಾಗ ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ’ ಮಾಡಿದ್ದಾರೆ.

ಧ್ವಜ ವಿವಾದದ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಹಿಂದಿಯಲ್ಲಿ ಮಾತನಾಡಿದ ಸಿ.ಟಿ ರವಿ, “ಹನುಮ ಧ್ವಜವನ್ನು ಕೆಳಗಿಳಿಸಿ ತಾಲಿಬಾನ್‌ ಧ್ವಜವನ್ನು ಹಾರಿಸಿದ್ದಾರೆ” ಎಂದಿದ್ದಾರೆ. ಸಿ.ಟಿ ರವಿಯ ಈ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಿ ನೋಡಿದರೆ, ಅಧಿಕಾರಿಗಳು ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸಿದ್ದು ನಿಜ, ಅದರ ಬದಲಾಗಿ ರಾಷ್ಟ್ರ ಧ್ವಜವನ್ನು ಹಾರಿಸಿದ್ದಾರೆ. ಸಿ.ಟಿ ರವಿ ಹೇಳಿದಂತೆ ತಾಲಿಬಾನ್ ಧ್ವಜ ಹಾರಿಸಿಲ್ಲ. ಹಾಗಾದರೆ, ಸಿ.ಟಿ ರವಿ ತಾಲಿಬಾನ್ ಧ್ವಜ ಎಂದು ಹೇಳಿದ್ದು ರಾಷ್ಟ್ರ ಧ್ವಜವನ್ನೇ ಎಂಬುವುದರಲ್ಲಿ ಅನುಮಾನವಿಲ್ಲ. ಈ ರೀತಿಯ ಹೇಳಿಕೆ ಕೊಡುವುದು ದೇಶದ್ರೋಹಕ್ಕೆ ಸಮವಲ್ಲವೇ? ಸಿ.ಟಿ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕಲ್ಲವೇ? ಎಂಬ ಪ್ರಶ್ನೆ ಮೂಡಿದೆ.

ರಾಜ್ಯ ಕಾಂಗ್ರೆಸ್‌ ಸಿ.ಟಿ ರವಿಯ ಹೇಳಿಕೆ ವಿರುದ್ದ ಕಿಡಿಕಾರಿದೆ. “ಪವಿತ್ರವಾದ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ ದೇಶದ್ರೋಹಿ ಬಿಜೆಪಿಯ ಸಿ.ಟಿ ರವಿ ಎನ್ನುವ ಕೋಮು ಕ್ರಿಮಿ ದೇಶದ ಘನತೆಯನ್ನು ಮಣ್ಣುಪಾಲು ಮಾಡುವ ಹೇಳಿಕೆ ನೀಡಿದ್ದಾರೆ. ತ್ರಿವರ್ಣ ಧ್ವಜ ಈಗ ಬಿಜೆಪಿ ಪ್ರಕಾರ ತಾಲಿಬಾನ್ ಧ್ವಜವಾಗಿದೆಯೇ?. ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್‌.ಎಸ್‌.ಎಸ್‌ನ ಸಿದ್ಧಾಂತವನ್ನು ಬಿಜೆಪಿ ಚಾಚೂ ತಪ್ಪದೆ ಪಾಲಿಸುತ್ತಿದೆ” ಎಂದಿದೆ.

ಬಿಜೆಪಿಗೆ INDIA ಮೇಲೂ ದ್ವೇಷ, ಬಿಜೆಪಿಗೆ ಭಾರತದ ಸಂವಿಧಾನದ ಮೇಲೂ ದ್ವೇಷ, ಬಿಜೆಪಿಗೆ ಭಾರತದ ತ್ರಿವರ್ಣ ಧ್ವಜದ ಮೇಲೂ ದ್ವೇಷ. ಇಂತಹ ಬಿಜೆಪಿ ದೇಶದ್ರೋಹಿಯಲ್ಲದೆ ಇನ್ನೇನು? ಎಂದು ಪ್ರಶ್ನಿಸಿದೆ. ಸಂವಿಧಾನದ ವಿಧಿ 51ಎ(ಎ) ಪ್ರಕಾರ ಇದು ಮಹಾ ಅಪರಾಧ ಎಂದು ಹೇಳಿದೆ.

ಕೆರಗೋಡಿನಲ್ಲಿ ನಿಜವಾಗಿಯೂ ನಡೆದಿದ್ದೇನು?

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ರಂಗಮಂದಿರದ ಆವರಣದಲ್ಲಿ ನಿರ್ಮಿಸಿದ್ದ ಬೃಹತ್‌ ಧ್ವಜಸ್ಥಂಬದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದಿದ್ದ ಗ್ರಾಮದ ಶ್ರೀ ಗೌರಿ ಶಂಕರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಹನುಮ ಧ್ವಜ (ಕೇಸರಿ ಧ್ವಜ) ಹಾರಿಸಿ ವಿವಾದ ಹುಟ್ಟು ಹಾಕಿದ್ದರು.

