Homeಮುಖಪುಟಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

- Advertisement -
- Advertisement -

ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್‌ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್‌ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್‌ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

ಎಲ್‌ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.

ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್‌ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕನಿಷ್ಠ ಮೂವರು ವಾಹನಗಳು ಮತ್ತು  ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.

ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್‌ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.

‘ಎಲ್‌ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.

ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...