Homeಮುಖಪುಟಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

ಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ‘ಪರಾರಿಯಾಗಿದ್ದಾರೆ’ ಎಂದು ಮಂಗಳವಾರ ಜಾರಿ ನಿರ್ದೇಶನಾಲಯವು (ಇಡಿ) ಆರೋಪಿಸಿದೆ. ಆದರೆ, ಸಂಜೆ ಹೊತ್ತಿಗೆ ರಾಂಚಿಗೆ ತಲುಪಿದ ಸೊರೇನ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ನಡೆಸುವ ನಿಗದಿತ ವಿಚಾರಣೆಗೆ ಮುಂಚಿತವಾಗಿ ತಮ್ಮ ಪಕ್ಷ ಮತ್ತು ಮೈತ್ರಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದರು.

ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ರಾಂಚಿಯಲ್ಲಿ ಸೋರೆನ್ ಅವರನ್ನು ಪ್ರಶ್ನಿಸಲಿದೆ. ಆ ನಂತರ, ಅವರನ್ನು ಬಂಧಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೇಮಂತ್ ಸೊರೇನ್ ಅವರು ತಮ್ಮ ದಿಲ್ಲಿಯ ನಿವಾಸದಿಂದ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಡಿದ ನಂತರ, ಅವರ ಪತ್ನಿ ಕಲ್ಪನಾ ಸೊರೇನ್ ಅವರು ಜಾರ್ಖಂಡ್‌ನ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂಬ ಊಹಾಪೋಹಗಳು ಎದ್ದಿವೆ. ಸೋಮವಾರ ಇಡಿ ಪರಿಶೀಲನೆ ನಡೆಸಿದಾಗ ಸುಮಾರು 40 ಗಂಟೆಗಳ ಕಾಲ ಹೇಮಂತ್ ಸೋರೆನ್ ಅವರ ‘ನಾಪತ್ತೆ’ ಕುರಿತು ಭಾರಿ ಬೆಳವಣಿಗೆಗಳು ನಡೆದಿವೆ. ಕಲ್ಪನಾ ಸೊರೇನ್‌ರ ಸಂಭಾವ್ಯ ಹೆಸರು ಮುನ್ನಲೆಗೆ ಬಂದಿರುವುದು, ಬಿಹಾರದ ಲಾಲು ಪ್ರಸಾದ್ ಯಾದವ್ ಅವರ ಇದೇ ನಡೆಯನ್ನು ಪ್ರತಿಧ್ವನಿಸುತ್ತದೆ. ಅವರು ಬಂಧನಕ್ಕೆ ಒಳಗಾದಾಗ ಪತ್ನಿ ರಾಬ್ರಿ ದೇವಿ ಅವರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡಿದರು.

ತನಿಖಾ ಸಂಸ್ಥೆಯು ಜನವರಿ 20ರಂದು ಹೇಮಂತ್ ಸೊರೇನ್ ಅವರನ್ನು ಪ್ರಶ್ನಿಸಿತು. ನಂತರ, ಹೊಸ ಸಮನ್ಸ್ ನೀಡಿ, ಜನವರಿ 29 ಅಥವಾ ಜನವರಿ 31 ರಂದು ವಿಚಾರಣೆಗೆ ಅವರ ಲಭ್ಯತೆಯನ್ನು ಖಚಿತಪಡಿಸಲು ಕೇಳಿದೆ.

ಕಲ್ಪನಾ ಸೊರೆನ್ ಯಾರು?

