Homeಮುಖಪುಟನೀರು ಕುಡಿದು ಅಸ್ವಸ್ಥ; ಇಂಡಿಗೋ ವಿಮಾನ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಮಯಾಂಕ್

ನೀರು ಕುಡಿದು ಅಸ್ವಸ್ಥ; ಇಂಡಿಗೋ ವಿಮಾನ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಮಯಾಂಕ್

- Advertisement -
- Advertisement -

ಭಾರತೀಯ ಕ್ರಿಕೆಟ್ ಆಟಗಾರ ಮಯಾಂಕ್ ಅಗರ್ವಾಲ್ ಅವರು ಮಂಗಳವಾರ ತ್ರಿಪುರಾದಿಂದ ದೆಹಲಿಗೆ ಹೊರಡುವ ಮೊದಲು ಇಂಡಿಗೋ ವಿಮಾನದಲ್ಲಿ ಅಶುದ್ಧ ನೀರು ಕುಡಿದ ನಂತರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ತಮ್ಮ ತಂಡದ ಮ್ಯಾನೇಜರ್ ಮೂಲಕ ಪೊಲೀಸ್ ದೂರು ನೀಡಿದ್ದಾರೆ.

ನೀರು ಕುಡಿದು ಅಸ್ವಸ್ಥರಾದ ಆಟಗಾರನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ನಂಬಲಾಗಿದೆ. ಆದರೆ, ವಿಮಾನ ಸಂಸ್ಥೆ ವಿರುದ್ಧ ಅವರು ದೂರು ನೀಡಿದ್ದಾರೆ.

‘ಮಯಾಂಕ್ ಅಗರ್ವಾಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ; ಈಗ ಅವರು ಸ್ಥಿರವಾಗಿದ್ದಾರೆ. ಆದರೆ, ಅವರ ಮ್ಯಾನೇಜರ್ ಎನ್ಸಿಸಿಪಿಎಸ್ (ಹೊಸ ರಾಜಧಾನಿ ಸಂಕೀರ್ಣ ಪೊಲೀಸ್ ಠಾಣೆ) ಅಡಿಯಲ್ಲಿ ಪ್ರಕರಣದ ತನಿಖೆಗಾಗಿ ನಿರ್ದಿಷ್ಟ ದೂರು ದಾಖಲಿಸಿದ್ದಾರೆ’ ಎಂದು ಪಶ್ಚಿಮ ತ್ರಿಪುರಾ ಎಸ್‌ಪಿ ಕಿರಣ್ ಕುಮಾರ್ ಹೇಳಿದ್ದಾರೆ.

ಘಟನೆಯ ಕುರಿತು ವಿವರ ನೀಡಿದ ಪೊಲೀಸರು, ವಿಮಾನದಲ್ಲಿ ಅನುಮಾನಾಸ್ಪದ ದ್ರವವನ್ನು ಸೇವಿಸಿದ ನಂತರ ಮಯಾಂಕ್ ಅವರ ಬಾಯಿಯಲ್ಲಿ ಕಿರಿಕಿರಿ ಉಂಟಾಗಿದೆ; ಅವರಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಅವರು ಬಾಯಿಯಲ್ಲಿ ಊತ ಮತ್ತು ಹುಣ್ಣುಗಳನ್ನು ಹೊಂದಿದ್ದರು’ ಎಂದು ಹೇಳಿದ್ದಾರೆ.

ಆಗಿದ್ದೇನು?

ಕರ್ನಾಟಕ ರಣಜಿ ತಂಡ ನಾಯಕರಾಗಿರುವ ಮಯಾಂಕ್ ಅಗರ್ವಾಲ್, ತ್ರಿಪುರಾದಿಂದ ದೆಹಲಿಗೆ ಹೊರಟಿದ್ದರು. ವಿಮಾನದಲ್ಲಿ ತಮ್ಮ ಮುಂದೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದಿದ್ದಾರೆ. ತಕ್ಷಣವೇ ಅವರಿಗೆ ಗಂಟಲು ತುರಿಕೆ ಅನುಭವಿಸಲು ಪ್ರಾರಂಭವಾಗಿದ್ದು, ಕೆಲ ಹೊತ್ತಿನ ಬಳಿಕ ಅವರ ತುಟಿಗಳು ಊದಿಕೊಂಡವು. ಮಯಾಂಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯರ ತಂಡ ಚಿಕಿತ್ಸೆ ನೀಡಿತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದರೂ, ಬಾಯಿಯಲ್ಲಿ ಹುಣ್ಣು ಮತ್ತು ಊತವಿರುವುದರಿಂದ ಅವರು ಒಂದು ಅಥವಾ ಎರಡು ದಿನಗಳವರೆಗೆ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿದುಬಂದಿದೆ.

