Homeಮುಖಪುಟನೀರು ಕುಡಿದು ಅಸ್ವಸ್ಥ; ಇಂಡಿಗೋ ವಿಮಾನ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಮಯಾಂಕ್

ನೀರು ಕುಡಿದು ಅಸ್ವಸ್ಥ; ಇಂಡಿಗೋ ವಿಮಾನ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಮಯಾಂಕ್

- Advertisement -
- Advertisement -

ಭಾರತೀಯ ಕ್ರಿಕೆಟ್ ಆಟಗಾರ ಮಯಾಂಕ್ ಅಗರ್ವಾಲ್ ಅವರು ಮಂಗಳವಾರ ತ್ರಿಪುರಾದಿಂದ ದೆಹಲಿಗೆ ಹೊರಡುವ ಮೊದಲು ಇಂಡಿಗೋ ವಿಮಾನದಲ್ಲಿ ಅಶುದ್ಧ ನೀರು ಕುಡಿದ ನಂತರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ತಮ್ಮ ತಂಡದ ಮ್ಯಾನೇಜರ್ ಮೂಲಕ ಪೊಲೀಸ್ ದೂರು ನೀಡಿದ್ದಾರೆ.

ನೀರು ಕುಡಿದು ಅಸ್ವಸ್ಥರಾದ ಆಟಗಾರನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ನಂಬಲಾಗಿದೆ. ಆದರೆ, ವಿಮಾನ ಸಂಸ್ಥೆ ವಿರುದ್ಧ ಅವರು ದೂರು ನೀಡಿದ್ದಾರೆ.

‘ಮಯಾಂಕ್ ಅಗರ್ವಾಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ; ಈಗ ಅವರು ಸ್ಥಿರವಾಗಿದ್ದಾರೆ. ಆದರೆ, ಅವರ ಮ್ಯಾನೇಜರ್ ಎನ್ಸಿಸಿಪಿಎಸ್ (ಹೊಸ ರಾಜಧಾನಿ ಸಂಕೀರ್ಣ ಪೊಲೀಸ್ ಠಾಣೆ) ಅಡಿಯಲ್ಲಿ ಪ್ರಕರಣದ ತನಿಖೆಗಾಗಿ ನಿರ್ದಿಷ್ಟ ದೂರು ದಾಖಲಿಸಿದ್ದಾರೆ’ ಎಂದು ಪಶ್ಚಿಮ ತ್ರಿಪುರಾ ಎಸ್‌ಪಿ ಕಿರಣ್ ಕುಮಾರ್ ಹೇಳಿದ್ದಾರೆ.

ಘಟನೆಯ ಕುರಿತು ವಿವರ ನೀಡಿದ ಪೊಲೀಸರು, ವಿಮಾನದಲ್ಲಿ ಅನುಮಾನಾಸ್ಪದ ದ್ರವವನ್ನು ಸೇವಿಸಿದ ನಂತರ ಮಯಾಂಕ್ ಅವರ ಬಾಯಿಯಲ್ಲಿ ಕಿರಿಕಿರಿ ಉಂಟಾಗಿದೆ; ಅವರಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಅವರು ಬಾಯಿಯಲ್ಲಿ ಊತ ಮತ್ತು ಹುಣ್ಣುಗಳನ್ನು ಹೊಂದಿದ್ದರು’ ಎಂದು ಹೇಳಿದ್ದಾರೆ.

ಆಗಿದ್ದೇನು?

ಕರ್ನಾಟಕ ರಣಜಿ ತಂಡ ನಾಯಕರಾಗಿರುವ ಮಯಾಂಕ್ ಅಗರ್ವಾಲ್, ತ್ರಿಪುರಾದಿಂದ ದೆಹಲಿಗೆ ಹೊರಟಿದ್ದರು. ವಿಮಾನದಲ್ಲಿ ತಮ್ಮ ಮುಂದೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದಿದ್ದಾರೆ. ತಕ್ಷಣವೇ ಅವರಿಗೆ ಗಂಟಲು ತುರಿಕೆ ಅನುಭವಿಸಲು ಪ್ರಾರಂಭವಾಗಿದ್ದು, ಕೆಲ ಹೊತ್ತಿನ ಬಳಿಕ ಅವರ ತುಟಿಗಳು ಊದಿಕೊಂಡವು. ಮಯಾಂಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯರ ತಂಡ ಚಿಕಿತ್ಸೆ ನೀಡಿತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದರೂ, ಬಾಯಿಯಲ್ಲಿ ಹುಣ್ಣು ಮತ್ತು ಊತವಿರುವುದರಿಂದ ಅವರು ಒಂದು ಅಥವಾ ಎರಡು ದಿನಗಳವರೆಗೆ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿದುಬಂದಿದೆ.

