Homeಚಳವಳಿನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

ನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ನಜ್ಮಾ ನಜೀರ್ ಚಿಕ್ಕನೇರಳೆ ಬೆಂಗಳೂರಿನಲ್ಲಿ ಎಲ್ಲರಿಗೂ ಪರಿಚಯವಾಗಿದ್ದು, ಸಾಮಾಜಿಕ ಹೋರಾಟ ಮತ್ತು ಕಾರ್ಯಕ್ರಮಗಳಲ್ಲಿ ಚುರುಕಾಗಿ ಓಡಾಡುವ ಚಿನಕುರಳಿಯಾಗಿ. ವೈದ್ಯಕೀಯ ವಿದ್ಯಾರ್ಥಿನಿಯಾದ ನಜ್ಮಾ ರೇಡಿಯೋ ಜಾಕಿಯಾಗಿ, ಕಂಠದಾನ ಕಲಾವಿದೆಯಾಗಿಯೂ ಕೆಲಸ ಮಾಡುತ್ತಾರೆ. ಆಕೆಯ ಪಿವೋಟ್ ಪದ್ಯಗಳು ಕೃತಿ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ.

ಮೊನ್ನೆ ನನ್ನ ಶಾಲಾದಿನಗಳ ಜೂನಿಯರ್ ಒಬ್ಬ ವಾಟ್ಸಾಪಿನಲ್ಲಿ ದನ ರಕ್ಷಣೆಯ ಬಗ್ಗೆ ಮೆಸೇಜೊಂದನ್ನ ಕಳುಹಿಸಿದ್ದ. ದನದ ಮಾಂಸ ತಿನ್ನುವವರೆಲ್ಲ ದೇಶದ್ರೋಹಿಗಳು ಎಂದು ನೇರವಾಗಿಯೆ ಬರೆದ ಮೆಸೇಜದು. ಇಂತಹುದ್ದೆ ಸ್ವರೂಪದ ಫ್ಯಾಸಿಸ್ಟ್ ಸಮರ್ಥನೆಯ ಮೆಸೇಜುಗಳನ್ನು ಕಳುಹಿಸಿದ್ದ ಹುಡುಗ ನಮ್ಮ ಮನೆಯಲ್ಲೆ ಅಡ್ಡಾಡಿಕೊಂಡು, ತಿಂದುಂಡುಕೊಂಡು ನಮ್ಮೊಟ್ಟಿಗೆಯೆ ಬೆಳೆದವನು. ಡಿಪ್ಲೊಮಾ ಮುಗಿಸಿ ಬೆಂಗಳೂರಿನ ಕಾರ್ಖಾನೆಯೊಂದರ ನೌಕರನಾಗಿದ್ದ ಆತನನ್ನು ಆರ್ಥಿಕ ಕುಸಿತದ ಕಾರಣ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಕೆಲಸದಿಂದ ತೆಗೆದಿದ್ದಾರೆ. ಕೆಲಸವಿಲ್ಲದ ಕಾರಣ ವಾಟ್ಸಾಪ್ ಯೂನಿವರ್ಸಿಟಿಯ ವಿದ್ಯಾರ್ಥಿಯಾಗಿ ಬಲ ಭಜನೆಯಲ್ಲಿ ಪ್ರತಿದಿನ ಮಿಂದೇಳುತ್ತಿದ್ದಾನೆ.

