Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

- Advertisement -
- Advertisement -

‘ಚುನಾವಣಾ ಅಧಿಕಾರಿ ಫಲಿತಾಂಶ ಪ್ರಕಟಿಸಿದಾಗ, ಬಿಜೆಪಿ ವಿಜೇತ ಅಭ್ಯರ್ಥಿ ಓಡಿಬಂದು ಮೇಯರ್ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾರೆ. ಕೂಡಲೇ ಚುನಾವಣಾ ಅಧಿಕಾರಿಯು ತಾನು ತಿರಸ್ಕರಿಸಿದ ಮತಗಳನ್ನು ಸದಸ್ಯರ ಏಜೆಂಟಿಗೆ ತೋರಿಸದೆ ನಿರ್ಗಮಿಸಿದ್ದು, ಸ್ಥಳದಲ್ಲಿ ವಾದವಿವಾದ ಉಂಟಾಗಿದೆ’. ಇದಿಷ್ಟು ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆ ಸಂದರ್ಭದಲ್ಲಿ ಕಂಡುಬಂದ ಚಿತ್ರಣ. ಕಾಂಗ್ರೆಸ್-ಎಎಪಿ ಮೈತ್ರಿ ಪಕ್ಷವು 20 ಸದಸ್ಯರನ್ನು ಹೊಂದಿದ್ದರೂ, ಕೇವಲ 14 ಸದಸ್ಯರಿರುವ ಬಿಜೆಪಿ ಮೇಯರ್ ಸ್ಥಾನ ಪಡೆದುಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಪ್ರತಿಪಕ್ಷಗಳ ಆಕ್ರೋಶದ ನಡುವೆಯೆ ಬಿಜೆಪಿ ನಾಯಕ ಮನೋಜ್ ಸೋಂಕರ್ ಅವರು ಮಂಗಳವಾರ ಚಂಡೀಗಢ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 36 ಮತಗಳ ಪೈಕಿ ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಯಿತು. ಎಎಪಿ-ಕಾಂಗ್ರೆಸ್ ಗುಂಪು ಈ ವಿಷಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನಲ್ಲಿ ಪ್ರಶ್ನಿಸಲು ತೀರ್ಮಾನ ತೆಗೆದುಕೊಂಡಿವೆ.

36 ಮತಗಳಲ್ಲಿ ಸೋಂಕರ್ 16 ಮತಗಳನ್ನು ಪಡೆದು ಉನ್ನತ ಸ್ಥಾನವನ್ನು ಪಡೆದುಕೊಂಡರೆ, ಇಂಡಿಯಾ ಬ್ಲಾಕ್‌ನ ಎಎಪಿ ಅಭ್ಯರ್ಥಿ ಕುಲದೀಪ್ ಸಿಂಗ್ 12 ಮತಗಳನ್ನು ಪಡೆದರು. ವಿರೋಧ ಪಕ್ಷಗಳ ಎಂಟು ಮತಗಳನ್ನು ಚುನಾವಣಾ ಅಧಿಕಾರ ಅಮಾನ್ಯವೆಂದು ಘೋಷಿಸಿದರು. ಆದರೆ, ಅದಕ್ಕೆ ಕಾರಣ ತಿಳಿಸದೆ ಅಲ್ಲಿಂದ ನಿರ್ಗಮಿಸಿದರು.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್ 35 ಸದಸ್ಯರನ್ನು ಹೊಂದಿದೆ ಮತ್ತು ಮತದಾನದ ಹಕ್ಕು ಹೊಂದಿರುವ ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ. ಪ್ರಸ್ತುತ ಬಿಜೆಪಿ ಸಂಸದ ಕಿರಣ್ ಖೇರ್ ಅವರು ಈ ಹುದ್ದೆಯನ್ನು ಹೊಂದಿದ್ದಾರೆ. ಎಎಪಿ ಪ್ರಸ್ತುತ 13 ಕೌನ್ಸಿಲರ್‌ಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿದೆ. ಬಿಜೆಪಿ 14 ಸದಸ್ಯರು ಮತ್ತು ಶಿರೋಮಣಿ ಅಕಾಲಿದಳದ ಇಬ್ಬರು ಸದಸ್ಯರಿದ್ದಾರೆ.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೊದಲ ಬಾರಿಗೆ 36 ಮತಗಳಲ್ಲಿ ಎಂಟು ಅಸಿಂಧು ಎಂದು ಘೋಷಿಸಲಾಯಿತು. ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಕೂಟ 20 ಮತಗಳನ್ನು ಪಡೆಯಬೇಕಿತ್ತು. ನಮಗೆ 12 ಮತಗಳು ಬಂದಿದ್ದು, ಎಂಟು ಮತಗಳು ಅಸಿಂಧುವಾಗಿವೆ. ಬಿಜೆಪಿಯ ಒಂದು ಮತವೂ ಅಸಿಂಧು ಎಂದು ಘೋಷಣೆಯಾಗಿಲ್ಲ… ಮುಂಬರುವ 2024ರ ಚುನಾವಣೆಯಲ್ಲಿ ಏನಾಗುತ್ತದೋ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಬಿಜೆಪಿಯು ಇಂತಹ ಕೀಳು ಮಟ್ಟಕ್ಕೆ ಇಳಿದು ನಕಲಿ ಮತ್ತು ಅಕ್ರಮ ಎಸಗಲು ಸಾಧ್ಯವಾದರೆ… ಅದು ಯಾವುದೇ ಹಂತಕ್ಕೆ ಹೋಗಬಹುದು’ ಎಂದು ಆಪ್ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

