Homeಮುಖಪುಟದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ದೇವಾಲಯಗಳಲ್ಲಿ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನಿರ್ದೇಶನ ನೀಡಿದ್ದು, ಹಿಂದೂಗಳಿಗೆ ಕೂಡ ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕು ಇದೆ ಎಂದು ಹೇಳಿದೆ.

ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಅರ್ಜಿದಾರರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಬೋರ್ಡ್‌ಗಳನ್ನು ಅಳವಡಿಸುವಂತೆ ಕೂಡ ಆಗ್ರಹಿಸಿದ್ದರು.

ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಮುರುಗನ್ ದೇವಾಲಯವಿದೆ. ತಮಿಳುನಾಡು ಸರ್ಕಾರದ ಪರವಾಗಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಧಾರ್ಮಿಕ ದತ್ತಿ ಇಲಾಖೆ, ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮತ್ತು ಪಳನಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿವಾದಿಗಳಾಗಿದ್ದರು.

ಈ ಕುರಿತ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಲಾಗಿದೆ. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಕ್ಕೆ ಭೇಟಿ ಮಾಡುವುದಾಗಿ ಹೇಳಿಕೊಂಡರೆ, ಅಂತಹ ವ್ಯಕ್ತಿಯಿಂದ ನನಗೆ ಹಿಂದೂ ಧರ್ಮದ ಪದ್ಧತಿ ಹಾಗೂ ಸಂಪ್ರದಾಯಗಳ ಬಗ್ಗೆ ನಂಬಿಕೆ ಇದೆ ಹಾಗೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಚ್ಚಳಿಕೆ ಬರೆಸಬೇಕು ಎಂದೂ ನ್ಯಾಯಾಲಯವು ಸೂಚಿಸಿದೆ. ಅಂತಹ ವ್ಯಕ್ತಿಯನ್ನು ಅನುಮತಿಸಿದಾಗ ಅದನ್ನು ದೇವಸ್ಥಾನವು ನಿರ್ವಹಿಸುವ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಕೋರ್ಟ್‌ ಹೇಳಿದೆ.

ಪ್ರತಿವಾದಿಗಳು ಸಲ್ಲಿಸಿದ ರಿಟ್ ಅರ್ಜಿಯನ್ನು ಪಳನಿ ದೇವಸ್ಥಾನಕ್ಕೆ ಮಾತ್ರ ಸಲ್ಲಿಸಲಾಗಿದೆ ಮತ್ತು ಆದೇಶವನ್ನು ಅದಕ್ಕೆ ಸೀಮಿತಗೊಳಿಸಬೇಕು, ಆದರೆ ಎತ್ತಿರುವ ವಿಷಯವು ದೊಡ್ಡ ವಿಷಯವಾಗಿದೆ ಮತ್ತು ಅದೇ ಎಲ್ಲಾ ಹಿಂದೂ ದೇವಾಲಯಗಳಿಗೆ ಅನ್ವಯಿಸಬೇಕು, ಸೂಚಿಸಲಾಗಿರುವ ಈ ನಿರ್ಬಂಧಗಳು ಸಮಾಜದಲ್ಲಿನ ವಿವಿಧ ಧರ್ಮಗಳ ನಡುವಿನ ಕೋಮು ಸೌಹಾರ್ದತೆ ಹಾಗೂ ಶಾಂತಿ ಉಳಿಯುವುದನ್ನು ಖಾತರಿ ಪಡಿಸಲಿವೆ. ಹೀಗಾಗಿ ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ, ಪ್ರತಿವಾದಿಗಳು ಹಾಗೂ ದೇವಾಲಯಗಳ ಆಡಳಿತದಲ್ಲಿ ಭಾಗಿಯಾಗಿರುವ ಎಲ್ಲರೂ ಈ ನಿರ್ದೇಶನವನ್ನು ಎಲ್ಲ ಹಿಂದೂ ದೇವಾಲಯಗಳಲ್ಲಿ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇತರ ಧರ್ಮಿಯರಿಗೆ ಸೇರಿದ ಜನರು ಅವರ ಧರ್ಮವನ್ನು ಆಚರಿಸಲು ಹಕ್ಕನ್ನು ಹೊಂದಿದ್ದಾರೆ.  ಅವರ ಧರ್ಮದ ಸಂಪ್ರದಾಯಗಳು ಮತ್ತು ಆಚರಣೆಗಳು ಮಧ್ಯಪ್ರವೇಶಿಸುವಂತಿಲ್ಲ ಮತ್ತು ಯಾವುದೇ ಹಸ್ತಕ್ಷೇಪವನ್ನು ಮಾಡುವಂತಿಲ್ಲ. ದೇವಾಲಯವು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಲ್ಲ. ತಂಜಾವೂರಿನ ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನಕ್ಕೆ ಇತರ ಧರ್ಮದ ಜನರು ದೇವಾಲಯದ ವಾಸ್ತುಶಿಲ್ಪಗಳನ್ನು ವೀಕ್ಷಿಸಲು ಬರುತ್ತಾರೆ. ವಾಸ್ತುಶಿಲ್ಪದ ಸ್ಮಾರಕಗಳನ್ನು ವೀಕ್ಷಿಸಲು ಬರುವ ಜನರು ಆವರಣವನ್ನು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಾಗಿ ಬಳಸುವಂತಿಲ್ಲ ಮತ್ತು ದೇವಾಲಯಗಳ ಆವರಣವನ್ನು ಗೌರವದಿಂದ ಕಾಣಬೇಕು ಎಂದು ಹೇಳಿದೆ.

ಹಿಂದೂಯೇತರರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಹೇಳಲಾದ ಘಟನೆಯೊಂದನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನದಲ್ಲಿ ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ದೇವಸ್ಥಾನದ ಆವರಣವನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ ಮತ್ತು ದೇವಾಲಯದ ಆವರಣದಲ್ಲಿ ಮಾಂಸಾಹಾರವನ್ನು ಸೇವಿಸಿದೆ ಎಂದು ಇತ್ತೀಚೆಗೆ ಪತ್ರಿಕೆಯೊಂದು ವರದಿ ಮಾಡಿದೆ. ಈ ಘಟನೆಗಳು ಸಂವಿಧಾನದ ಅಡಿಯಲ್ಲಿ ಹಿಂದೂಗಳಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳಿಗೆ ಸಂಪೂರ್ಣವಾಗಿ ಅಡ್ಡಿಪಡಿಸುತ್ತಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನು ಓದಿ: ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...