ಕರ್ನಾಟಕ ರಣಜಿ ತಂಡದ ಮ್ಯಾನೇಜರ್ ಪ್ರಕಾರ, ವೈದ್ಯರು ಹಾಜರಾಗುವ ಮೊದಲು ಮಯಾಂಕ್ ಗಂಟಲಿನಲ್ಲಿ ತುರಿಕೆ ಮತ್ತು ವಾಂತಿ ಸಂವೇದನೆಯನ್ನು ಅನುಭವಿಸಿದರು. ನಂತರ ಅವರು ವಿಮಾನದಲ್ಲಿ ವಿಶ್ರಾಂತಿ ಕೊಠಡಿಗೆ ಧಾವಿಸಿದರು, ನಂತರ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದರು.

‘ನಾವು ದೆಹಲಿಗೆ ಹೊರಟಿದ್ದೆವು, ಮಯಾಂಕ್‌ಗೆ ಬಾಯಾರಿಕೆಯಾಯಿತು. ಆದ್ದರಿಂದ, ಅವರು ತನ್ನ ಸೀಟಿನ ಮುಂಭಾಗದ ಸೀಟಿನ ಪಾಕೆಟ್‌ನಲ್ಲಿ ಹಿಂದೆ ಇಟ್ಟಿದ್ದ ನೀರು ಕುಡಿದರು. ಕೆಲವು ನಿಮಿಷಗಳ ನಂತರ, ಅವರ ಗಂಟಲು ತುರಿಕೆಯಾಗಿದೆ. ವಾಂತಿ ಮಾಡುವ ಲಕ್ಷಣಗಳನ್ನು ಅನುಭವಿಸಿದರು. ಕೂಡಲೆ ಅವರು ಕಾಕ್ಪಿಟ್ ಬಳಿಯ ವಾಶ್ರೂಮ್‌ಗೆ ಧಾವಿಸಿ ಗಗನಸಖಿಯರಿಗೆ ಮಾಹಿತಿ ನೀಡಿದರು’ ಎಂದು ಕರ್ನಾಟಕ ತಂಡದ ಮ್ಯಾನೇಜರ್ ರಮೇಶ್ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

‘ಗಗನಸಖಿ ತಕ್ಷಣವೇ ತುರ್ತು ಕರೆಗಂಟೆ ಬಾರಿಸಿದರು, ವಿಮಾನದಲ್ಲಿ ಯಾರಾದರೂ ವೈದ್ಯರು ಇದ್ದಾರೆಯೇ ಎಂದು ಪರಿಶೀಲಿಸಿದರು. ದುರದೃಷ್ಟವಶಾತ್ ಯಾವುದೇ ವೈದ್ಯರಿರಲಿಲ್ಲ. ಆದ್ದರಿಂದ ಪೈಲಟ್‌ಗೆ ಮಾಹಿತಿ ನೀಡಲಾಯಿತು ಮತ್ತು ವಿಮಾನ ನಿಲ್ದಾಣದ ಪ್ರಾಧಿಕಾರಕ್ಕೆ ಸಂದೇಶ ಕಳುಹಿಸಲಾಯಿತು. ಅವರನ್ನು ನೋಡಲು ಬಂದ ವೈದ್ಯರು, ‘ನಾವು ಇಲ್ಲಿ ಪ್ರಥಮ ಚಿಕಿತ್ಸೆ ನೀಡಲು ಸಾಧ್ಯವಿಲ್ಲ; ಕೂಡಲೆ ಇವರನ್ನು ಆಸ್ಪತ್ರೆಗೆ ಸೇರಿಸಬೇಕಾಗಿದೆ’ ಎಂದು ಹೇಳಿದರು, ತಕ್ಷಣ ನಾವು ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ದೆವು’ ಎಂದು ಹೇಳಿದರು.

ಈ ಬಗ್ಗೆ ಹೇಳಿಕೆ ನೀಡಿರುವ ವಿಮಾನಯಾನ ಸಂಸ್ಥೆ, ‘ಇಂಡಿಗೋ ಫ್ಲೈಟ್ 6E 5177 ಅಗರ್ತಲಾದಿಂದ ದೆಹಲಿಗೆ ವೈದ್ಯಕೀಯ ತುರ್ತುಸ್ಥಿತಿಯ ಕಾರಣದಿಂದಾಗಿ ವಿಮಾನ ನಿಲ್ದಾಣಕ್ಕೆ ಮರಳಿತು. ಪ್ರಯಾಣಿಕರನ್ನು ಕೂಡಲೆ ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಆಸ್ಪತ್ರೆಗೆ ಸಾಗಿಸಲಾಯಿತು’ ಎಂದು ಹೇಳಿದೆ.

ಇದನ್ನೂ ಓದಿ; ಭಾರತದ ಭೂಪ್ರದೇಶದಲ್ಲಿ ಕುರಿ ಮೇಯಿಸಲು ಚೀನಿ ಸೈನಿಕರಿಂದ ಆಕ್ಷೇಪ; ತಮ್ಮ ಹಕ್ಕು ಪ್ರತಿಪಾದಿಸಿದ ಲಡಾಖ್ ಕುರಿಗಾಹಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...