Homeಮುಖಪುಟ24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಂದಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ 24 ಗಂಟೆಗಳಿಂದ ಸೊರೇನ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಅವರ ಪಕ್ಷದ ಮೂಲಗಳು ‘ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಮಂತ್ರಿ ಸುರಕ್ಷಿತವಾಗಿದ್ದಾರೆ ಮತ್ತು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದೆ.

ಇಡಿ ಮೂಲಗಳ ಪ್ರಕಾರ, ಸೊರೇನ್ ಇರುವಿಕೆಯ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಂಚಿಯಿಂದ ದೆಹಲಿಗೆ ಪ್ರಯಾಣಿಸಿದ ಚಾರ್ಟರ್ಡ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಅವರ ಹಲವಾರು ಸಿಬ್ಬಂದಿಗಳ ಫೋನ್‌ಗಳು ಸ್ವಿಚ್ ಆಫ್ ಆಗಿವೆ. ದೆಹಲಿಯಲ್ಲಿರುವ ಅವರ ಬಿಎಂಡಬ್ಲ್ಯು ಕಾರನ್ನು ಇಡಿ ವಶಪಡಿಸಿಕೊಂಡಿದೆ. ಅವರ ಚಾಲಕನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೆಲವು ದಾಖಲೆಗಳು ಮತ್ತು ₹36 ಲಕ್ಷ ಮೌಲ್ಯದ ನಗದು ವಶಕ್ಕೆ ಪಡೆಯಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಡಿ ಅಧಿಕಾರಿಗಳು ನಿನ್ನೆ ದೆಹಲಿಯಲ್ಲಿರುವ ಅವರ ಮನೆ ಮತ್ತು ಜಾರ್ಖಂಡ್ ಭವನಕ್ಕೆ ಭೇಟಿ ನೀಡಿದ್ದರು. ಆದರೆ, ಸೊರೇನ್ ಅವರು ಪತ್ತೆಯಾಗಲಿಲ್ಲ. ಅವರು ಭಾನುವಾರ ತಡರಾತ್ರಿ ದೆಹಲಿಯ ನಿವಾಸವನ್ನು ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್ ಬಿಜೆಪಿ ಘಟಕವು ‘ಮುಖ್ಯಮಂತ್ರಿ ಪರಾರಿಯಾಗಿದ್ದಾರೆ’ ಎಂದು ಹೇಳಿಕೊಂಡಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಗಮನಿಸಬೇಕು’ ಎಂದು ಒತ್ತಾಯಿಸಿದೆ. ‘ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೇನೆ’ಎಂದು ರಾಜ್ಯಪಾಲರು ಹೇಳಿದ್ದಾರೆ. ಇದು ರಾಜ್ಯಪಾಲರ ಕೆಲಸ, ನಾನು ಮಾಡುತ್ತಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು, ‘ಸೋರೆನ್ ತಮ್ಮ ದೆಹಲಿ ಮನೆಯಿಂದ ತಡರಾತ್ರಿ ಕಾಲ್ನಡಿಗೆಯಲ್ಲಿ ಓಡಿಹೋದರು’ ಎಂದು ಆರೋಪಿಸಿದ್ದಾರೆ.

ಜೆಎಂಎಂ ಮತ್ತು ಅದರ ಮಿತ್ರಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಶೀಘ್ರದಲ್ಲೇ ರಾಂಚಿಗೆ ಮರಳಲಿದ್ದಾರೆ. ಇಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದೆ. ಜೆಎಂಎಂ ಕೂಡ ಜಾರ್ಖಂಡ್‌ನಾದ್ಯಂತ ಸೊರೇನ್ ಅವರ ಬೆಂಬಲಿಸಿ ರ್ಯಾಲಿಗಳನ್ನು ನಡೆಸಿದೆ.

‘ಸಿಎಂ ಕೆಲವು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದು, ಶೀಘ್ರದಲ್ಲೆ ಅವರು ಹಿಂತಿರುಗುತ್ತಾರೆ. ಆದರೆ, ಇಡಿ ಕ್ರಮವು ಅಸಾಂವಿಧಾನಿಕವಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಎಂದು ತೋರುತ್ತದೆ’ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ.

ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು, ಸೋರೆನ್ ಅವರು ಇರುವ ಸ್ಥಳದ ಕುರಿತು ಸೃಷ್ಟಿಸಲಾದ ಗೊಂದಲವು ಪಿತೂರಿಯ ಭಾಗವಾಗಿದೆ. ಎಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಸಿಎಂ ನಾಪತ್ತೆಯಾಗಿದ್ದಾರೆ ಎಂದು ಜನರು ವದಂತಿಗಳನ್ನು ಹರಡುತ್ತಿದ್ದಾರೆ’ ಎಂದು ಹೇಳಿದರು.

ಮಂಗಳವಾರದ ಸಭೆಗಾಗಿ ಜೆಎಂಎಂ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಎಲ್ಲಾ ಶಾಸಕರನ್ನು ಜಾರ್ಖಂಡ್‌ನಲ್ಲೆ ಉಳಿಯುವಂತೆ ಸೂಚಿಸಲಾಗಿದೆ. ಶಾಸಕರು ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಿಜೆಪಿ ಸಂಸದ ಮತ್ತು ಜಾರ್ಖಂಡ್ ನಾಯಕ ನಿಶಿಕಾಂತ್ ದುಬೆ ಅವರು ಸೋರೆನ್ ಅವರ ಪತ್ನಿ ಕಲ್ಪನಾ ಅವರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಭೂ ಮಾಫಿಯಾದಿಂದ ಅಕ್ರಮವಾಗಿ ಮಾಲೀಕತ್ವ ಬದಲಾಯಿಸಿದ ಆರೋಪದ ದಂಧೆಗೆ ಸಂಬಂಧಿಸಿದಂತೆ ಸೊರೇನ್ ಅವರನ್ನು ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಇಡಿ ಇದುವರೆಗೆ 14 ಮಂದಿಯನ್ನು ಬಂಧಿಸಿದೆ.

ತನಿಖಾ ಸಂಸ್ಥೆಯು ಜನವರಿ 20 ರಂದು ಸೊರೇನ್ ಅವರ ಹೇಳಿಕೆ ದಾಖಲಿಸಿತ್ತು. ಹೇಳಿಕೆಯೊಂದರಲ್ಲಿ, ಸೊರೇನ್ ಅವರನ್ನು ವಿಚಾರಣೆಗೊಳಪಡಿಸಿದ ದಿನಗಳ ನಂತರ ಏಕೆ ಹೊಸ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಜೆಎಂಎಂ ಪ್ರಶ್ನಿಸಿದೆ. ಅವರು ಬುಧವಾರ ವಿಚಾರಣೆಗೆ ಲಭ್ಯವಾಗುತ್ತಾರೆ ಎಂದು ಹೇಳಿದ ನಂತರವೂ ನಿನ್ನೆ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಯವರ ದೆಹಲಿ ನಿವಾಸವನ್ನು ತಲುಪಿದ್ದಾರೆ ಎಂದು ಪಕ್ಷ ಆರೋಪಿಸಿದೆ.

‘ಮುಖ್ಯಮಂತ್ರಿ ಅಲ್ಲದೆ, ಇದು ರಾಜ್ಯದ 3.5 ಕೋಟಿ ಜನರಿಗೆ ಮಾಡಿದ ಅವಮಾನವಲ್ಲವೇ? ಇಡಿ ಯಂತಹ ಸಂಸ್ಥೆಗಳು ಈಗ ಬಿಜೆಪಿಯ ಕೈಗೊಂಬೆಗಳಾಗಿವೆಯೇ? ರಾಜ್ಯ ಸರ್ಕಾರಗಳನ್ನು ರಚಿಸಲು ಅಥವಾ ಉರುಳಿಸಲು ಅವುಗಳನ್ನು ಬಳಸಬಹುದೇ’ ಎಂದು ಜೆಎಂಎಂ ಪ್ರಶ್ನಿಸಿದೆ.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...