ಬಲಪಂಥೀಯ ಮೇನಿಯಾ ಈ ಮಟ್ಟಿಗೆ ಮಕ್ಕಳಿಂದ ಮುದಿಯರವರೆಗು ಹರಡಲು ಇವರು ಬಳಸಿಕೊಂಡ ಮುಖ್ಯವಾದ ಅಸ್ತ್ರ ‘ಧರ್ಮ’. ಭಾರತವಷ್ಟೆ ಅಲ್ಲ ಯುನೈಟೆಡ್ ಸ್ಟೇಟ್ಸ್‌ನ ಡೊನಾಲ್ಡ್ ಟ್ರಂಪ್‍ನಿಂದ ಹಿಡಿದು ಇಟಲಿಯ ಮ್ಯಾಟಿಯೊ ಸಾಲ್ವಿನಿ ಮತ್ತು ಬ್ರೆಜಿಲ್‍ನ ಜೈರ್ ಬೋಲ್ಸನಾರೊರವರೆಗೂ ಬಲಪಂಥೀಯವಾದಿಗಳು ಧರ್ಮ, ಏಕಸಂಸ್ಕೃತಿ, ಹುಸಿ ದೇಶಪ್ರೇಮದ ಸಿದ್ಧಾಂತಗಳನ್ನೆ ಪ್ರತಿಪಾದಿಸುತ್ತ ಜನರನ್ನು ಎಮೋಶನಲ್ ಬ್ಲಾಕ್‌ಮೇಲ್ ಮಾಡುತ್ತಲೆ ಎಂದಿಗಿಂತಲೂ ಉತ್ತಮವಾಗಿ ಚುನಾವಣಾ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅಷ್ಟೆ ಚಾಲಾಕಿತನದಿಂದ ಅಧಿಕಾರ ಪಡೆಯುತ್ತಿದ್ದಾರೆ. ಇಂತಹ ಈ ಸಂದರ್ಭದಲ್ಲಿ ಪ್ರಸಕ್ತ ಸರ್ಕಾರದ ಸ್ತುತಿಗೀತೆ ಹಾಡುತ್ತ ಕುಳಿತರೆ ಮಾತ್ರ ನೀವು ದೇಶದಲ್ಲಿ ಬದುಕಲು ಅರ್ಹ, ಒಂದೇ ಒಂದು ಮಾತು ತುಟಿಕ್‍ಪಿಟಿಕ್ ಎಂದರು ಸೆಕ್ಷನ್ ಮೇಲೆ ಸೆಕ್ಷನ್ ಹಾಕಿ ನಿಮ್ಮ ಅಭಿವ್ಯಕ್ತಿಯ ದಮನವನ್ನು ಮಾಡಲಾಗುತ್ತಿದೆ. ಹೆಚ್ಚು ಮಾತನಾಡಿದರೆ ಪ್ರಾಣ ತೆಗೆಯಲು ಸಿದ್ಧವಾಗಿ ಕುಂತಿದೆ ಬಲಪಂಥಿಯ ಫ್ಯಾಸಿಸ್ಟ್ ಶಕ್ತಿಗಳು.

ಗೋಲ್ವಾಲ್ಕರ್ ಮೊಘಲ್ ಆಳ್ವಿಕೆಯನ್ನು ಮುಸ್ಲಿಮ್ ಆಳ್ವಿಕೆಯೆಂದು ಪ್ರತಿಪಾದಿಸಿದ್ದ ಸಿದ್ಧಾಂತದ ಕಾಪಿ-ಪೇಸ್ಟ್ ಪ್ರಸಕ್ತ ಸರ್ಕಾರದ ಸಿದ್ಧಾಂತ. 2014ರ ಚುನಾವಣೆಯ ವಿಜಯೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ “ಸಾವಿರ ವರ್ಷಗಳ ಗುಲಾಮಗಿರಿಯಿಂದ ಭಾರತವನ್ನು ಸ್ವತಂತ್ರಗೊಳಿಸಿದ್ದೇನೆ” ಎಂದು ಹೇಳಿಕೆ ನೀಡಿದ್ದರು. ಮುಸಲ್ಮಾನರನ್ನು ಇಂದಿಗೂ ಪರಕೀಯರೆಂದೇ, ಆಕ್ರಮಣಕಾರರೆಂದೇ ಸರ್ಕಾರ ಬಿಂಬಿಸುತ್ತಿದೆ. ಮುಸಲ್ಮಾನರ ಆಡಳಿತವನ್ನು ದಬ್ಬಾಳಿಕೆಯ ಕಾಲವೆಂದೇ ನಂಬಿಸಲಾಗುತ್ತಿದೆ.

