Homeಮುಖಪುಟಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

- Advertisement -
- Advertisement -

ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್‌ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್‌ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್‌ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

ಎಲ್‌ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.

ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್‌ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕನಿಷ್ಠ ಮೂವರು ವಾಹನಗಳು ಮತ್ತು  ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.

ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್‌ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.

‘ಎಲ್‌ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.

ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...