Homeಮುಖಪುಟಕುಸ್ತಿಪಟುಗಳಿಗೆ ನಕಲಿ ಪ್ರಮಾಣಪತ್ರ ನೀಡಿದ WFIನಿಂದ ಅಮಾನತುಗೊಂಡಿದ್ದ ಸಂಜಯ್‌ ಸಿಂಗ್‌: ಸಾಕ್ಷಿ ಮಲಿಕ್‌ ಆರೋಪ

ಕುಸ್ತಿಪಟುಗಳಿಗೆ ನಕಲಿ ಪ್ರಮಾಣಪತ್ರ ನೀಡಿದ WFIನಿಂದ ಅಮಾನತುಗೊಂಡಿದ್ದ ಸಂಜಯ್‌ ಸಿಂಗ್‌: ಸಾಕ್ಷಿ ಮಲಿಕ್‌ ಆರೋಪ

- Advertisement -
- Advertisement -

ಸಂಜಯ್ ಸಿಂಗ್ ಬಣ ಪುಣೆಯಲ್ಲಿ ಆಯೋಜಿಸಿದ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕುಸ್ತಿಪಟುಗಳಿಗೆ ನಕಲಿ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಅಮಾನತುಗೊಂಡಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಸಂಜಯ್ ಸಿಂಗ್ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಸಾಕ್ಷಿ ಮಲಿಕ್‌ ಅವರು ಅವರು ಸಾಮಾಜಿಕ ಮಾದ್ಯಮ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಭಾರ ಎತ್ತುವ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಕುಸ್ತಿಪಟುಗೆ ನಕಲಿ ಪ್ರಮಾಣಪತ್ರವನ್ನು ನೀಡಲಾಗಿದೆ. ಪ್ರಮಾಣಪತ್ರದಲ್ಲಿ ಕುಸ್ತಿಪಟುವಿನ ಹುಟ್ಟಿದ ವರ್ಷ 2023 ಆಗಿತ್ತು ಎಂದು ಉಲ್ಲೇಖಿಸಿದ್ದಾರೆ.

ಅಮಾನತುಗೊಂಡಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಪುಣೆಯಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗಳನ್ನು ಹೇಗೆ ಆಯೋಜಿಸುತ್ತದೆ ಎಂದು ಪ್ರಶ್ನಿಸಿದ ಸಾಕ್ಷಿ ಮಲಿಕ್, ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ನೇಮಿಸಿದ ತಾತ್ಕಾಲಿಕ ಸಮಿತಿಯು ಫೆಬ್ರವರಿಯಲ್ಲಿ ರಾಷ್ಟ್ರೀಯ ಕುಸ್ತಿ ಪಂದ್ಯವನ್ನು  ಜೈಪುರದಲ್ಲಿ ನಿಗದಿಪಡಿಸಿದೆ. ಈ ಮಧ್ಯೆ ಸಂಜಯ್‌ ಸಿಂಗ್‌ ಪಂದ್ಯ ಆಯೋಜಿಸಿದ್ದು, ಯುವ ಕುಸ್ತಿಪಟುಗಳ ಭವಿಷ್ಯವು ಅಪಾಯದಲ್ಲಿದೆ. ಈ ಸಮಸ್ಯೆಯನ್ನು ಪರಿಶೀಲಿಸುವಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಸಾಕ್ಷಿ ಮಲಿಕ್‌ ಆಗ್ರಹಿಸಿದ್ದಾರೆ.

