Homeಮುಖಪುಟಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

- Advertisement -
- Advertisement -

ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಯತ್ನಿಸಿದ ಚೀನಿ ಸೈನಿಕರ ವಿರುದ್ಧ ಲಡಾಖ್ ಕುರಿಗಾಹಿಗಳ ಗುಂಪು ಧೈರ್ಯದಿಂದ ಎದುರಿಸಿದ್ದು, ವಾಗ್ವಾದಕ್ಕೆ ಕಾರಣವಾಗಿದೆ. 2020ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯ ಕುರಿಗಾಹಿಗಳು ಈ ಪ್ರದೇಶದಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೀಗ ಅವರು ಪಿಎಲ್‌ಎ ಪಡೆಗಳೊಂದಿಗೆ ಜಗಳವಾಡುತ್ತಾ, ನಾವು ಭಾರತದ ಭೂಪ್ರದೇಶದಲ್ಲಿದ್ದೇವೆ ಎಂದು ಪ್ರತಿಪಾದಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಘಟನೆಯು ಈ ತಿಂಗಳ ಆರಂಭದಲ್ಲಿ ನಡೆದಿದೆ ಎಂದು ವರದಿಗಳು ಹೇಳುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ, ಪೂರ್ವ ಲಡಾಖ್‌ನಲ್ಲಿ ಅಲೆಮಾರಿಗಳು ಕುರಿಗಾಹಿಗಳು ಎಲ್‌ಎಸಿ ಬಳಿಯ ಹಲವಾರು ಪ್ರದೇಶಗಳಲ್ಲಿ ಪ್ರಾಣಿಗಳನ್ನು ಮೇಯಿಸುವುದನ್ನು ನಿಲ್ಲಿಸಿದ್ದರು. ಇದೇ ಮೊದಲ ಬಾರಿಗೆ ಅವರು ಈ ಪ್ರದೇಶದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಜೊತೆಗೆ, ಚೀನಿ ಸೈನಿಕರನ್ನು ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

ಎಲ್‌ಎಸಿ ಎಂಬುದು ಭಾರತೀಯ ಮತ್ತು ಚೀನಾದ ಪ್ರದೇಶಗಳನ್ನು ಪ್ರತ್ಯೇಕಿಸುವ ಒಂದು ಗಡಿರೇಖೆಯಾಗಿದೆ. ವಿಭಿನ್ನ ಗ್ರಹಿಕೆಗಳು ಎರಡೂ ಕಡೆಯ ಪಡೆಗಳ ನಡುವಿನ ವಿವಾದಗಳಿಗೆ ಕಾರಣವಾಗಿವೆ. ಕೆಲವು ಸಂದರ್ಭಗಳಲ್ಲಿ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿವೆ. ಆದಾಗ್ಯೂ, ಈ ಘಟನೆಯಲ್ಲಿ ಹಿಂಸಾಚಾರವನ್ನು ತಪ್ಪಿಸಲಾಗಿದೆ.

ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಅವರು ಸ್ಥಳೀಯ ಕುರುಬರು ತೋರಿದ ಪ್ರತಿರೋಧವನ್ನು ಶ್ಲಾಘಿಸಿದ್ದಾರೆ. ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ಭಾರತೀಯ ಸೇನೆಯನ್ನು ಶ್ಲಾಘಿಸಿದರು. ಪ್ಯಾಂಗಾಂಗ್‌ನ ಉತ್ತರ ದಂಡೆಯಲ್ಲಿರುವ ಸಾಂಪ್ರದಾಯಿಕ ಹುಲ್ಲುಗಾವಲುಗಳಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅಲೆಮಾರಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಬಲವಾದ ನಾಗರಿಕ-ಮಿಲಿಟರಿ ಸಂಬಂಧಗಳು ಮತ್ತು ಗಡಿ ಪ್ರದೇಶದ ಜನಸಂಖ್ಯೆಯ ಹಿತಾಸಕ್ತಿಗಳನ್ನು ನೋಡಿಕೊಳ್ಳುವುದಕ್ಕಾಗಿ ನಾನು ಭಾರತೀಯ ಸೇನೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕನಿಷ್ಠ ಮೂವರು ವಾಹನಗಳು ಮತ್ತು  ಶಸ್ತ್ರಸಜ್ಜಿತ ಹಲವಾರು ಚೀನಿ ಸೈನಿಕರನ್ನು ವಿಡಿಯೋ ತೋರಿಸುತ್ತದೆ. ಅವರ ವಾಹನಗಳು ಎಚ್ಚರಿಕೆ ಸೈರನ್ ಮೊಳಗಿಸುತ್ತಾ, ಕುರಿಗಾಹಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸುತ್ತವೆ. ಆದರೆ, ಅವರು ತಮ್ಮ ನೆಲೆಯಲ್ಲಿ ನಿಂತು, ಚೀನಿ ಪಡೆಗಳೊಂದಿಗೆ ವಾದ ಮಾಡುವುದನ್ನು ಕಾಣಬಹುದು. ನಾವು ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದೇವೆ ಎಂದು ಕುರಿಗಾಹಿಗಳು ಹೇಳಿದ್ದಾರೆ. ವಾಗ್ವಾದವು ಉಲ್ಬಣಗೊಂಡಾಗ, ಕೆಲವು ಕುರುಬರು ಚೀನಿ ಸೈನಿಕರ ವಿರುದ್ಧ ಕಲ್ಲುಗಳನ್ನು ಎತ್ತಿಕೊಳ್ಳುತ್ತಾರೆ. ಆದರೆ, ಹಿಂಸಾಚಾರ ಭುಗಿಲೆದ್ದಿರುವುದನ್ನು ವಿಡಿಯೋ ತೋರಿಸುತ್ತಿಲ್ಲ. ವಿಡಿಯೋದಲ್ಲಿ ಕಾಣುವ ಚೀನಾ ಸೈನಿಕರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ.

