Homeಮುಖಪುಟಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

- Advertisement -
- Advertisement -

ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಇಎಎಸ್ ಶರ್ಮಾ ಅವರು ಬಿಜೆಪಿಗೆ ಆಪ್ತರಾಗಿರುವ ನಿರ್ದೇಶಕರನ್ನು ಇವಿಎಂ ತಯಾರಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನ ಬೋರ್ಡ್‌ನಿಂದ ತೆಗೆದುಹಾಕುವಂತೆ ಒತ್ತಾಯಿಸಿ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದಾರೆ.

ಚುನಾವಣೆಯಲ್ಲಿ ಬಳಸಲಾಗುವ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ಚುನವಣಾ ಆಯೋಗದ ತಾಂತ್ರಿಕ ತಜ್ಞರ ಸಮಿತಿಯ ಮಾರ್ಗದರ್ಶನದಲ್ಲಿ ಬಿಇಎಲ್ ಮತ್ತು ಇಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಿಂದ ದೇಶೀಯವಾಗಿ ತಯಾರಿಸುತ್ತದೆ. ಇವಿಎಂಗಳಿಗಾಗಿ ಸಾಫ್ಟ್‌ವೇರ್‌ನ್ನು ಅಭಿವೃದ್ಧಿಪಡಿಸುವ ಬಿಇಎಲ್‌ ಮಂಡಳಿಯ ಸ್ವತಂತ್ರ ನಿರ್ದೇಶಕರ ಹುದ್ದೆಗೆ ಕನಿಷ್ಠ ನಾಲ್ವರು ಬಿಜೆಪಿ ನಾಮನಿರ್ದೇಶಿತರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂಬುದನ್ನು ಆಯೋಗದ ಗಮನಕ್ಕೆ ತಂದಿದ್ದೇನೆ ಎಂದು ಶರ್ಮಾ ಹೇಳಿದರು.