ಭಾರತ ಸರ್ಕಾರವು ಬ್ರಿಜ್ ಭೂಷಣ್ ಅವರ ಸಹವರ್ತಿ ಸಂಜಯ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದಿಂದ ಅಮಾನತುಗೊಳಿಸಿದೆ, ಆದರೂ ಸಂಜಯ್ ಸಿಂಗ್ ಅವರು ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್ ಪಂದ್ಯಾಟ ನಡೆಸುತ್ತಿದ್ದಾರೆ ಮತ್ತು ಆಟಗಾರರಿಗೆ ನಕಲಿ ಪ್ರಮಾಣಪತ್ರಗಳನ್ನು ವಿತರಿಸುತ್ತಿದ್ದಾರೆ. ಇದು ಕಾನೂನುಬಾಹಿರವಾಗಿದೆ. ಕ್ರೀಡ ಸಚಿವಾಲಯ ಆಯೋಜಿಸಿದ್ದ ಕುಸ್ತಿ ರಾಷ್ಟ್ರೀಯ ಚಾಂಪಿಯನ್‌ಶಿಪ್ ಪಂದ್ಯವು ಜೈಪುರದಲ್ಲಿ ನಡೆಯಲಿದೆ. ಆದರೆ ಸಂಜಯ್ ಸಿಂಗ್ ಕಾನೂನುಬಾಹಿರವಾಗಿ ವಿವಿಧ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳ ಪ್ರಮಾಣಪತ್ರಗಳಿಗೆ ಸಹಿ ಮಾಡಿ ವಿತರಿಸುತ್ತಿದ್ದಾರೆ ಎಂದು ಸಾಕ್ಷಿ ಮಲಿಕ್ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಂಸ್ಥೆಯಿಂದ ಅಮಾನತಗೊಂಡಿರುವ ವ್ಯಕ್ತಿ ಸಂಸ್ಥೆಯ ಹಣವನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಾರೆ? ನಾಳೆ ಆಟಗಾರರು ಈ ಪ್ರಮಾಣಪತ್ರಗಳೊಂದಿಗೆ ಕೆಲಸ ಕೇಳಲು ಹೋದಾಗ, ಬಡ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ, ಆದರೆ ಇದರಲ್ಲಿ ಆಟಗಾರರ ಯಾವುದೇ ತಪ್ಪಿಲ್ಲ. ಇಂತಹ ವಂಚನೆ ಮಾಡುತ್ತಿರುವ ಸಂಜಯ್ ಸಿಂಗ್ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು, ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಜಿ ಅವರಲ್ಲಿ ಈ ಸಮಸ್ಯೆಯನ್ನು ಪರಿಶೀಲಿಸಿ ಆಟಗಾರರ ಭವಿಷ್ಯವನ್ನು ಉಳಿಸಲು ಮನವಿ ಮಾಡುತ್ತೇನೆ ಎಂದು ಸಾಕ್ಷಿ ಮಲಿಕ್‌ ಹೇಳಿದ್ದಾರೆ.

ಭೂಪೇಂದ್ರ ಸಿಂಗ್ ಬಾಜ್ವಾ ನೇತೃತ್ವದ ತಾತ್ಕಾಲಿಕ ಸಂಸ್ಥೆಯು ಫೆಬ್ರವರಿ 2-5 ರಿಂದ ಜೈಪುರದಲ್ಲಿ ಪ್ರತ್ಯೇಕ ಹಿರಿಯರ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನ್ನು ಆಯೋಜಿಸಲಿದೆ. ಸಂಜಯ್ ಸಿಂಗ್ ನೇತೃತ್ವದ ಬಣವು ಪುಣೆಯಲ್ಲಿ ಆಯೋಜಿಸುವ ಕುಸ್ತಿ ಸ್ಪರ್ಧೆಗೆ ಮಾನ್ಯತೆ ಇಲ್ಲ. WFIನ ಅಧಿಕೃತ ಸಹಿ, ಲೆಟರ್‌ ಹೆಡ್‌ಗಳನ್ನು ಬಳಸದಂತೆ ಕೂಡ ಸಂಜಯ್‌ ಸಿಂಗ್‌ಗೆ ಈ ಹಿಂದೆ ಕ್ರೀಡಾ ಸಚಿವಾಲಯ ತಿಳಿಸಿತ್ತು. ಭಾರತೀಯ ಕುಸ್ತಿ ಫೆಡರೇಶನ್‌ಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಮತ್ತು WFIನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್‌ನ್ನು ಕುಸ್ತಿ ಫೆಡರೇಶನ್‌ ಮುಖ್ಯಸ್ಥರಾಗಿ ನೇಮಿಸಿರುವುದಕ್ಕೆ ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಸಂಜಯ್ ಸಿಂಗ್‌ ನೇತೃತ್ವದ ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತು ಮಾಡಿತ್ತು.

ಇದನ್ನು ಓದಿ; ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...