Homeಫ್ಯಾಕ್ಟ್‌ಚೆಕ್Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಂಸದರು ಸಂಸತ್ ಭವನದಲ್ಲೇ ಥಳಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಮುಯಿಝು ಅವರ ಭಾರತ ವಿರೋಧಿ ನಿಲುವಿನಿಂದ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿರುವ ಮಾಲ್ಡೀವ್ಸ್‌ನ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಈ ಕಾರಣಕ್ಕೆ ಕೋಪಗೊಂಡ ಸಂಸದರು ಮುಯಿಝು ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಸುದ್ದಿ ಹಬ್ಬಿದೆ.

 

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್‌ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಹುಡುಕಿದ್ದೇವೆ. ಈ ವೇಳೆ, ಜನವರಿ 28,2024ರಂದು ಇಂಡಿಯನ್ ಎಕ್ಸ್‌ಪ್ರೆಸ್‌ ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

“Maldives parliament proceedings halted as MPs fight each other” ಸಂಸದರ ನಡುವೆ ಜಗಳ ಏರ್ಪಟ್ಟ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ನ ಕಲಾಪ ಸ್ಥಗಿತಗೊಂಡಿದೆ” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ “ಮಾಲ್ಡೀವಿಯನ್ ಡೆಮಾಕ್ರಾಟಿಕ್ ಪಾರ್ಟಿ (ಎಂಡಿಪಿ) ಸಂಸದ ಇಶಾ ಮತ್ತು ಆಡಳಿತ ಪಕ್ಷ ಪೀಪಲ್ಸ್‌ ನ್ಯಾಷನಲ್ ಕಾಂಗ್ರೆಸ್‌(ಪಿಎನ್‌ಸಿ) ನ ಸಂಸದರಾದ ಅಬ್ದುಲ್ಲಾ ಶಹೀಮ್, ಅಬ್ದುಲ್ ಹಕೀಂ ನಡುವಿನ ಜಗಳದ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ ಕಲಾಪ ಸ್ಥಗಿತಗೊಂಡಿದೆ” ಎಂದು ತಿಳಿಸಿದೆ. ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಿದ್ದಾರೆ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖಸಿಲ್ಲ.

ವರದಿ ಲಿಂಕ್ ಇಲ್ಲಿದೆ.

ಜನವರಿ 28ರಂದು ಎನ್‌ಡಿ ಟಿವಿ ಕೂಡ ತನ್ನ ವೆಬ್‌ಸೈಟ್‌ನಲ್ಲಿ ಈ ಸುದ್ದಿ ಪ್ರಕಟಿಸಿದ್ದು, “ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಾಯಕರು ಹೊಡೆದಾಡಿಕೊಂಡ ಬಳಿಕ ಇಂದು ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಕಲಾಪ ಸ್ಥಗಿತಗೊಂಡಿದೆ. ಚೀನಾ ಪರ ಅಧ್ಯಕ್ಷ ಮೊಹಮದ್ ಮುಯಿಝು ಅವರ ಹೊಸ ಸಚಿವ ಸಂಪುಟವನ್ನು ಅನುಮೋದಿಸುವ ಬಗ್ಗೆ ಭಿನ್ನಾಭಿಪ್ರಾಯಗಳ ಉಂಟಾಗಿ ಜಗಳ ನಡೆದಿದೆ ಎಂದು ವರದಿಗಳು ತಿಳಿಸಿವೆ. ಮುಯಿಝು ಅವರ “ಭಾರತ ವಿರೋಧಿ ನೀತಿಗಳ” ಬಗ್ಗೆ ಅನೇಕ ನಾಯಕರು ಕೋಪಗೊಂಡಿದ್ದರು. ಮಾಲ್ಡೀವ್ಸ್‌ನಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಬಗ್ಗೆ ವಿರೋಧ ಪಕ್ಷವು ಚಕಾರವೆತ್ತಿದೆ. ಭಾರತವನ್ನು ಮಾಲ್ಡೀವ್ಸ್‌ನ ಅಭಿವೃದ್ಧಿಯ ದೊಡ್ಡ ಪಾಲುದಾರ ಎಂದು ಅದು ಪರಿಗಣಿಸಿದೆ” ಎಂದು ವರದಿ ತಿಳಿಸಿದೆ. ಅಧ್ಯಕ್ಷ ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಲಾಗಿದೆ ಎಂದು ಎಲ್ಲೂ ಹೇಳಿಲ್ಲ.

ವರದಿ ಲಿಂಕ್ ಇಲ್ಲಿದೆ

ಮಾಲ್ಡೀವ್ಸ್‌ ಸಂಸದ ಇಬ್ರಾಹಿಂ ಶರೀಫ್ ಕೂಡ ಜನವರಿ 28ರಂದು ಈ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಗಲಾಟೆಯ ನಂತರ ಸಂಸದ ಶಹೀಮ್‌ ಅವರು ಗಾಯಗೊಂಡಿರುವುದನ್ನು ಸ್ಪಷ್ಟವಾಗಿ ನೋಡಬಹುದು.

ಏಜೆನ್ಸ್ ಫ್ರಾನ್ಸ್‌ ಪ್ರೆಸ್‌ (ಎಎಫ್‌ಪಿ) ಅನ್ನು ಉಲ್ಲೇಖಿಸಿ barrons.com ಜನವರಿ 29ರಂದು “Maldives Parliament Rejects Three Cabinet Members After Brawl” ಎಂಬ ಶೀರ್ಷಿಕೆಯಲ್ಲಿ ಈ ಕುರಿತು ಸುದ್ದಿ ಪ್ರಕಟಿಸಿದ್ದು, ಮಾಲ್ಡೀವ್ಸ್ ಸಂಸತ್‌ನಲ್ಲಿ ಮೂವರು ಸಚಿವರನ್ನು ನೇಮಿಸುವುದರ ವಿರುದ್ದ ಸಂಸದರು ಮತ ಚಲಾಯಿಸಿದ್ದಾರೆ. ಅದಕ್ಕೂ ಮುನ್ನ ನಡೆದ ಸಂಸದರ ನಡುವಿನ ಗಲಾಟೆಯಲ್ಲಿ ಒಬ್ಬರು ಸಂಸದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಇಲ್ಲೂ ಅಧ್ಯಕ್ಷ ಮುಯಿಝು ಅವರಿಗೆ ಥಳಿಸಿದ ಬಗ್ಗೆ ಉಲ್ಲೇಖಿಸಿಲ್ಲ.

ಸುದ್ದಿ ಲಿಂಕ್

ವಿವಿಧ ಮೂಲಗಳನ್ನು ಪರಿಶೀಲಿಸಿದಾಗ, ವೈರಲ್‌ ಆಗುತ್ತಿರುವ ವಿಡಿಯೋ ಜನವರಿ 28ರಂದು ಮಾಲ್ಡೀವ್ಸ್‌ ಸಂಸತ್‌ನಲ್ಲಿ ಸಂಸದರ ನಡುವೆ ನಡೆದ ಗಲಾಟೆಯದ್ದು, ಅಲ್ಲದೆ ಭಾರತ ವಿರೋಧಿ ನಿಲುವು ಖಂಡಿಸಿ ಸಂಸದರು ಅಧ್ಯಕ್ಷ ಮುಝಿಝು ಅವರಿಗೆ ಥಳಿಸಿರುವುದು ಅಲ್ಲ ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ಆಸ್ತಿ ಜಗಳದ ವಿಡಿಯೋ ಹಿಂದೂಗಳ ಮೇಲೆ ಮುಸ್ಲಿಮರ ದಾಳಿಯೆಂದು ತಪ್ಪಾಗಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...