Homeಮುಖಪುಟಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ...

ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಯ ಸಂಚಿನ ಕುರಿತು ಭಾರತ ಸರಿಯಾದ ತನಿಖೆ ನಡೆಸುವವರೆಗೂ ಭಾರತಕ್ಕೆ 31 MQ-9A ಸೀ ಗಾರ್ಡಿಯನ್‌ ಮತ್ತು ಸ್ಕೈ ಗಾರ್ಡಿಯನ್‌ ಡ್ರೋನ್‌ಗಳ ವಿತರಣೆಯನ್ನು US ಸರ್ಕಾರ ತಡೆಹಿಡಿದಿದೆ ಎಂದು The Wire ವರದಿ ಮಾಡಿದೆ.

ಪ್ರಸ್ತಾವಿತ 3 ಬಿಲಿಯನ್ ಡಾಲರ್‌ ಖರೀದಿ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಗೆ 15 ಸೀ ಗಾರ್ಡಿಯನ್ ಡ್ರೋನ್‌ಗಳನ್ನು ಮತ್ತು ವಾಯುಪಡೆಗೆ 8 ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ರವಾನಿಸಬೇಕಿತ್ತು. ಇದಲ್ಲದೆ ಆರು ಬೋಯಿಂಗ್ P-8I ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಕೂಡ ವಾಷಿಂಗ್ಟನ್ ತಡೆಹಿಡಿದಿದೆ. ಇವುಗಳು ಭಾರತೀಯ ನೌಕಾಪಡೆಯು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 12 P-8I ಪೋಸಿಡಾನ್ ವಿಮಾನಗಳಿಗೆ ಪೂರಕವಾಗಿದೆ. ತಡೆಹಿಡಿಯಲಾದ ಡ್ರೋನ್ ಕುರಿತು ಭಾರತೀಯ ರಕ್ಷಣಾ ಸಚಿವಾಲಯ ಆಂತರಿಕ ಅನುಮೋದನೆಯು ಜೂನ್ 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಒಂದು ವಾರದ ಮೊದಲು ನೀಡಲಾಗಿತ್ತು.

ಪೋಸಿಡಾನ್ ಏರ್‌ಕ್ರಾಫ್ಟ್ ಮತ್ತು ಸೀ ಗಾರ್ಡಿಯನ್ ಡ್ರೋನ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ, ಹಿಂದೂ ಮಹಾಸಾಗರ ಇವು ಕಣ್ಗಾವಲಿನಲ್ಲಿರುತ್ತದೆ, ಅಂತರಾಷ್ಟ್ರೀಯ ಜಲ ಮಾರ್ಗಗಳನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳಿಗೆ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆಗೆ ಸಾಮರ್ಥ್ಯವನ್ನು ಇವು ನೀಡುತ್ತದೆ.

ಯುಎಸ್ ಮತ್ತು ಕೆನಡಾ ದೇಶಗಳ ಪೌರತ್ವವನ್ನು ಹೊಂದಿರುವ ಪನ್ನುನ್, ನ್ಯೂಯಾರ್ಕ್ ಮೂಲದ ಖಲಿಸ್ತಾನಿ ಪರ ಕಾರ್ಯಕರ್ತ, ಈತನನ್ನು ಭಾರತ ಭಯೋತ್ಪಾದಕ ಎಂದು ಘೋಷಿಸಿತ್ತು. ಪನ್ನುನ್‌ನನ್ನು ಹತ್ಯೆ ಮಾಡುವ ಪ್ರಯತ್ನದ ಮೇಲಿನ ಕೋಪದಿಂದಾಗಿ ಯುಎಸ್ ಖರೀದಿಗೆ ತಡೆ ನೀಡಿದೆ. US ಪ್ರತಿನಿಧಿಗಳು ಮಾರಾಟವನ್ನು ಮುಂದುವರಿಸಲು ಬೇಕಾದ ಅಗತ್ಯವಾದ ಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಗುಪ್ತಾ ಎಂಬ ಭಾರತೀಯನ ದೋಷಾರೋಪಣೆಯ ಬಗ್ಗೆ ವಿಶೇಷವಾಗಿ ಇಂಡೋ-ಅಮೆರಿಕನ್ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ನಿಖಿಲ್‌ ಗುಪ್ತಾ ಮೇಲಿದೆ ಮತ್ತು ಈಗ ಆತ ಜೆಕ್ ರಿಪಬ್ಲಿಕ್‌ನಲ್ಲಿ ಬಂಧನದಲ್ಲಿದ್ದಾನೆ.

