Homeಮುಖಪುಟಕುಸ್ತಿಪಟುಗಳಿಗೆ ನಕಲಿ ಪ್ರಮಾಣಪತ್ರ ನೀಡಿದ WFIನಿಂದ ಅಮಾನತುಗೊಂಡಿದ್ದ ಸಂಜಯ್‌ ಸಿಂಗ್‌: ಸಾಕ್ಷಿ ಮಲಿಕ್‌ ಆರೋಪ

ಕುಸ್ತಿಪಟುಗಳಿಗೆ ನಕಲಿ ಪ್ರಮಾಣಪತ್ರ ನೀಡಿದ WFIನಿಂದ ಅಮಾನತುಗೊಂಡಿದ್ದ ಸಂಜಯ್‌ ಸಿಂಗ್‌: ಸಾಕ್ಷಿ ಮಲಿಕ್‌ ಆರೋಪ

- Advertisement -
- Advertisement -

ಸಂಜಯ್ ಸಿಂಗ್ ಬಣ ಪುಣೆಯಲ್ಲಿ ಆಯೋಜಿಸಿದ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕುಸ್ತಿಪಟುಗಳಿಗೆ ನಕಲಿ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಅಮಾನತುಗೊಂಡಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಸಂಜಯ್ ಸಿಂಗ್ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಸಾಕ್ಷಿ ಮಲಿಕ್‌ ಅವರು ಅವರು ಸಾಮಾಜಿಕ ಮಾದ್ಯಮ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಭಾರ ಎತ್ತುವ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಕುಸ್ತಿಪಟುಗೆ ನಕಲಿ ಪ್ರಮಾಣಪತ್ರವನ್ನು ನೀಡಲಾಗಿದೆ. ಪ್ರಮಾಣಪತ್ರದಲ್ಲಿ ಕುಸ್ತಿಪಟುವಿನ ಹುಟ್ಟಿದ ವರ್ಷ 2023 ಆಗಿತ್ತು ಎಂದು ಉಲ್ಲೇಖಿಸಿದ್ದಾರೆ.

ಅಮಾನತುಗೊಂಡಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಪುಣೆಯಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗಳನ್ನು ಹೇಗೆ ಆಯೋಜಿಸುತ್ತದೆ ಎಂದು ಪ್ರಶ್ನಿಸಿದ ಸಾಕ್ಷಿ ಮಲಿಕ್, ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ನೇಮಿಸಿದ ತಾತ್ಕಾಲಿಕ ಸಮಿತಿಯು ಫೆಬ್ರವರಿಯಲ್ಲಿ ರಾಷ್ಟ್ರೀಯ ಕುಸ್ತಿ ಪಂದ್ಯವನ್ನು  ಜೈಪುರದಲ್ಲಿ ನಿಗದಿಪಡಿಸಿದೆ. ಈ ಮಧ್ಯೆ ಸಂಜಯ್‌ ಸಿಂಗ್‌ ಪಂದ್ಯ ಆಯೋಜಿಸಿದ್ದು, ಯುವ ಕುಸ್ತಿಪಟುಗಳ ಭವಿಷ್ಯವು ಅಪಾಯದಲ್ಲಿದೆ. ಈ ಸಮಸ್ಯೆಯನ್ನು ಪರಿಶೀಲಿಸುವಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಸಾಕ್ಷಿ ಮಲಿಕ್‌ ಆಗ್ರಹಿಸಿದ್ದಾರೆ.

