Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...