Homeಕರ್ನಾಟಕನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಮುಖ್ಯಮಂತ್ರಿ ಈ ರೀತಿ ಹೇಳಿದರು.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಎಂದರು.

ಸರ್ಕಾರ ಬಂದು 8 ತಿಂಗಳಾಗಿದೆ. ಡಿಸಿ, ಸಿಇಒ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ.‌ ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ಕೆಲವೆಡೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ? ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಕೆಲವರಿಗೆ ಮಾತ್ರ ಗ್ಯಾರಂಟಿಗಳ ಅನುಕೂಲ ತಲುಪಿಲ್ಲ. ಆ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು.

ತೆರಿಗೆ ಇಲಾಖೆ, ತಹಶೀಲ್ದಾರ್, ಎಸಿ ಹಾಗೂ ಡಿಸಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ಕಡಿಮೆ ಆಗಿದೆಯಾ? ತಹಶೀಲ್ದಾರ್, ಎಸಿ, ಡಿಸಿ ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ? ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ? ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ? ಎಂದು ಸಿಎಂ ಪ್ರಶ್ನಿಸಿದರು.

ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ ಎನ್ನುವ ಸೂಚನೆ ನೀಡಿದರು.

ಎಷ್ಟು ಕಚೇರಿ, ಹಾಸ್ಟೆಲ್‌, ಠಾಣೆ ಮತ್ತು ಶಾಲೆಗಳಿಗೆ, ಭೇಟಿ ನೀಡಿದ್ದೀರಿ ಎನ್ನು ವಿವರಗಳನ್ನು ಪಡೆದುಕೊಂಡರು. ಕೋಲಾರದ ಹಾಸ್ಟೆಲ್‌ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ನೀವು ಉಸ್ತುವಾರಿ ವಹಿಸಿರುವ ಜಿಲ್ಲೆಯಲ್ಲಿನ‌ ಅಧಿಕಾರಿಗಳು- ಫಲಾನುಭವಿಗಳ ಜೊತೆ ಸಂಪರ್ಕ, ಸಂಬಂಧ ಇನ್ನಷ್ಟು ಹೆಚ್ಚು ಹೆಚ್ಚು ಏರ್ಪಡಬೇಕು. ಜನರು ಹೆಚ್ಚು ಹೋಗೋದು ಕೃಷಿ, ಕಂದಾಯ ಇಲಾಖೆ ಕಚೇರಿಗಳು ಮತ್ತು ಪೊಲೀಸ್ ಠಾಣೆಗಳಿಗೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ? ನಿಮ್ಮಿಂದ ಜಿಲ್ಲಾಡಳಿತಕ್ಕೆ ಏನು ಸಲಹೆ ಸಿಕ್ಕಿದೆ? ನಿಮ್ಮ ಅನುಭವದ ಅನುಕೂಲ ಜಿಲ್ಲೆಗಳಿಗೆ ಎಷ್ಟಾಗಿದೆ ಎಂದು ಪ್ರಶ್ನಿಸಿದರು.

ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಬದ್ದತೆ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ, ಅವಕಾಶವೂ ಇಲ್ಲ. ನಿಮ್ಮ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಕರ್ತವ್ಯಲೋಪ, ನಿರ್ಲಕ್ಷ್ಯಕ್ಕೆ ಜಿಲ್ಲಾ ಮಟ್ಟದಲ್ಲಿ ನೀವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದೇ ಹೋದರೆ, ಜಿಲ್ಲಾ ಮಟ್ಟದಲ್ಲಿ ಹೇಗೆ ಶಿಸ್ತು ತರುತ್ತೀರಿ ಎಂದು ಸಿಎಂ ಕೇಳಿದರು.

ಇದನ್ನೂ ಓದಿ: ಮೊದಲ ವರದಿ ಸಲ್ಲಿಸಿದ ಎಸ್‌ಇಪಿ ಆಯೋಗ: ಮೂರು ವರ್ಷಗಳ ಪದವಿಗೆ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...