Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...