Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...