ಬಹುಸಂಖ್ಯಾತರ ನಡುವೆ ಬಲ ಸಿದ್ಧಾಂತವು ಮುಸಲ್ಮಾನರ ಬಗ್ಗೆ ಅಸಹನೆ ಬೆಳೆಸಿಕೊಳ್ಳುವಂತಹ ವಾತಾವರಣ ನಿರ್ಮಿಸಿದ್ದು, ಕೋಮುವಾದ ಸೃಷ್ಟಿಸಿದ ದ್ವೇಷಾಸೂಯೆ ಅಪಪ್ರಚಾರಗಳನ್ನು ತೀವ್ರರೀತಿಯಲ್ಲಿ ಮಾಡುತ್ತಿದೆ. ಇಂತಹುದರ ಫಲವಾಗಿಯೆ ಕಾಶ್ಮೀರದ ಆಸಿಫಾ ಅತ್ಯಾಚಾರ ಪ್ರಕರಣದಲ್ಲಿ ಶಾಸಕನೊಬ್ಬ ಜನರ ಹಿಂಡಿನೊಂದಿಗೆ ಆರೋಪಿಯ ಪರ ಬೀದಿಗಿಳಿದು ಹೋರಾಡುವ ಉದಾಹರಣೆಯನ್ನು ನಾವು ಕಣ್ಣಿಂದ ಕಾಣಬೇಕಾಯ್ತು.

ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಹಿಂಸೆ ಅಪಪ್ರಚಾರದ ನಾನಾ ಸ್ವರೂಪಗಳು ಪ್ರಕಟವಾಗುತ್ತಿವೆ. ಇಷ್ಟಪಡುವ ಆಹಾರ ತಿನ್ನುವಂತಿಲ್ಲ, ಮಾತನಾಡುವ ಸ್ವಾತಂತ್ರ್ಯವಿಲ್ಲ, ಸಮಾನತೆಯೊಂದಿಗೆ ಶಿಕ್ಷಣವಿಲ್ಲ, ಉತ್ತಮ ಉದ್ಯೋಗವಿಲ್ಲ. ಕಷ್ಟಪಟ್ಟು ಬದುಕಬೇಕೆಂದು ಹೊರಟರೆ ನೆಮ್ಮದಿಯ ವಾತಾವರಣವಿಲ್ಲ, ರಕ್ಷಣೆಯೂ ಇಲ್ಲ. ಘನತೆಯ ಬದುಕೊಂದನ್ನ ಬದುಕುವ ಹಾಗೂ ಇಲ್ಲ ಎಂಬಂಥ ಪರಿಸ್ಥಿತಿ ಮುಸಲ್ಮಾನ, ದಲಿತ ಮತ್ತು ಹಿಂದುಳಿದ ಸಮುದಾಯಗಳದ್ದಾಗಿದೆ.

ಹಿಂದೆ ಜರ್ಮನಿಯಲ್ಲಿ ಯಹೂದಿಗಳ ಮೇಲಾದಂತೆಯೆ ಇಂದು ಭಾರತದಲ್ಲಿಯೂ ಅಲ್ಪಸಂಖ್ಯಾತರು, ತಳಸಮುದಾಯಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನದ ದಹನ ನಡೆಯುತ್ತಿರುವ ಈ ಹೊತ್ತು ಬಹು ಕಠಿಣವಾದ ಕಾಲ. ಅನ್‌ಅಫಿಶಿಯಲಿ ಎಮರ್ಜೆನ್ಸಿ ಘೋಷಣೆಯಾಗಿರುವ ಕಾಲ.

ಈಗ ಪ್ರಗತಿಪರ ಜಾತ್ಯತೀತವಾದಿಗಳೆಲ್ಲ ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ದೇಶವನ್ನು ಕಾಪಾಡಲು ಒಂದಾಗಲೇಬೇಕಾದ ಹೊತ್ತು. ಕಷ್ಟಪಟ್ಟು ಸಂಪಾದಿಸಿರುವ ಸ್ವಾತಂತ್ರ್ಯ ಸಂವಿಧಾನ, ಪ್ರಜಾಪ್ರಭುತ್ವ ಎಲ್ಲವೂ ಮಣ್ಣು ಪಾಲಾಗುವುದನ್ನು ತಪ್ಪಿಸಲು ಚಳವಳಿಗಳು ಮನೆಮನಗಳಿಗೆ ತಲುಪಬೇಕಾಗಿದೆ. ಮಾಧ್ಯಮಗಳು ಮಾರಾಟವಾಗಿರುವ ಈ ಕಾಲದಲ್ಲಿ ನಾವೇ ನಮಗೆ ಮಾಧ್ಯಮವಾಗಬೇಕಾಗಿರುವ ಕಾಲವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...