ಅವರ ಪತ್ರದಲ್ಲಿ, ಬಿಇಎಲ್‌ನ ವ್ಯವಹಾರಗಳನ್ನು ನಡೆಸುವಲ್ಲಿ ರಾಜಕೀಯ ಪಕ್ಷವಾಗಿ ಬಿಜೆಪಿ ಪ್ರಮುಖ ಪಾತ್ರವನ್ನು ಹೊಂದಿದೆ. ಇದು ಬಿಜೆಪಿ ಬಿಇಎಲ್‌ನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಈ ಎಂಟರ್‌ಪ್ರೈಸಸ್‌ಗಳು (CPSE) ಇವಿಎಂಗಳ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ನಾನು ಈ ಗೊಂದಲದ ಸಂಗತಿಯನ್ನು ECIಯ ಗಮನಕ್ಕೆ ತಂದಿದ್ದರೂ, ECI ಈ ಬಗ್ಗೆ ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಕಂಪನಿಯ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಸ್ವತಂತ್ರ ನಿರ್ದೇಶಕರು ಪ್ರಮುಖ ಪಾತ್ರ ವಹಿಸಬೇಕೆಂದು ಕಂಪನಿಗಳ ಕಾಯಿದೆ ಕಡ್ಡಾಯಗೊಳಿಸುತ್ತದೆ. ಒಟ್ಟು 7 ಸ್ವತಂತ್ರ ನಿರ್ದೇಶಕರಲ್ಲಿ ಕನಿಷ್ಠ ನಾಲ್ವರು ಅಂದರೆ ಮನ್ಸುಖ್ಭಾಯ್ ಶಮ್ಜಿಭಾಯಿ ಖಚರಿಯಾ, ಡಾ ಶಿವನಾಥ್ ಯಾದವ್, ಶ್ಯಾಮ ಸಿಂಗ್ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿ ಪಕ್ಷದ ಜೊತೆ ಸಂಪರ್ಕ ಹೊಂದಿದವಾರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಖಚರಿಯಾ ಅವರು ರಾಜ್‌ಕೋಟ್ ಜಿಲ್ಲೆಯಲ್ಲಿ ಬಿಜೆಪಿ ಅಧ್ಯಕ್ಷ ಹುದ್ದೆಯನ್ನು ಹೊಂದಿದ್ದರೆ, ಶಿವನಾಥ್ ಯಾದವ್ ಅವರು ಉತ್ತರ ಪ್ರದೇಶ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು. ಶ್ಯಾಮ ಸಿಂಗ್ ಬಿಹಾರದಲ್ಲಿ ಬಿಜೆಪಿಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಪಾರ್ಥಸಾರಥಿ ಆಂಧ್ರಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಉಸ್ತುವಾರಿಯಾಗಿದ್ದರು. ಬಿಜೆಪಿಯ ಪ್ರಮುಖ ಪದಾಧಿಕಾರಿಯೊಬ್ಬರು ‘ಸ್ವತಂತ್ರ’ ನಿರ್ದೇಶಕರಾಗಿ ಬಿಇಎಲ್‌ನ ಮಂಡಳಿಗೆ ನಾಮನಿರ್ದೇಶನಗೊಂಡಿರುವುದು ಆಯೋಗಕ್ಕೆ ಹೆಚ್ಚು ಆಕ್ಷೇಪಾರ್ಹವಲ್ಲವೇ? ಖಂಚಾರಿಯಾ ಅವರ ಜೊತೆಗೆ BELನ ಕನಿಷ್ಠ ಮೂರು ಸ್ವತಂತ್ರ ನಿರ್ದೇಶಕರು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಇವಿಎಂಗಳ ವಿರುದ್ಧ ಎತ್ತಿರುವ ಪ್ರಶ್ನೆಗಳನ್ನು ಪರಿಹರಿಸಲು ಇಸಿಐ ವಿಫಲವಾಗಿದೆ. ECI ಅದನ್ನು ಮೊಂಡುತನದಿಂದ ಸಮರ್ಥಿಸಿಕೊಳ್ಳುತ್ತಿದೆ. ಅನೇಕ ದೇಶಗಳು EVM ಗಳನ್ನು ಬಳಸುವುದನ್ನು ನಿಲ್ಲಿಸಿವೆ ಎಂದು ಶರ್ಮಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಇವಿಎಂ ಯಂತ್ರಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ ಎಂದು  ಡೆಮೊವನ್ನು ತೊರಿಸಿದ್ದರು. ಅವರು ತಾಂತ್ರಿಕ ತಜ್ಞ ಅತುಲ್ ಪಟೇಲ್ ಅವರ ಸಹಾಯದಿಂದ ಇವಿಎಂಗಳನ್ನು ಹೇಗೆ ಟ್ಯಾಂಪರಿಂಗ್ ಮಾಡಬಹುದು ಎಂಬುದರ ಡೆಮೊವನ್ನು ನಡೆಸಿದ್ದಾರೆ. ಯಂತ್ರದ ಅಸಮರ್ಪಕ ಕಾರ್ಯವನ್ನು ತೋರಿಸಲು ಪಟೇಲ್ ಒಂದು ಕಲ್ಲಂಗಡಿ ಚಿಹ್ನೆಗೆ ಎರಡು ಮತಗಳನ್ನು ಹಾಕಿದರು. ಯಂತ್ರದಲ್ಲಿ ಕಲ್ಲಂಗಡಿ ಗುಂಡಿಯನ್ನು ಒತ್ತಿದರೂ, VVPAT ಸ್ಲಿಪ್ ಸೇಬಿನ ಚಿಹ್ನೆಯನ್ನು ಹೊಂದಿತ್ತು. ECI ಈ ಆರೋಪಗಳನ್ನು ತಳ್ಳಿಹಾಕಿದೆ ಮತ್ತು EVMನ್ನು ಕಂಪ್ಯೂಟರ್‌ನಿಂದ ನಿಯಂತ್ರಿಸಲಾಗುವುದಿಲ್ಲ ಮತ್ತು ಬೇರೆ ಯಾವುದೇ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿಲ್ಲ, ಅದು ಹ್ಯಾಕ್ ಆಗುವುದನ್ನು ತಡೆಯುತ್ತದೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...