ಅನುಮತಿ ಮೀರಿ ಸಾರ್ವಜನಿಕ ಧ್ವಜಸ್ಥಂಬದಲ್ಲಿ ಹನುಮ ಧ್ವಜ ಹಾರಿಸಿದ್ದರಿಂದ ಸಹಜವಾಗಿ ಸ್ಥಳಿಯಾಡಳಿತ ಅಧಿಕಾರಿಗಳು ಅದನ್ನು ಕೆಳಗಿಳಿಸಿದ್ದರು. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ.

ಜನವರಿ 28ರಂದು ಹಿಂದುತ್ವ ಸಂಘಟನೆ ನೇತೃತ್ವದಲ್ಲಿ ಧ್ವಜಸ್ಥಂಬದ ಬಳಿ ಜಮಾಯಿಸಿದ್ದ ಗ್ರಾಮದ ನೂರಾರು ಪುರುಷರು ಮತ್ತು ಮಹಿಳೆಯರು ಧ್ವಜಸ್ಥಂಬದಲ್ಲಿ ಹನುಮ ಧ್ವಜ ಮರುಸ್ಥಾಪನೆಗೆ ಪಟ್ಟು ಹಿಡಿದಿದ್ದರು. ಇದಕ್ಕೆ ಪೊಲೀಸರು ನಿರಾಕರಿಸಿದಾಗ, ಮಹಿಳೆಯರು ಏಣಿ ಇಟ್ಟು ಧ್ವಜಸ್ಥಂಬಕ್ಕೆ ಏರಿ ಕೇಸರಿ ಧ್ವಜ ಮತ್ತು ರಾಮನ ಫ್ಲೆಕ್ಸ್ ಕಟ್ಟಿದ್ದಾರೆ.

ಸ್ಪಷ್ಟನೆ ನೀಡಿದ ಸಿಎಂ:

ಕೆರಗೋಡು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಹಿನ್ನೆಲೆ ಜನವರಿ 28ರಂದು ಸಿಎಂ ಸಿದ್ದರಾಮಯ್ಯ ಈ ಕುರಿತು ಪ್ರತಿಕ್ರಿಯಿಸಿದ್ದರು. ಶ್ರೀ ಗೌರಿ ಶಂಕರ ಟ್ರಸ್ಟ್‌ನವರು ಕನ್ನಡ ಧ್ವಜ ಮತ್ತು ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದರು. ಅದನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಕೆರಗೋಡು ಗ್ರಾಮ ಪಂಚಾಯತ್ ಕಾರ್ಯಾಲಯ ಯಾವ ಧ್ವಜ ಹಾರಿಸಲು ಗೌರಿ ಶಂಕರ ಟ್ರಸ್ಟ್‌ಗೆ ಅನುಮತಿ ನೀಡಿದೆ ಎಂಬ ಪತ್ರವನ್ನು ಸಿಎಂ ಹಂಚಿಕೊಂಡಿದ್ದರು.

ನಿನ್ನೆ( ಜ.30) ಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ನಾಯಕ ಸಿ.ಟಿ ರವಿ, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿದಂತೆ ಪ್ರಮುಖರು ಬೂದಿ ಮುಚ್ಚಿದ ಕೆಂಡದಂತಿದ್ದ ಗ್ರಾಮಕ್ಕೆ ತೆರಳಿ ಹಿಂದುತ್ವ ಕಾರ್ಯಕರ್ತರ ಜೊತೆ ಗ್ರಾಮದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜಾತ್ಯಾತೀತ ಜನತಾದಳದ ನಾಯಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡು ಅಖಾಡಕ್ಕೆ ಇಳಿದಿದ್ದು ಗಮನಾರ್ಹವಾಗಿತ್ತು.

ಅತ್ತ ಬಿಜೆಪಿ, ಜೆಡಿಎಸ್‌ ನಾಯಕರು ಮತ್ತು ಸಂಘಪರಿವಾರದ ಕಾರ್ಯಕರ್ತರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪಾದಯಯಾತ್ರೆ ನಡೆಸುತ್ತಿದ್ದರೆ, ಇತ್ತ ಪೊಲೀಸರು ಮತ್ತು ಸ್ಥಳೀಯಾಡಳಿತದ ಅಧಿಕಾರಿಗಳು ವಿವಾದಿತ ಧ್ವಜಸ್ಥಂಬದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಈ ಮೂಲಕ ವಿವಾದ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ಸದ್ಯಕ್ಕೆ ಗ್ರಾಮದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ.

ಇದನ್ನೂ ಓದಿ : ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. He is not fit for public administrative so public not given vote to him last election he is such a foolish fellow he is just talking with out knowledge keep on dring and run looti Ravi manuvadi

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...