ಭಾರತೀಯ ಪಡೆಗಳ ಬೆಂಬಲದಿಂದಾಗಿ ಕುರುಬರು ಚೀನಿ ಪಡೆಗಳನ್ನು ಧೈರ್ಯದಿಂದ ಎದುರಿಸಬಹುದು ಎಂದು ಚುಶುಲ್ ಕೌನ್ಸಿಲರ್ ಹೇಳಿದರು. “ನಮ್ಮ ಪಡೆಗಳು ಯಾವಾಗಲೂ ಹುಲ್ಲುಗಾವಲು ಸಮಸ್ಯೆಗಳನ್ನು ಪರಿಹರಿಸುವಾಗ ನಾಗರಿಕರೊಂದಿಗೆ ನಿಲ್ಲುವುದರಲ್ಲಿ ಯಾವುದೆ ಸಂದೇಹವಿಲ್ಲ. ಅವರ ಬೆಂಬಲದಿಂದಾಗಿ ನಮ್ಮ ಅಲೆಮಾರಿಗಳು ಚೀನಿ ಸೈನಿಕರನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

ಭಾರತ ಮತ್ತು ಚೀನಾ ಗಡಿ ವಿವಾದದಲ್ಲಿ ಸಿಲುಕಿಕೊಂಡಿದ್ದು, ಆಗಾಗ್ಗೆ ಎಲ್‌ಎಸಿ ಉದ್ದಕ್ಕೂ ಸಂಘರ್ಷಕ್ಕೆ ಕಾರಣವಾಗಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ದೊಡ್ಡ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ನಾವು ನಮ್ಮ 4 ಸೈನಿಕರನ್ನು ಕಳೆದುಕೊಂಡಿದ್ದೇವೆ ಎಂದು ಚೀನಾ ಹೇಳಿಕೊಂಡರೆ, ಈ ಸಂಖ್ಯೆ ಹೆಚ್ಚು ಎಂದು ವರದಿಗಳು ಹೇಳುತ್ತವೆ. ಪರಿಸ್ಥಿತಿ ಉಲ್ಬಣಗೊಂಡ ನಂತರ, ಶಾಂತಿಯನ್ನು ಕಾಪಾಡಿಕೊಳ್ಳಲು ಎರಡೂ ಕಡೆಯವರು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಿದ್ದಾರೆ.

‘ಎಲ್‌ಎಸಿ ಉದ್ದಕ್ಕೂ ಪರಿಸ್ಥಿತಿಯು ಸ್ಥಿರವಾಗಿದೆ; ಆದರೆ ಸೂಕ್ಷ್ಮವಾಗಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ಕಳೆದ ಒಂದು ವರ್ಷದಲ್ಲಿ ಅಥವಾ ಅದರ ನಂತರ, ನಾವು ಇದರಲ್ಲಿ ಯಾವುದೇ ಹೆಚ್ಚಿನ ಘರ್ಷಣೆಯ ಪ್ರದೇಶಗಳನ್ನು ಹೊಂದಿಲ್ಲ. ಪರಿಹಾರಕ್ಕಾಗಿ ನಮ್ಮ ಪ್ರಯತ್ನಗಳ ವಿಷಯದಲ್ಲಿ, ಮಿಲಿಟರಿ ಮಟ್ಟದಲ್ಲಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಮ್ಮ ಮಾತುಕತೆಗಳು ಮತ್ತು ಸಂವಾದಗಳು ಎದುರಾಳಿ ದೇಶದೊಂದಿಗೆ ಮುಂದುವರಿಯುತ್ತವೆ” ಜನರಲ್ ಪಾಂಡೆ ಹೇಳಿದರು.

ಇದನ್ನೂ ಓದಿ; ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...