Homeಕರ್ನಾಟಕಮಲ ಹೊರುವ ಪದ್ದತಿ: 47 ಪ್ರಕರಣಗಳು ದಾಖಲು, ಒಂದರಲ್ಲಿ ಮಾತ್ರ ಶಿಕ್ಷೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಮಲ ಹೊರುವ ಪದ್ದತಿ: 47 ಪ್ರಕರಣಗಳು ದಾಖಲು, ಒಂದರಲ್ಲಿ ಮಾತ್ರ ಶಿಕ್ಷೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

- Advertisement -
- Advertisement -

ರಾಜ್ಯದಲ್ಲಿ ಮಲ ಹೊರುವ ಪದ್ದತಿ ನಿಷೇಧವಿದ್ದರೂ, 1993ರಿಂದ ಇಲ್ಲಿವರೆಗೆ ಒಟ್ಟು 47 ಪ್ರಕರಣಗಳು ದಾಖಲಾಗಿದ್ದು, 92 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದೆ. ಅದೇ ರೀತಿ ಮಲಹೊರುವ ಜಾಡಮಾಲಿಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ -2013ರ ಉಲ್ಲಂಘನೆಯಡಿ 87 ಪ್ರಕರಣ ದಾಖಲಾಗಿದ್ದು, 6 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿರುವುದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಲ ಹೊರುವ ಜಾಡಮಾಲಿಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ -2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಎಐಸಿಸಿಟಿಯುನ ಕರ್ನಾಟಕ ಘಟಕ ಹಾಗೂ ಇದೇ ವಿಚಾರವಾಗಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಹಾಗೂ ರಾಜ್ಯದಲ್ಲಿ ಮಲ ಹೊರುವ ಪದ್ದತಿ ಜೀವಂತವಾಗಿರುವ ಕುರಿತು ಮಾಧ್ಯಮ ವರದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಒಟ್ಟಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ಜನವರಿ 8ರಂದು ಹೈಕೋರ್ಟ್ ನೀಡಿದ್ದ ನಿರ್ದೇಶನದಂತೆ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಎಸ್.ವಿ ಕಲಾವತಿ ಅವರ ಅನುಪಾಲನಾ ವರದಿಯನ್ನು ಸರ್ಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ನಿಷೇಧಿತ ಮಲಹೊರುವ ಪದ್ದತಿಯನ್ನು ನಿಯಂತ್ರಿಸಲು, ಮನುಷ್ಯರಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013ರ ಅನ್ನು ಸಮಪರ್ಕವಾಗಿ ಜಾರಿಗೊಳಿಸಲು ಹಾಗೂ ಶೌಚ ಗುಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡ ವೇಳೆ ಸಾವನ್ನಪ್ಪಿದವರ ಕುಟುಂಬದ ಸದಸ್ಯರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ವಿವಿಧ ಇಲಾಖೆಗಳು ಕೈಗೊಂಡ ಕ್ರಮಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ತಿಳಿಸಿದೆ.

ವರದಿಯನ್ನು ದಾಖಲಿಸಿಕೊಂಡ ಪೀಠವು, ರಾಜ್ಯ ಸರ್ಕಾರ ಗಣನೀಯ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಆದರೆ, ಪರಿಹಾರದ ವಿಚಾರದಲ್ಲಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟು, ಸರ್ಕಾರದ ವರದಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ.

ವರದಿಯಲ್ಲಿ ಏನಿದೆ?

ರಾಜ್ಯದಲ್ಲಿ 1993ರಿಂದ ಇಲ್ಲಿವರೆಗೆ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ 47 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 92 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 15 ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗಿದೆ. ಒಟ್ಟು 47 ಪ್ರಕರಣಗಳಲ್ಲಿ 15 ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. 2 ಪ್ರಕರಣಗಳಲ್ಲಿ ವರದಿ ಬಾಕಿ ಇದೆ. 4 ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಸಲಾಗಿದೆ. 22 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಸರ್ಕಾರ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

2013ರಿಂದು ಇಲ್ಲಿಯ ತನಕ ಮಲಹೊರುವ ಜಾಡಮಾಲಿಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ -2013ರ ಅಡಿ 87 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 11 ಪ್ರಕರಣಗಳನ್ನು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗಿದೆ. 28 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದ್ದು, 6 ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ. 21 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ. 11 ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, 22 ಪ್ರಕರಣಗಳು ಸುಳ್ಳು ಪ್ರಕರಣಗಳಾಗಿವೆ ಎಂದು ವರದಿಯಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...