Homeಮುಖಪುಟಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

- Advertisement -
- Advertisement -

ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್‌ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್‌ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್‌ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

ಎಲ್‌ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.

ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್‌ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕನಿಷ್ಠ ಮೂವರು ವಾಹನಗಳು ಮತ್ತು  ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.

ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್‌ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.

‘ಎಲ್‌ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.

ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...