Homeಮುಖಪುಟಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

- Advertisement -
- Advertisement -

ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಇಎಎಸ್ ಶರ್ಮಾ ಅವರು ಬಿಜೆಪಿಗೆ ಆಪ್ತರಾಗಿರುವ ನಿರ್ದೇಶಕರನ್ನು ಇವಿಎಂ ತಯಾರಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನ ಬೋರ್ಡ್‌ನಿಂದ ತೆಗೆದುಹಾಕುವಂತೆ ಒತ್ತಾಯಿಸಿ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದಾರೆ.

ಚುನಾವಣೆಯಲ್ಲಿ ಬಳಸಲಾಗುವ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ಚುನವಣಾ ಆಯೋಗದ ತಾಂತ್ರಿಕ ತಜ್ಞರ ಸಮಿತಿಯ ಮಾರ್ಗದರ್ಶನದಲ್ಲಿ ಬಿಇಎಲ್ ಮತ್ತು ಇಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಿಂದ ದೇಶೀಯವಾಗಿ ತಯಾರಿಸುತ್ತದೆ. ಇವಿಎಂಗಳಿಗಾಗಿ ಸಾಫ್ಟ್‌ವೇರ್‌ನ್ನು ಅಭಿವೃದ್ಧಿಪಡಿಸುವ ಬಿಇಎಲ್‌ ಮಂಡಳಿಯ ಸ್ವತಂತ್ರ ನಿರ್ದೇಶಕರ ಹುದ್ದೆಗೆ ಕನಿಷ್ಠ ನಾಲ್ವರು ಬಿಜೆಪಿ ನಾಮನಿರ್ದೇಶಿತರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂಬುದನ್ನು ಆಯೋಗದ ಗಮನಕ್ಕೆ ತಂದಿದ್ದೇನೆ ಎಂದು ಶರ್ಮಾ ಹೇಳಿದರು.

