Homeಮುಖಪುಟದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS...

ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಇಡಿ ಸಮನ್ಸ್‌ ನೀಡಿದ್ದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಜಾಗೊಳಿಸುವಂತೆ ರಾಷ್ಟ್ರಪತಿಗೆ ಪತ್ರ ಬರೆದಿದ್ದ ತಮಿಳುನಾಡಿನ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯನ್ನು ನಿವೃತ್ತಿಗೆ ಒಂದು ದಿನ ಮೊದಲು ಕೇಂದ್ರ ಹಣಕಾಸು ಸಚಿವಾಲಯ ಅಮಾನತುಗೊಳಿಸಿದೆ.

ಮಂಗಳವಾರ ಹೊರಡಿಸಿದ ನೋಟಿಸ್‌ನಲ್ಲಿ, ಸಚಿವಾಲಯವು ಜಿಎಸ್‌ಟಿ ಮತ್ತು ಸೆಂಟ್ರಲ್ ಎಕ್ಸೈಸ್, ಚೆನ್ನೈ (ಉತ್ತರ) ಉಪ ಆಯುಕ್ತ ಬಿ ಬಾಲಮುರುಗನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಮತ್ತು ಸಕ್ಷಮ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಕೇಳಿಕೊಂಡಿದೆ.

ಬಾಲಮುರುಗನ್ ಅವರ ಅಮಾನತಿಗೆ ಯಾವುದೇ ಕಾರಣವನ್ನು ನೋಟಿಸ್ ಉಲ್ಲೇಖಿಸಿಲ್ಲವಾದರೂ, ಅವರು  ನಿವೃತ್ತರಾಗುವ ಎರಡು ದಿನಗಳ ಮೊದಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಬಾಲಮುರುಗನ್ ಅವರು ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಿರ್ಮಲಾ ಸೀತಾರಾಮನ್ ಅವರನ್ನು ವಜಾಗೊಳಿಸುವಂತೆ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದ ನಾಲ್ಕು ವಾರಗಳ ನಂತರ ಅಮಾನತು ಆದೇಶ ಹೊರಬಿದ್ದಿದೆ.

2020ರಲ್ಲಿ ತನ್ನ ಸಹೋದ್ಯೋಗಿಗಳು ಹಿಂದಿಯನ್ನು ಹೇರತ್ತಿದ್ದಾರೆ ಎಂದು ಆರೋಪಿಸಿ ಸುದ್ದಿಯಾಗಿದ್ದ ಬಾಲಮುರುಗನ್, ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದರು.

ಬಿಜೆಪಿ ನಾಯಕನ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದ ದಲಿತ ರೈತರಿಗೆ ಇಡಿ ನೊಟೀಸ್‌ ನೀಡಿರುವುದು ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುದನ್ನು ತೋರಿಸುತ್ತದೆ. ವಾಸ್ತವವಾಗಿ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಚೆನ್ನೈನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಉಪ ಆಯುಕ್ತ ಹುದ್ದೆಯಲ್ಲಿದ್ದ ಬಾಲಮುರುಗನ್, ನಿರ್ಮಲಾ ಅವರು ಈಡಿಯನ್ನು ಯಶಸ್ವಿಯಾಗಿ ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಹೇಳಿದ್ದರು. ನಿರ್ಮಲಾ ಸೀತಾರಾಮನ್‌ ಭಾರತದ ಹಣಕಾಸು ಸಚಿವರಾಗಲು ಅನರ್ಹರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಈ ಕುರಿತು ಮಾತನಾಡಿದ್ದ ಬಾಲಮುರುಗನ್,  ರಾಷ್ಟ್ರಪತಿಗಳಿಗೆ ಪತ್ರ ಕಳುಹಿಸಿರುವುದನ್ನು ದೃಢಪಡಿಸಿದ್ದರು ಮತ್ತು ತಾವು ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳುವ ಕಷ್ಟಗಳನ್ನು ತಿಳಿದಿದ್ದೇವೆ. ಇಡಿ ಅಧಿಕಾರಿ ಅಂಕಿತ್ ತಿವಾರಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿರುವುದು ವೈಯಕ್ತಿಕ ವಿಚಾರ. ರೈತರಿಗೆ ಸಮನ್ಸ್ ಕಳುಹಿಸುವುದು ವೈಯಕ್ತಿಕ ಕಾರ್ಯವಲ್ಲ. ಒಂದು ಸಂಸ್ಥೆಯನ್ನು ಭ್ರಷ್ಟಗೊಳಿಸಲಾಗುತ್ತಿದೆ. ಇಡಿ ಸಂಸ್ಥೆಗೆ ಹಾನಿಯಾಗಿದೆ ಮತ್ತು ಅದಕ್ಕಾಗಿಯೇ ನಾನು ಕೇಂದ್ರ ಹಣಕಾಸು ಸಚಿವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದೇನೆ. ಈ ಪತ್ರ ಬರೆಯುವುದರಿಂದ ಆಗುವ ದುಷ್ಪರಿಣಾಮಗಳು ನನಗೆ ಗೊತ್ತು, ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅದನ್ನು ಎದುರಿಸಲು ನಾನು ಸಿದ್ಧ ಎಂದು ಹೇಳಿದ್ದರು.

ಹಿನ್ನೆಲೆ:

ಸೇಲಂ ಜಿಲ್ಲೆಯ ಬಿಜೆಪಿ ನಾಯಕ ಗುಣಶೇಖರ್ ವಿರುದ್ದ ಜಮೀನು ಕಬಳಿಕೆ ಯತ್ನದ ವಿರುದ್ಧ ದೂರು ನೀಡಿದ್ದ ಅತ್ತೂರಿನ ದಲಿತ ಸಮುದಾಯದ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ಇಡಿ ಹಿಂಬಾಲಿಸಿದೆ. ಈ ರೈತರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದರು. ಇದೇ ಕಾರಣಕ್ಕೆ ಸಮನ್ಸ್‌ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದರು. ಇದಲ್ಲದೆ ಇಡಿ ಸಮನ್ಸ್‌ನಲ್ಲಿ ರೈತರ ಜಾತಿಯನ್ನು ‘ಹಿಂದೂ ಪಲ್ಲರ್‌ಸ್’ ಎಂದು ಉಲ್ಲೇಖಿಸಿತ್ತು. ಇದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿತ್ತು.

ಬಾಲಮುರಗನ್ ಅವರ ಪತ್ನಿ ದಲಿತ ಪ್ರವೀಣಾ ಇಬ್ಬರು ರೈತರನ್ನು ಪ್ರತಿನಿಧಿಸುವ ವಕೀಲರಾಗಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಬಾಲಮುರುಗನ್ ಅವರು, ಈ ಘಟನೆಯು ಜಾರಿ ನಿರ್ದೇಶನಾಲಯವು ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...