ಕಲ್ಪನಾ ಸೊರೇನ್ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ ಮತ್ತು ಮೂಲತಃ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯವರು. 1976ನೇ ಇಸವಿಯಲ್ಲಿ ರಾಂಚಿಯಲ್ಲಿ ಜನಿಸಿದ ಕಲ್ಪನಾ ಸೊರೇನ್ ಎಂಜಿನಿಯರಿಂಗ್ ಮತ್ತು ಎಂಬಿಎ ಓದಿದ್ದಾರೆ. ಫೆಬ್ರವರಿ 7, 2006 ರಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ವಿವಾಹವಾದರು. ಅವರಿಗೆ ನಿಖಿಲ್ ಮತ್ತು ಅಂಶ್ ಎಂಬ ಇಬ್ಬರು ಮಕ್ಕಳಿದ್ದಾರೆ. ಕಲ್ಪನಾ ಅವರ ತಂದೆ ಉದ್ಯಮಿ ಮತ್ತು ತಾಯಿ ಗೃಹಿಣಿ. ಅವರು ವ್ಯಾಪಾರ ಮತ್ತು ಚಾರಿಟಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಲ್ಪನಾ ಸೊರೇನ್ ಅವರು ಶಾಲೆಯೊಂದನ್ನು ನಡೆಸುತ್ತಿದ್ದು, ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ಶಾಸಕಿ ಅಲ್ಲದ ಕಾರಣ, ಸಿಎಂ ಆಗಲು ಅವರ ಸ್ಥಾನವನ್ನು ಖಾಲಿ ಮಾಡಲು ಈಗಿನ ಶಾಸಕರ ಅಗತ್ಯವಿದೆ. ಹೇಮಂತ್ ಸೊರೇನ್ ಬಂಧನದ ವೇಳೆ ಪತ್ನಿ ಕಲ್ಪನಾ ಸೊರೇನ್ ಅವರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬ ಊಹಾಪೋಹಗಳು ದಟ್ಟವಾಗಿರುವುದರಿಂದ ಹೇಮಂತ್ ಸೋರೆನ್ ಅವರಿಗೆ ಮೈತ್ರಿಕೂಟದ ಶಾಸಕರು ಹೆಸರಿಲ್ಲದೆ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದಾರೆ.

ಬಿಜೆಪಿಯ ನಿಶಿಕಾಂತ್ ದುಬೆ ಪ್ರಕಾರ, ಕಲ್ಪನಾ ಸಿಎಂ ಆಗುವ ಪ್ರಸ್ತಾಪವನ್ನು ಹೇಮಂತ್ ಸಹೋದರ ಬಸಂತ್ ಸೊರೆನ್ ಮತ್ತು ಸೊಸೆ ಸೀತಾ ಸೊರೆನ್ ಒಪ್ಪಲಿಲ್ಲ ಎನ್ನಲಾಗಿದೆ.

ರಾಂಚಿಯಲ್ಲಿ ಮಂಗಳವಾರ ನಡೆದ ರಾಜ್ಯದ ಸಚಿವರು ಮತ್ತು ಪಕ್ಷದ ಶಾಸಕರ ಸಭೆಗಳಲ್ಲಿ ಕಲ್ಪನಾ ಸೊರೇನ್ ಉಪಸ್ಥಿತರಿದ್ದರು. ಹೇಮಂತ್ ಸೊರೆನ್ ದೆಹಲಿಯ ನಿವಾಸದಲ್ಲಿ ಇಡಿಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆ ಎಂಬ ಬಿಜೆಪಿ ಹೇಳಿಕೆಗಳ ನಡುವೆಯೇ ಈ ಸಭೆಗಳು ನಡೆದಿವೆ. ಹೇಮಂತ್ ಸೊರೇನ್ ದೆಹಲಿಯಿಂದ ರಾಂಚಿಗೆ ರಸ್ತೆ ಮಾರ್ಗವಾಗಿ ತಲುಪಿ ಎರಡು ಸಭೆಗಳನ್ನು ನಡೆಸಿದರು.

ಇದನ್ನೂ ಓದಿ; ಇಂದಿನಿಂದ ಸಂಸತ್ ಅಧಿವೇಶನ ಆರಂಭ; ನಾಳೆ ಮಂಧ್ಯಂತರ ಬಜೆಟ್ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...