ಭಾರತ ಸರ್ಕಾರವು ಬ್ರಿಜ್ ಭೂಷಣ್ ಅವರ ಸಹವರ್ತಿ ಸಂಜಯ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದಿಂದ ಅಮಾನತುಗೊಳಿಸಿದೆ, ಆದರೂ ಸಂಜಯ್ ಸಿಂಗ್ ಅವರು ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್ ಪಂದ್ಯಾಟ ನಡೆಸುತ್ತಿದ್ದಾರೆ ಮತ್ತು ಆಟಗಾರರಿಗೆ ನಕಲಿ ಪ್ರಮಾಣಪತ್ರಗಳನ್ನು ವಿತರಿಸುತ್ತಿದ್ದಾರೆ. ಇದು ಕಾನೂನುಬಾಹಿರವಾಗಿದೆ. ಕ್ರೀಡ ಸಚಿವಾಲಯ ಆಯೋಜಿಸಿದ್ದ ಕುಸ್ತಿ ರಾಷ್ಟ್ರೀಯ ಚಾಂಪಿಯನ್‌ಶಿಪ್ ಪಂದ್ಯವು ಜೈಪುರದಲ್ಲಿ ನಡೆಯಲಿದೆ. ಆದರೆ ಸಂಜಯ್ ಸಿಂಗ್ ಕಾನೂನುಬಾಹಿರವಾಗಿ ವಿವಿಧ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳ ಪ್ರಮಾಣಪತ್ರಗಳಿಗೆ ಸಹಿ ಮಾಡಿ ವಿತರಿಸುತ್ತಿದ್ದಾರೆ ಎಂದು ಸಾಕ್ಷಿ ಮಲಿಕ್ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಂಸ್ಥೆಯಿಂದ ಅಮಾನತಗೊಂಡಿರುವ ವ್ಯಕ್ತಿ ಸಂಸ್ಥೆಯ ಹಣವನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಾರೆ? ನಾಳೆ ಆಟಗಾರರು ಈ ಪ್ರಮಾಣಪತ್ರಗಳೊಂದಿಗೆ ಕೆಲಸ ಕೇಳಲು ಹೋದಾಗ, ಬಡ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ, ಆದರೆ ಇದರಲ್ಲಿ ಆಟಗಾರರ ಯಾವುದೇ ತಪ್ಪಿಲ್ಲ. ಇಂತಹ ವಂಚನೆ ಮಾಡುತ್ತಿರುವ ಸಂಜಯ್ ಸಿಂಗ್ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು, ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಜಿ ಅವರಲ್ಲಿ ಈ ಸಮಸ್ಯೆಯನ್ನು ಪರಿಶೀಲಿಸಿ ಆಟಗಾರರ ಭವಿಷ್ಯವನ್ನು ಉಳಿಸಲು ಮನವಿ ಮಾಡುತ್ತೇನೆ ಎಂದು ಸಾಕ್ಷಿ ಮಲಿಕ್‌ ಹೇಳಿದ್ದಾರೆ.

ಭೂಪೇಂದ್ರ ಸಿಂಗ್ ಬಾಜ್ವಾ ನೇತೃತ್ವದ ತಾತ್ಕಾಲಿಕ ಸಂಸ್ಥೆಯು ಫೆಬ್ರವರಿ 2-5 ರಿಂದ ಜೈಪುರದಲ್ಲಿ ಪ್ರತ್ಯೇಕ ಹಿರಿಯರ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನ್ನು ಆಯೋಜಿಸಲಿದೆ. ಸಂಜಯ್ ಸಿಂಗ್ ನೇತೃತ್ವದ ಬಣವು ಪುಣೆಯಲ್ಲಿ ಆಯೋಜಿಸುವ ಕುಸ್ತಿ ಸ್ಪರ್ಧೆಗೆ ಮಾನ್ಯತೆ ಇಲ್ಲ. WFIನ ಅಧಿಕೃತ ಸಹಿ, ಲೆಟರ್‌ ಹೆಡ್‌ಗಳನ್ನು ಬಳಸದಂತೆ ಕೂಡ ಸಂಜಯ್‌ ಸಿಂಗ್‌ಗೆ ಈ ಹಿಂದೆ ಕ್ರೀಡಾ ಸಚಿವಾಲಯ ತಿಳಿಸಿತ್ತು. ಭಾರತೀಯ ಕುಸ್ತಿ ಫೆಡರೇಶನ್‌ಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಮತ್ತು WFIನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್‌ನ್ನು ಕುಸ್ತಿ ಫೆಡರೇಶನ್‌ ಮುಖ್ಯಸ್ಥರಾಗಿ ನೇಮಿಸಿರುವುದಕ್ಕೆ ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಸಂಜಯ್ ಸಿಂಗ್‌ ನೇತೃತ್ವದ ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತು ಮಾಡಿತ್ತು.

ಇದನ್ನು ಓದಿ; ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...