Homeಕರ್ನಾಟಕ'ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ...'; ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

‘ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ…’; ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

- Advertisement -
- Advertisement -

‘ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಮಾಧ್ಯಮದವರು ಕೇಳಿದಾಗ, ‘ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ ನೆಲೆ ಕಂಡುಕೊಳ್ಳಲು ಇವರಿಬ್ಬರಲ್ಲಿ ಯಾರು ಯಾರನ್ನು ನುಂಗುತ್ತಾರೋ ಗೊತ್ತಿಲ್ಲ’ ಎಂದರು.

ಮಂಡ್ಯದಲ್ಲಿ ಕೋಮು ಗಲಭೆ ಪ್ರಯೋಗ

‘ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ನಮ್ಮ ಭಾಗದ ಎಲ್ಲಾ ಜಾತಿ ಹಾಗೂ ಧರ್ಮದ ಜನರು ಬಹಳ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದರು. ನಮ್ಮ ಕಡೆ ಊರ ಹಬ್ಬ ಮಾಡುವಾಗ ಯಾವರೀತಿ ಮಾಡುತ್ತಾರೆ ಎಂದು ನೀವು ನೋಡಿದ್ದೀರಲ್ಲಾ? ಈಗ ಅವರು ಹೊಸ ಪ್ರಯೋಗ ಮಾಡುತ್ತಿದ್ದಾರೆ’ ಎಂದು ಮಂಡ್ಯದಲ್ಲಿ ಕೇಸರಿ ಧ್ವಜದ ಬಗ್ಗೆ ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದರು.

ಕೆರಗೋಡಿನಲ್ಲಿ ಕಾನೂನುಬಾಹಿರವಾಗಿ ಕೇಸರಿ ಧ್ವಜ ಹಾರಿಸಿರುವ ಬಗ್ಗೆ ಕೇಳಿದಾಗ, ‘ಪಂಚಾಯ್ತಿಯವರು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಮಾತ್ರ ಹಾರಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ರಾಷ್ಟ್ರ ಧ್ವಜ ಹಾಗೂ ಕನ್ನಡ ಬಾವುಟಕ್ಕೆ ಗೌರವ ನೀಡಬೇಕು. ಕನ್ನಡದಲ್ಲೇ ನಾಮಫಲಕ ಇರಬೇಕು ಎಂದೂ ನಾವು ಕಾನೂನು ಮಾಡಿದ್ದೇವೆ. ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದೆವು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಹುದಾಗಿತ್ತು. ಆದರೆ, ಅವರು ವಿಧಾನ ಮಂಡಲ ಅಧಿವೇಶನದಲ್ಲೇ ಜಾರಿ ಮಾಡಲು ಹೇಳಿದ್ದಾರೆ. ರಾಷ್ಟ್ರ ಧ್ವಜ, ಸಂವಿಧಾನಕ್ಕೆ ಏನು ಗೌರವ ನೀಡಬೇಕೋ ಆ ಗೌರವ ನೀಡುವುದು ನಮ್ಮ ಬದ್ಧತೆ. ಜನ ಎಲ್ಲವನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿಯವರು ಮನೆ-ಮನೆಗೆ ಹನುಮಧ್ವಜ ಹಂಚುವ ಬಗ್ಗೆ ಕೇಳಿದಾಗ, ‘ಬೇಡ ಎಂದು ಹೇಳಿದವರು ಯಾರು? ಬಿಜೆಪಿಯವರು ಹರ್ ಘರ್ ತಿರಂಗಾ ಎಂದು ಪ್ರಚಾರ ಮಾಡಿದ್ದರು. ಈಗ ಆ ತಿರಂಗಾವನ್ನು ಯಾಕೆ ಮರೆತಿದ್ದಾರೆ? ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ತಿರಂಗಾ ಬದಲಿಗೆ ಕೇಸರಿ ಧ್ವಜವನ್ನೇ ಕಾನೂನು ಮೂಲಕ ತರಲಿ, ಬೇಡ ಎಂದವರು ಯಾರು’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...