ಅವರ ಪತ್ರದಲ್ಲಿ, ಬಿಇಎಲ್‌ನ ವ್ಯವಹಾರಗಳನ್ನು ನಡೆಸುವಲ್ಲಿ ರಾಜಕೀಯ ಪಕ್ಷವಾಗಿ ಬಿಜೆಪಿ ಪ್ರಮುಖ ಪಾತ್ರವನ್ನು ಹೊಂದಿದೆ. ಇದು ಬಿಜೆಪಿ ಬಿಇಎಲ್‌ನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಈ ಎಂಟರ್‌ಪ್ರೈಸಸ್‌ಗಳು (CPSE) ಇವಿಎಂಗಳ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ನಾನು ಈ ಗೊಂದಲದ ಸಂಗತಿಯನ್ನು ECIಯ ಗಮನಕ್ಕೆ ತಂದಿದ್ದರೂ, ECI ಈ ಬಗ್ಗೆ ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಕಂಪನಿಯ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಸ್ವತಂತ್ರ ನಿರ್ದೇಶಕರು ಪ್ರಮುಖ ಪಾತ್ರ ವಹಿಸಬೇಕೆಂದು ಕಂಪನಿಗಳ ಕಾಯಿದೆ ಕಡ್ಡಾಯಗೊಳಿಸುತ್ತದೆ. ಒಟ್ಟು 7 ಸ್ವತಂತ್ರ ನಿರ್ದೇಶಕರಲ್ಲಿ ಕನಿಷ್ಠ ನಾಲ್ವರು ಅಂದರೆ ಮನ್ಸುಖ್ಭಾಯ್ ಶಮ್ಜಿಭಾಯಿ ಖಚರಿಯಾ, ಡಾ ಶಿವನಾಥ್ ಯಾದವ್, ಶ್ಯಾಮ ಸಿಂಗ್ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿ ಪಕ್ಷದ ಜೊತೆ ಸಂಪರ್ಕ ಹೊಂದಿದವಾರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಖಚರಿಯಾ ಅವರು ರಾಜ್‌ಕೋಟ್ ಜಿಲ್ಲೆಯಲ್ಲಿ ಬಿಜೆಪಿ ಅಧ್ಯಕ್ಷ ಹುದ್ದೆಯನ್ನು ಹೊಂದಿದ್ದರೆ, ಶಿವನಾಥ್ ಯಾದವ್ ಅವರು ಉತ್ತರ ಪ್ರದೇಶ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು. ಶ್ಯಾಮ ಸಿಂಗ್ ಬಿಹಾರದಲ್ಲಿ ಬಿಜೆಪಿಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಮತ್ತು ಪಿವಿ ಪಾರ್ಥಸಾರಥಿ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಪಾರ್ಥಸಾರಥಿ ಆಂಧ್ರಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಉಸ್ತುವಾರಿಯಾಗಿದ್ದರು. ಬಿಜೆಪಿಯ ಪ್ರಮುಖ ಪದಾಧಿಕಾರಿಯೊಬ್ಬರು ‘ಸ್ವತಂತ್ರ’ ನಿರ್ದೇಶಕರಾಗಿ ಬಿಇಎಲ್‌ನ ಮಂಡಳಿಗೆ ನಾಮನಿರ್ದೇಶನಗೊಂಡಿರುವುದು ಆಯೋಗಕ್ಕೆ ಹೆಚ್ಚು ಆಕ್ಷೇಪಾರ್ಹವಲ್ಲವೇ? ಖಂಚಾರಿಯಾ ಅವರ ಜೊತೆಗೆ BELನ ಕನಿಷ್ಠ ಮೂರು ಸ್ವತಂತ್ರ ನಿರ್ದೇಶಕರು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಇವಿಎಂಗಳ ವಿರುದ್ಧ ಎತ್ತಿರುವ ಪ್ರಶ್ನೆಗಳನ್ನು ಪರಿಹರಿಸಲು ಇಸಿಐ ವಿಫಲವಾಗಿದೆ. ECI ಅದನ್ನು ಮೊಂಡುತನದಿಂದ ಸಮರ್ಥಿಸಿಕೊಳ್ಳುತ್ತಿದೆ. ಅನೇಕ ದೇಶಗಳು EVM ಗಳನ್ನು ಬಳಸುವುದನ್ನು ನಿಲ್ಲಿಸಿವೆ ಎಂದು ಶರ್ಮಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಇವಿಎಂ ಯಂತ್ರಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ ಎಂದು  ಡೆಮೊವನ್ನು ತೊರಿಸಿದ್ದರು. ಅವರು ತಾಂತ್ರಿಕ ತಜ್ಞ ಅತುಲ್ ಪಟೇಲ್ ಅವರ ಸಹಾಯದಿಂದ ಇವಿಎಂಗಳನ್ನು ಹೇಗೆ ಟ್ಯಾಂಪರಿಂಗ್ ಮಾಡಬಹುದು ಎಂಬುದರ ಡೆಮೊವನ್ನು ನಡೆಸಿದ್ದಾರೆ. ಯಂತ್ರದ ಅಸಮರ್ಪಕ ಕಾರ್ಯವನ್ನು ತೋರಿಸಲು ಪಟೇಲ್ ಒಂದು ಕಲ್ಲಂಗಡಿ ಚಿಹ್ನೆಗೆ ಎರಡು ಮತಗಳನ್ನು ಹಾಕಿದರು. ಯಂತ್ರದಲ್ಲಿ ಕಲ್ಲಂಗಡಿ ಗುಂಡಿಯನ್ನು ಒತ್ತಿದರೂ, VVPAT ಸ್ಲಿಪ್ ಸೇಬಿನ ಚಿಹ್ನೆಯನ್ನು ಹೊಂದಿತ್ತು. ECI ಈ ಆರೋಪಗಳನ್ನು ತಳ್ಳಿಹಾಕಿದೆ ಮತ್ತು EVMನ್ನು ಕಂಪ್ಯೂಟರ್‌ನಿಂದ ನಿಯಂತ್ರಿಸಲಾಗುವುದಿಲ್ಲ ಮತ್ತು ಬೇರೆ ಯಾವುದೇ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿಲ್ಲ, ಅದು ಹ್ಯಾಕ್ ಆಗುವುದನ್ನು ತಡೆಯುತ್ತದೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...