Homeಕರ್ನಾಟಕದ್ವೇಷ, ಹಿಂಸೆಯ ಸಿದ್ಧಾಂತ ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು: ರಾಹುಲ್ ಗಾಂಧಿ

ದ್ವೇಷ, ಹಿಂಸೆಯ ಸಿದ್ಧಾಂತ ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು: ರಾಹುಲ್ ಗಾಂಧಿ

- Advertisement -
- Advertisement -

“ದ್ವೇಷದ ಮೂಲಕ ಸತ್ಯದ ಜ್ವಾಲೆಯನ್ನು ನಂದಿಸಲು ಬಿಡಬೇಡಿ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಾಗರಿಕರಿಗೆ ಮನವಿ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮರಾದ 76ನೇ ವರ್ಷದ ದಿನವಾದ ಇಂದು ರಾಹುಲ್‌ ಈ ಹೇಳಿಕೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಮಹಾತ್ಮ ಗಾಂಧಿ ಹುತಾತ್ಮರಾದ ದಿನವನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, “ಈ ದಿನ, ದ್ವೇಷ ಮತ್ತು ಹಿಂಸೆಯ ಸಿದ್ಧಾಂತವು ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು. ಇಂದು ಅದೇ ಮನಸ್ಥಿತಿಯು ಅವರ ತತ್ವಗಳು ಮತ್ತು ಆದರ್ಶಗಳನ್ನು ನಮ್ಮಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.

“ದ್ವೇಷದ ಚಂಡಮಾರುತದಲ್ಲಿ, ಸತ್ಯ ಮತ್ತು ಸದ್ಭಾವನೆಯ ಜ್ವಾಲೆಯನ್ನು ನಂದಿಸಲು ನಾವು ಬಿಡಬಾರದು. ಇದು ನಿಜಕ್ಕೂ ಗಾಂಧೀಜಿ ಅವರಿಗೆ ನಾವು ಸಲ್ಲಿಸುವ ಪ್ರಾಮಾಣಿಕ ಗೌರವವಾಗಿದೆ” ಎಂದು ರಾಹುಲ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“76 ವರ್ಷಗಳ ಹಿಂದೆ, ಈ ದಿನ ದ್ವೇಷವನ್ನು ಹರಡುವ ಶಕ್ತಿಗಳು ಮಹಾತ್ಮ ಗಾಂಧಿಯನ್ನು ಹತ್ಯೆಗೈದವು. ಗಾಂಧಿಯವರ ಸ್ಮರಣಾರ್ಥ ಇಂದು ಬೆಳಗ್ಗೆ ಬಿಹಾರದ ಅರಾರಿಯಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಶಿಬಿರದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಗಾಂಧಿಯ ಜೀವಿತಾವಧಿಯಲ್ಲಿ ಅವರನ್ನು ವಿರೋಧಿಸಿದ, ನಿರಾಕರಿಸಿದ ಮತ್ತು ಅಂತಿಮವಾಗಿ ಅವರ ಹತ್ಯೆಗೆ ಸಂಚು ರೂಪಿಸಿದ್ದ ಸಿದ್ಧಾಂತ ಮತ್ತು ಅದಕ್ಕೆ ಬದ್ಧವಾಗಿರುವವರ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ, ಅವರು ತಮ್ಮ ಪರಂಪರೆಯನ್ನು ಸರಿ ಎಂದು ರುಜು ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ತಮ್ಮ ಎಕ್ಸ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ್ದಾರೆ.

ಸೋಮವಾರ ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ‘ಭಾರತ ಜೋಡೋ ನ್ಯಾಯ ಯಾತ್ರೆ’ ಪಶ್ಚಿಮ ಬಂಗಾಳದಲ್ಲಿ ಪೂರ್ಣಗೊಂಡು ಮಂಗಳವಾರ ಬಿಹಾರಕ್ಕೆ ಪ್ರವೇಶಿಸಿದೆ.

ಜನತಾದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಭಾಗವಾಗಿದ್ದ ‘ಮಹಾಘಟಬಂಧನ್’ ಮೈತ್ರಿಯನ್ನು ಕೈಬಿಟ್ಟು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿದ ಕೇವಲ ಎರಡು ದಿನಗಳ ನಂತರ ಬಿಹಾರಕ್ಕೆ ರಾಹುಲ್ ಯಾತ್ರೆ ಕಾಲಿಟ್ಟಿರುವುದು ಮಹತ್ವ ಪಡೆದುಕೊಂಡಿದೆ.

ಇಂದು (ಜ.30) ರಾಹುಲ್ ಯಾತ್ರೆಯು ಬಿಹಾರದ ಅರಾರಿಯಾ ಜಿಲ್ಲೆಯ ಅಂಬೇಡ್ಕರ್ ಚೌಕ್‌ನಿಂದ ಪ್ರಾರಂಭಗೊಂಡಿದೆ. ಮಹಾತ್ಮಾ ಗಾಂಧಿ ಹುತಾತ್ಮರಾದ 76 ನೇ ವರ್ಷದ ದಿನದ ಅಂಗವಾಗಿ ಇಂದು ಬೆಳಗ್ಗೆ ಅರಾರಿಯಾದ ಭಾರತ್ ಜೋಡೋ ನ್ಯಾಯ ಯಾತ್ರೆಯ ಶಿಬಿರದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...