Homeಕರ್ನಾಟಕನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಮುಖ್ಯಮಂತ್ರಿ ಈ ರೀತಿ ಹೇಳಿದರು.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಎಂದರು.

ಸರ್ಕಾರ ಬಂದು 8 ತಿಂಗಳಾಗಿದೆ. ಡಿಸಿ, ಸಿಇಒ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ.‌ ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ಕೆಲವೆಡೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ? ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಕೆಲವರಿಗೆ ಮಾತ್ರ ಗ್ಯಾರಂಟಿಗಳ ಅನುಕೂಲ ತಲುಪಿಲ್ಲ. ಆ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು.

ತೆರಿಗೆ ಇಲಾಖೆ, ತಹಶೀಲ್ದಾರ್, ಎಸಿ ಹಾಗೂ ಡಿಸಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ಕಡಿಮೆ ಆಗಿದೆಯಾ? ತಹಶೀಲ್ದಾರ್, ಎಸಿ, ಡಿಸಿ ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ? ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ? ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ? ಎಂದು ಸಿಎಂ ಪ್ರಶ್ನಿಸಿದರು.

ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ ಎನ್ನುವ ಸೂಚನೆ ನೀಡಿದರು.

ಎಷ್ಟು ಕಚೇರಿ, ಹಾಸ್ಟೆಲ್‌, ಠಾಣೆ ಮತ್ತು ಶಾಲೆಗಳಿಗೆ, ಭೇಟಿ ನೀಡಿದ್ದೀರಿ ಎನ್ನು ವಿವರಗಳನ್ನು ಪಡೆದುಕೊಂಡರು. ಕೋಲಾರದ ಹಾಸ್ಟೆಲ್‌ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ನೀವು ಉಸ್ತುವಾರಿ ವಹಿಸಿರುವ ಜಿಲ್ಲೆಯಲ್ಲಿನ‌ ಅಧಿಕಾರಿಗಳು- ಫಲಾನುಭವಿಗಳ ಜೊತೆ ಸಂಪರ್ಕ, ಸಂಬಂಧ ಇನ್ನಷ್ಟು ಹೆಚ್ಚು ಹೆಚ್ಚು ಏರ್ಪಡಬೇಕು. ಜನರು ಹೆಚ್ಚು ಹೋಗೋದು ಕೃಷಿ, ಕಂದಾಯ ಇಲಾಖೆ ಕಚೇರಿಗಳು ಮತ್ತು ಪೊಲೀಸ್ ಠಾಣೆಗಳಿಗೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ? ನಿಮ್ಮಿಂದ ಜಿಲ್ಲಾಡಳಿತಕ್ಕೆ ಏನು ಸಲಹೆ ಸಿಕ್ಕಿದೆ? ನಿಮ್ಮ ಅನುಭವದ ಅನುಕೂಲ ಜಿಲ್ಲೆಗಳಿಗೆ ಎಷ್ಟಾಗಿದೆ ಎಂದು ಪ್ರಶ್ನಿಸಿದರು.

ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಬದ್ದತೆ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ, ಅವಕಾಶವೂ ಇಲ್ಲ. ನಿಮ್ಮ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಕರ್ತವ್ಯಲೋಪ, ನಿರ್ಲಕ್ಷ್ಯಕ್ಕೆ ಜಿಲ್ಲಾ ಮಟ್ಟದಲ್ಲಿ ನೀವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದೇ ಹೋದರೆ, ಜಿಲ್ಲಾ ಮಟ್ಟದಲ್ಲಿ ಹೇಗೆ ಶಿಸ್ತು ತರುತ್ತೀರಿ ಎಂದು ಸಿಎಂ ಕೇಳಿದರು.

ಇದನ್ನೂ ಓದಿ: ಮೊದಲ ವರದಿ ಸಲ್ಲಿಸಿದ ಎಸ್‌ಇಪಿ ಆಯೋಗ: ಮೂರು ವರ್ಷಗಳ ಪದವಿಗೆ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...