Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

- Advertisement -
- Advertisement -

‘ಚುನಾವಣಾ ಅಧಿಕಾರಿ ಫಲಿತಾಂಶ ಪ್ರಕಟಿಸಿದಾಗ, ಬಿಜೆಪಿ ವಿಜೇತ ಅಭ್ಯರ್ಥಿ ಓಡಿಬಂದು ಮೇಯರ್ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾರೆ. ಕೂಡಲೇ ಚುನಾವಣಾ ಅಧಿಕಾರಿಯು ತಾನು ತಿರಸ್ಕರಿಸಿದ ಮತಗಳನ್ನು ಸದಸ್ಯರ ಏಜೆಂಟಿಗೆ ತೋರಿಸದೆ ನಿರ್ಗಮಿಸಿದ್ದು, ಸ್ಥಳದಲ್ಲಿ ವಾದವಿವಾದ ಉಂಟಾಗಿದೆ’. ಇದಿಷ್ಟು ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆ ಸಂದರ್ಭದಲ್ಲಿ ಕಂಡುಬಂದ ಚಿತ್ರಣ. ಕಾಂಗ್ರೆಸ್-ಎಎಪಿ ಮೈತ್ರಿ ಪಕ್ಷವು 20 ಸದಸ್ಯರನ್ನು ಹೊಂದಿದ್ದರೂ, ಕೇವಲ 14 ಸದಸ್ಯರಿರುವ ಬಿಜೆಪಿ ಮೇಯರ್ ಸ್ಥಾನ ಪಡೆದುಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಪ್ರತಿಪಕ್ಷಗಳ ಆಕ್ರೋಶದ ನಡುವೆಯೆ ಬಿಜೆಪಿ ನಾಯಕ ಮನೋಜ್ ಸೋಂಕರ್ ಅವರು ಮಂಗಳವಾರ ಚಂಡೀಗಢ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 36 ಮತಗಳ ಪೈಕಿ ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಯಿತು. ಎಎಪಿ-ಕಾಂಗ್ರೆಸ್ ಗುಂಪು ಈ ವಿಷಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನಲ್ಲಿ ಪ್ರಶ್ನಿಸಲು ತೀರ್ಮಾನ ತೆಗೆದುಕೊಂಡಿವೆ.

36 ಮತಗಳಲ್ಲಿ ಸೋಂಕರ್ 16 ಮತಗಳನ್ನು ಪಡೆದು ಉನ್ನತ ಸ್ಥಾನವನ್ನು ಪಡೆದುಕೊಂಡರೆ, ಇಂಡಿಯಾ ಬ್ಲಾಕ್‌ನ ಎಎಪಿ ಅಭ್ಯರ್ಥಿ ಕುಲದೀಪ್ ಸಿಂಗ್ 12 ಮತಗಳನ್ನು ಪಡೆದರು. ವಿರೋಧ ಪಕ್ಷಗಳ ಎಂಟು ಮತಗಳನ್ನು ಚುನಾವಣಾ ಅಧಿಕಾರ ಅಮಾನ್ಯವೆಂದು ಘೋಷಿಸಿದರು. ಆದರೆ, ಅದಕ್ಕೆ ಕಾರಣ ತಿಳಿಸದೆ ಅಲ್ಲಿಂದ ನಿರ್ಗಮಿಸಿದರು.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್ 35 ಸದಸ್ಯರನ್ನು ಹೊಂದಿದೆ ಮತ್ತು ಮತದಾನದ ಹಕ್ಕು ಹೊಂದಿರುವ ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ. ಪ್ರಸ್ತುತ ಬಿಜೆಪಿ ಸಂಸದ ಕಿರಣ್ ಖೇರ್ ಅವರು ಈ ಹುದ್ದೆಯನ್ನು ಹೊಂದಿದ್ದಾರೆ. ಎಎಪಿ ಪ್ರಸ್ತುತ 13 ಕೌನ್ಸಿಲರ್‌ಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿದೆ. ಬಿಜೆಪಿ 14 ಸದಸ್ಯರು ಮತ್ತು ಶಿರೋಮಣಿ ಅಕಾಲಿದಳದ ಇಬ್ಬರು ಸದಸ್ಯರಿದ್ದಾರೆ.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೊದಲ ಬಾರಿಗೆ 36 ಮತಗಳಲ್ಲಿ ಎಂಟು ಅಸಿಂಧು ಎಂದು ಘೋಷಿಸಲಾಯಿತು. ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಕೂಟ 20 ಮತಗಳನ್ನು ಪಡೆಯಬೇಕಿತ್ತು. ನಮಗೆ 12 ಮತಗಳು ಬಂದಿದ್ದು, ಎಂಟು ಮತಗಳು ಅಸಿಂಧುವಾಗಿವೆ. ಬಿಜೆಪಿಯ ಒಂದು ಮತವೂ ಅಸಿಂಧು ಎಂದು ಘೋಷಣೆಯಾಗಿಲ್ಲ… ಮುಂಬರುವ 2024ರ ಚುನಾವಣೆಯಲ್ಲಿ ಏನಾಗುತ್ತದೋ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಬಿಜೆಪಿಯು ಇಂತಹ ಕೀಳು ಮಟ್ಟಕ್ಕೆ ಇಳಿದು ನಕಲಿ ಮತ್ತು ಅಕ್ರಮ ಎಸಗಲು ಸಾಧ್ಯವಾದರೆ… ಅದು ಯಾವುದೇ ಹಂತಕ್ಕೆ ಹೋಗಬಹುದು’ ಎಂದು ಆಪ್ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