ಕಳೆದ ಡಿಸೆಂಬರ್‌ನಲ್ಲಿ ಪನ್ನೂನ್ ಹತ್ಯೆ ಸಂಚು ಆರೋಪದ ಕುರಿತು ಭಾರತೀಯ ಮೂಲದ ಐವರು ಯುಎಸ್ ಕಾಂಗ್ರೆಸ್ ಸದಸ್ಯರು, ಭಾರತವು ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವುದು ಮತ್ತು ಹೊಣೆಗಾರರನ್ನು ಶಿಕ್ಷಿಸುವುದು ಬಹಳ ಮುಖ್ಯ, ಇದು ಮತ್ತೆ ಸಂಭವಿಸುವುದಿಲ್ಲ ಎಂಬ ಭರವಸೆಯನ್ನು ಒದಗಿಸಬೇಕು ಎಂದು ಹೇಳಿದ್ದರು.

ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಪನ್ನುನ್‌ನನ್ನು ಕೊಲ್ಲಲು ಗುಪ್ತಾ ಎಫ್‌ಬಿಐ ಏಜೆಂಟ್‌ಗೆ 1,00,000 ಡಾಲರ್‌ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಮೆರಿಕದ ಕೋರಿಕೆಯ ಮೇರೆಗೆ ಜೂನ್ 30 ರಂದು ಜೆಕ್ ಗಣರಾಜ್ಯದಲ್ಲಿ ಗುಪ್ತಾನನ್ನು ಬಂಧಿಸಲಾಗಿತ್ತು. ನವೆಂಬರ್ 29ರಂದು US ಫೆಡರಲ್ ಪ್ರಾಸಿಕ್ಯೂಟರ್‌ಗಳು ಗುಪ್ತಾ ವಿರುದ್ಧ ಈ ಆರೋಪ ಹೊರಿಸಿದ್ದು, ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಇಂಡೋ-ಅಮೆರಿಕನ್ ಶಾಸಕರು ಭಾರತ ಈ ಬಗ್ಗೆ ನೇರವಾಗಿ ಮತ್ತು ತ್ವರಿತವಾಗಿ ಪರಿಸ್ಥಿತಿಯನ್ನು ಪರಿಹರಿಸದಿದ್ದರೆ ಭಾರತ-ಅಮೆರಿಕ ಸಂಬಂಧಕ್ಕೆ ಗಮನಾರ್ಹವಾದ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದರು.

ಡ್ರೋನ್ ಒಪ್ಪಂದಕ್ಕೆ ವಿಳಂಬವಾದ ಅನುಮೋದನೆಗಳ ಕುರಿತು ಕಾಮೆಂಟ್‌ಗಳಿಗಾಗಿ ಸಂಪರ್ಕಿಸಿದಾಗ, ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್, ನಾವು ಔಪಚಾರಿಕವಾಗಿ ಯುಎಸ್ ಕಾಂಗ್ರೆಸ್‌ಗೆ ಸೂಚಿಸುವವರೆಗೆ ನಾವು ಶಸ್ತ್ರಾಸ್ತ್ರ ಮಾರಾಟದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತೀಯ ನೌಕಾಪಡೆ ಮತ್ತು ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಅಮೆರಿಕ ಬಾಂಧವ್ಯದ ಮೇಲೆ  ಪನ್ನೂನ್‌ ಹತ್ಯೆ ಸಂಚು ವಿಷಯ ಪ್ರಭಾವವನ್ನು ಬೀರುತ್ತದೆ ಎಂಬುವುದನ್ನು ಅಲ್ಲಗೆಳೆದಿದ್ದರು. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದರು.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...