ಕರ್ನಾಟಕ ರಣಜಿ ತಂಡದ ಮ್ಯಾನೇಜರ್ ಪ್ರಕಾರ, ವೈದ್ಯರು ಹಾಜರಾಗುವ ಮೊದಲು ಮಯಾಂಕ್ ಗಂಟಲಿನಲ್ಲಿ ತುರಿಕೆ ಮತ್ತು ವಾಂತಿ ಸಂವೇದನೆಯನ್ನು ಅನುಭವಿಸಿದರು. ನಂತರ ಅವರು ವಿಮಾನದಲ್ಲಿ ವಿಶ್ರಾಂತಿ ಕೊಠಡಿಗೆ ಧಾವಿಸಿದರು, ನಂತರ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದರು.

‘ನಾವು ದೆಹಲಿಗೆ ಹೊರಟಿದ್ದೆವು, ಮಯಾಂಕ್‌ಗೆ ಬಾಯಾರಿಕೆಯಾಯಿತು. ಆದ್ದರಿಂದ, ಅವರು ತನ್ನ ಸೀಟಿನ ಮುಂಭಾಗದ ಸೀಟಿನ ಪಾಕೆಟ್‌ನಲ್ಲಿ ಹಿಂದೆ ಇಟ್ಟಿದ್ದ ನೀರು ಕುಡಿದರು. ಕೆಲವು ನಿಮಿಷಗಳ ನಂತರ, ಅವರ ಗಂಟಲು ತುರಿಕೆಯಾಗಿದೆ. ವಾಂತಿ ಮಾಡುವ ಲಕ್ಷಣಗಳನ್ನು ಅನುಭವಿಸಿದರು. ಕೂಡಲೆ ಅವರು ಕಾಕ್ಪಿಟ್ ಬಳಿಯ ವಾಶ್ರೂಮ್‌ಗೆ ಧಾವಿಸಿ ಗಗನಸಖಿಯರಿಗೆ ಮಾಹಿತಿ ನೀಡಿದರು’ ಎಂದು ಕರ್ನಾಟಕ ತಂಡದ ಮ್ಯಾನೇಜರ್ ರಮೇಶ್ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

‘ಗಗನಸಖಿ ತಕ್ಷಣವೇ ತುರ್ತು ಕರೆಗಂಟೆ ಬಾರಿಸಿದರು, ವಿಮಾನದಲ್ಲಿ ಯಾರಾದರೂ ವೈದ್ಯರು ಇದ್ದಾರೆಯೇ ಎಂದು ಪರಿಶೀಲಿಸಿದರು. ದುರದೃಷ್ಟವಶಾತ್ ಯಾವುದೇ ವೈದ್ಯರಿರಲಿಲ್ಲ. ಆದ್ದರಿಂದ ಪೈಲಟ್‌ಗೆ ಮಾಹಿತಿ ನೀಡಲಾಯಿತು ಮತ್ತು ವಿಮಾನ ನಿಲ್ದಾಣದ ಪ್ರಾಧಿಕಾರಕ್ಕೆ ಸಂದೇಶ ಕಳುಹಿಸಲಾಯಿತು. ಅವರನ್ನು ನೋಡಲು ಬಂದ ವೈದ್ಯರು, ‘ನಾವು ಇಲ್ಲಿ ಪ್ರಥಮ ಚಿಕಿತ್ಸೆ ನೀಡಲು ಸಾಧ್ಯವಿಲ್ಲ; ಕೂಡಲೆ ಇವರನ್ನು ಆಸ್ಪತ್ರೆಗೆ ಸೇರಿಸಬೇಕಾಗಿದೆ’ ಎಂದು ಹೇಳಿದರು, ತಕ್ಷಣ ನಾವು ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ದೆವು’ ಎಂದು ಹೇಳಿದರು.

ಈ ಬಗ್ಗೆ ಹೇಳಿಕೆ ನೀಡಿರುವ ವಿಮಾನಯಾನ ಸಂಸ್ಥೆ, ‘ಇಂಡಿಗೋ ಫ್ಲೈಟ್ 6E 5177 ಅಗರ್ತಲಾದಿಂದ ದೆಹಲಿಗೆ ವೈದ್ಯಕೀಯ ತುರ್ತುಸ್ಥಿತಿಯ ಕಾರಣದಿಂದಾಗಿ ವಿಮಾನ ನಿಲ್ದಾಣಕ್ಕೆ ಮರಳಿತು. ಪ್ರಯಾಣಿಕರನ್ನು ಕೂಡಲೆ ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಆಸ್ಪತ್ರೆಗೆ ಸಾಗಿಸಲಾಯಿತು’ ಎಂದು ಹೇಳಿದೆ.

ಇದನ್ನೂ ಓದಿ; ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...