‘ಇದು ದರೋಡೆ. ಚಂಡೀಗಢದಲ್ಲಿ 36 ಕೌನ್ಸಿಲರ್ ಸ್ಥಾನಗಳಿದ್ದು, ಅದರಲ್ಲಿ 14 ಸ್ಥಾನಗಳು ಬಿಜೆಪಿ. 13 ಸ್ಥಾನಗಳು ಎಎಪಿ ಮತ್ತು ಏಳು ಸ್ಥಾನಗಳು ಕಾಂಗ್ರೆಸ್. ಒಟ್ಟು ಎಎಪಿ (13 + 7) 20 ಸ್ಥಾನಗಳನ್ನು ಹೊಂದಿದೆ…ಬಿಜೆಪಿ ಬಣ್ಣ ಮತ್ತೆ ಬಹಿರಂಗವಾಗಿದೆ…” ಎಂದು ಪಕ್ಷದ ಸಹ ನಾಯಕ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು ಎಂದ ಬಿಜೆಪಿಗರು

ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕೇಸರಿ ಪಕ್ಷದ ನಾಯಕರು, “ಪ್ರಜಾಪ್ರಭುತ್ವದ ಗೆಲುವು ಮತ್ತು ಎಎಪಿ ಮತ್ತು ಕಾಂಗ್ರೆಸ್‌ನ ‘ತಗ್ಬಂಧನ್’ ಸೋಲು” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಇಂಡಿಯಾ ಬಣದ ಸೋಲು; ಅವರ ಅಂಕಗಣಿತವು ಕಾರ್ಯನಿರ್ವಹಿಸುತ್ತಿಲ್ಲ ಅಥವಾ ಅವರ ರಸಾಯನಶಾಸ್ತ್ರ ಕೆಲಸ ಮಾಡುತ್ತಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಲೇವಡಿ ಮಾಡಿದ್ದಾರೆ.

‘ಚಂಡೀಗಢ ಮೇಯರ್ ಚುನಾವಣೆಯಲ್ಲಿ ಹಗಲು ಹೊತ್ತಿನಲ್ಲಿ ಅಪ್ರಾಮಾಣಿಕತೆ ನಡೆಸಿರುವ ರೀತಿ ಅತ್ಯಂತ ಕಳವಳಕಾರಿಯಾಗಿದೆ. ಈ ಜನರು ಮೇಯರ್ ಚುನಾವಣೆಯಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿದರೆ, ದೇಶದ ಚುನಾವಣೆಯಲ್ಲಿ ಅವರು ಯಾವುದೇ ಮಟ್ಟಕ್ಕೆ ಹೋಗಬಹುದು. ಇದು ತುಂಬಾ ಕಳವಳಕಾರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ‘ಹಿರಿಯ ಅಧಿಕಾರಿಯೊಬ್ಬರು ಮತಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದು ಅವರ ಹಳೆಯ ಅಭ್ಯಾಸ

‘ಇಂದು ನಮ್ಮ ದೇಶದ ಪ್ರಜಾಪ್ರಭುತ್ವದಲ್ಲಿ “ಕಪ್ಪು ದಿನ” ಎಂದು ಬರೆಯಲಾಗುತ್ತದೆ. ದುರದೃಷ್ಟವಶಾತ್, ನಾವು ಗಣರಾಜ್ಯೋತ್ಸವವನ್ನು ಆಚರಿಸುವುದು ಇದೇ ತಿಂಗಳು. ಇಂದು ಸಂವಿಧಾನ ಛಿದ್ರಗೊಂಡಿದೆ. ಚಂಡೀಗಢ ಮೇಯರ್ ಚುನಾವಣೆಯನ್ನು ಬಿಜೆಪಿಯವರು ಮಾಧ್ಯಮಗಳ ಮುಂದೆ, ಕ್ಯಾಮರಾಗಳ ಮುಂದೆ ‘ಲೂಟಿ’ ಮಾಡಿದ ರೀತಿ. ಅವರು ಈ ಮೊದಲು ಮಧ್ಯಪ್ರದೇಶ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳಲ್ಲಿ ಇದನ್ನು ಮಾಡಿದರು. ಹಾಗಾಗಿ, ಇದು ಅವರ ಹಳೆಯ ಅಭ್ಯಾಸ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಕ್ರೋಶ ಹೊರಹಾಕಿದ್ದಾರೆ.

ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಬಿಜೆಪಿ ಮತ್ತು ಇಂಡಿಯಾ ಮೈತ್ರಿಕೂಟದ ನಡುವಿನ ಮೊದಲ ಪ್ರಮುಖ ಸ್ಪರ್ಧೆ ಎಂದು ಬಿಂಬಿಸಲಾಗಿದ್ದ ಆಘಾತಕಾರಿ ಹಿನ್ನಡೆಯ ನಂತರ, ಚಂಡೀಗಢದ ಮೇಯರ್ ಚುನಾವಣೆಗೆ ಎಎಪಿ ಅಭ್ಯರ್ಥಿ ಕ್ಯಾಮರಾಗಳ ಮುಂದೆ ಅಳಲು ತೋಡಿಕೊಂಡರು. ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದ ಕುಲದೀಪ್ ಕುಮಾರ್ ಅವರು ಬಿಜೆಪಿಯ ಮನೋಜ್ ಸೋಂಕರ್ ಅವರಿಂದ ಪರಾಭವಗೊಂಡಿದ್ದು, ಸುತ್ತಮುತ್ತಲಿನ ಜನರು ಅವರನ್ನು ಸಮಾಧಾನಪಡಿಸಿ ಘೋಷಣೆಗಳನ್ನು ಕೂಗುತ್ತಿದ್ದರೂ ಅವರು ಕಣ್ಣೀರು ಸುರಿಸುವುದನ್ನು ನಿಲ್ಲಿಸಲಿಲ್ಲ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...