‘ಇದು ದರೋಡೆ. ಚಂಡೀಗಢದಲ್ಲಿ 36 ಕೌನ್ಸಿಲರ್ ಸ್ಥಾನಗಳಿದ್ದು, ಅದರಲ್ಲಿ 14 ಸ್ಥಾನಗಳು ಬಿಜೆಪಿ. 13 ಸ್ಥಾನಗಳು ಎಎಪಿ ಮತ್ತು ಏಳು ಸ್ಥಾನಗಳು ಕಾಂಗ್ರೆಸ್. ಒಟ್ಟು ಎಎಪಿ (13 + 7) 20 ಸ್ಥಾನಗಳನ್ನು ಹೊಂದಿದೆ…ಬಿಜೆಪಿ ಬಣ್ಣ ಮತ್ತೆ ಬಹಿರಂಗವಾಗಿದೆ…” ಎಂದು ಪಕ್ಷದ ಸಹ ನಾಯಕ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು ಎಂದ ಬಿಜೆಪಿಗರು

ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕೇಸರಿ ಪಕ್ಷದ ನಾಯಕರು, “ಪ್ರಜಾಪ್ರಭುತ್ವದ ಗೆಲುವು ಮತ್ತು ಎಎಪಿ ಮತ್ತು ಕಾಂಗ್ರೆಸ್‌ನ ‘ತಗ್ಬಂಧನ್’ ಸೋಲು” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಇಂಡಿಯಾ ಬಣದ ಸೋಲು; ಅವರ ಅಂಕಗಣಿತವು ಕಾರ್ಯನಿರ್ವಹಿಸುತ್ತಿಲ್ಲ ಅಥವಾ ಅವರ ರಸಾಯನಶಾಸ್ತ್ರ ಕೆಲಸ ಮಾಡುತ್ತಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಲೇವಡಿ ಮಾಡಿದ್ದಾರೆ.

‘ಚಂಡೀಗಢ ಮೇಯರ್ ಚುನಾವಣೆಯಲ್ಲಿ ಹಗಲು ಹೊತ್ತಿನಲ್ಲಿ ಅಪ್ರಾಮಾಣಿಕತೆ ನಡೆಸಿರುವ ರೀತಿ ಅತ್ಯಂತ ಕಳವಳಕಾರಿಯಾಗಿದೆ. ಈ ಜನರು ಮೇಯರ್ ಚುನಾವಣೆಯಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿದರೆ, ದೇಶದ ಚುನಾವಣೆಯಲ್ಲಿ ಅವರು ಯಾವುದೇ ಮಟ್ಟಕ್ಕೆ ಹೋಗಬಹುದು. ಇದು ತುಂಬಾ ಕಳವಳಕಾರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ‘ಹಿರಿಯ ಅಧಿಕಾರಿಯೊಬ್ಬರು ಮತಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದು ಅವರ ಹಳೆಯ ಅಭ್ಯಾಸ

‘ಇಂದು ನಮ್ಮ ದೇಶದ ಪ್ರಜಾಪ್ರಭುತ್ವದಲ್ಲಿ “ಕಪ್ಪು ದಿನ” ಎಂದು ಬರೆಯಲಾಗುತ್ತದೆ. ದುರದೃಷ್ಟವಶಾತ್, ನಾವು ಗಣರಾಜ್ಯೋತ್ಸವವನ್ನು ಆಚರಿಸುವುದು ಇದೇ ತಿಂಗಳು. ಇಂದು ಸಂವಿಧಾನ ಛಿದ್ರಗೊಂಡಿದೆ. ಚಂಡೀಗಢ ಮೇಯರ್ ಚುನಾವಣೆಯನ್ನು ಬಿಜೆಪಿಯವರು ಮಾಧ್ಯಮಗಳ ಮುಂದೆ, ಕ್ಯಾಮರಾಗಳ ಮುಂದೆ ‘ಲೂಟಿ’ ಮಾಡಿದ ರೀತಿ. ಅವರು ಈ ಮೊದಲು ಮಧ್ಯಪ್ರದೇಶ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳಲ್ಲಿ ಇದನ್ನು ಮಾಡಿದರು. ಹಾಗಾಗಿ, ಇದು ಅವರ ಹಳೆಯ ಅಭ್ಯಾಸ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಕ್ರೋಶ ಹೊರಹಾಕಿದ್ದಾರೆ.

ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಬಿಜೆಪಿ ಮತ್ತು ಇಂಡಿಯಾ ಮೈತ್ರಿಕೂಟದ ನಡುವಿನ ಮೊದಲ ಪ್ರಮುಖ ಸ್ಪರ್ಧೆ ಎಂದು ಬಿಂಬಿಸಲಾಗಿದ್ದ ಆಘಾತಕಾರಿ ಹಿನ್ನಡೆಯ ನಂತರ, ಚಂಡೀಗಢದ ಮೇಯರ್ ಚುನಾವಣೆಗೆ ಎಎಪಿ ಅಭ್ಯರ್ಥಿ ಕ್ಯಾಮರಾಗಳ ಮುಂದೆ ಅಳಲು ತೋಡಿಕೊಂಡರು. ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದ ಕುಲದೀಪ್ ಕುಮಾರ್ ಅವರು ಬಿಜೆಪಿಯ ಮನೋಜ್ ಸೋಂಕರ್ ಅವರಿಂದ ಪರಾಭವಗೊಂಡಿದ್ದು, ಸುತ್ತಮುತ್ತಲಿನ ಜನರು ಅವರನ್ನು ಸಮಾಧಾನಪಡಿಸಿ ಘೋಷಣೆಗಳನ್ನು ಕೂಗುತ್ತಿದ್ದರೂ ಅವರು ಕಣ್ಣೀರು ಸುರಿಸುವುದನ್ನು ನಿಲ್ಲಿಸಲಿಲ್ಲ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...