Homeಫ್ಯಾಕ್ಟ್‌ಚೆಕ್Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

Fact Check: ಭಾರತವನ್ನು ವಿರೋಧಿಸಿದ್ದಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಸಂಸದರು ಥಳಿಸಿದ್ರಾ?

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಂಸದರು ಸಂಸತ್ ಭವನದಲ್ಲೇ ಥಳಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಮುಯಿಝು ಅವರ ಭಾರತ ವಿರೋಧಿ ನಿಲುವಿನಿಂದ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿರುವ ಮಾಲ್ಡೀವ್ಸ್‌ನ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಈ ಕಾರಣಕ್ಕೆ ಕೋಪಗೊಂಡ ಸಂಸದರು ಮುಯಿಝು ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಸುದ್ದಿ ಹಬ್ಬಿದೆ.

 

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್‌ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಹುಡುಕಿದ್ದೇವೆ. ಈ ವೇಳೆ, ಜನವರಿ 28,2024ರಂದು ಇಂಡಿಯನ್ ಎಕ್ಸ್‌ಪ್ರೆಸ್‌ ಈ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

“Maldives parliament proceedings halted as MPs fight each other” ಸಂಸದರ ನಡುವೆ ಜಗಳ ಏರ್ಪಟ್ಟ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ನ ಕಲಾಪ ಸ್ಥಗಿತಗೊಂಡಿದೆ” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ “ಮಾಲ್ಡೀವಿಯನ್ ಡೆಮಾಕ್ರಾಟಿಕ್ ಪಾರ್ಟಿ (ಎಂಡಿಪಿ) ಸಂಸದ ಇಶಾ ಮತ್ತು ಆಡಳಿತ ಪಕ್ಷ ಪೀಪಲ್ಸ್‌ ನ್ಯಾಷನಲ್ ಕಾಂಗ್ರೆಸ್‌(ಪಿಎನ್‌ಸಿ) ನ ಸಂಸದರಾದ ಅಬ್ದುಲ್ಲಾ ಶಹೀಮ್, ಅಬ್ದುಲ್ ಹಕೀಂ ನಡುವಿನ ಜಗಳದ ಹಿನ್ನೆಲೆ ಮಾಲ್ಡೀವ್ಸ್‌ ಸಂಸತ್‌ ಕಲಾಪ ಸ್ಥಗಿತಗೊಂಡಿದೆ” ಎಂದು ತಿಳಿಸಿದೆ. ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಿದ್ದಾರೆ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖಸಿಲ್ಲ.

ವರದಿ ಲಿಂಕ್ ಇಲ್ಲಿದೆ.

ಜನವರಿ 28ರಂದು ಎನ್‌ಡಿ ಟಿವಿ ಕೂಡ ತನ್ನ ವೆಬ್‌ಸೈಟ್‌ನಲ್ಲಿ ಈ ಸುದ್ದಿ ಪ್ರಕಟಿಸಿದ್ದು, “ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಾಯಕರು ಹೊಡೆದಾಡಿಕೊಂಡ ಬಳಿಕ ಇಂದು ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನ ಕಲಾಪ ಸ್ಥಗಿತಗೊಂಡಿದೆ. ಚೀನಾ ಪರ ಅಧ್ಯಕ್ಷ ಮೊಹಮದ್ ಮುಯಿಝು ಅವರ ಹೊಸ ಸಚಿವ ಸಂಪುಟವನ್ನು ಅನುಮೋದಿಸುವ ಬಗ್ಗೆ ಭಿನ್ನಾಭಿಪ್ರಾಯಗಳ ಉಂಟಾಗಿ ಜಗಳ ನಡೆದಿದೆ ಎಂದು ವರದಿಗಳು ತಿಳಿಸಿವೆ. ಮುಯಿಝು ಅವರ “ಭಾರತ ವಿರೋಧಿ ನೀತಿಗಳ” ಬಗ್ಗೆ ಅನೇಕ ನಾಯಕರು ಕೋಪಗೊಂಡಿದ್ದರು. ಮಾಲ್ಡೀವ್ಸ್‌ನಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಬಗ್ಗೆ ವಿರೋಧ ಪಕ್ಷವು ಚಕಾರವೆತ್ತಿದೆ. ಭಾರತವನ್ನು ಮಾಲ್ಡೀವ್ಸ್‌ನ ಅಭಿವೃದ್ಧಿಯ ದೊಡ್ಡ ಪಾಲುದಾರ ಎಂದು ಅದು ಪರಿಗಣಿಸಿದೆ” ಎಂದು ವರದಿ ತಿಳಿಸಿದೆ. ಅಧ್ಯಕ್ಷ ಅಧ್ಯಕ್ಷ ಮೊಹಮದ್ ಮುಯಿಝು ಅವರಿಗೆ ಥಳಿಸಲಾಗಿದೆ ಎಂದು ಎಲ್ಲೂ ಹೇಳಿಲ್ಲ.

ವರದಿ ಲಿಂಕ್ ಇಲ್ಲಿದೆ

ಮಾಲ್ಡೀವ್ಸ್‌ ಸಂಸದ ಇಬ್ರಾಹಿಂ ಶರೀಫ್ ಕೂಡ ಜನವರಿ 28ರಂದು ಈ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಗಲಾಟೆಯ ನಂತರ ಸಂಸದ ಶಹೀಮ್‌ ಅವರು ಗಾಯಗೊಂಡಿರುವುದನ್ನು ಸ್ಪಷ್ಟವಾಗಿ ನೋಡಬಹುದು.

ಏಜೆನ್ಸ್ ಫ್ರಾನ್ಸ್‌ ಪ್ರೆಸ್‌ (ಎಎಫ್‌ಪಿ) ಅನ್ನು ಉಲ್ಲೇಖಿಸಿ barrons.com ಜನವರಿ 29ರಂದು “Maldives Parliament Rejects Three Cabinet Members After Brawl” ಎಂಬ ಶೀರ್ಷಿಕೆಯಲ್ಲಿ ಈ ಕುರಿತು ಸುದ್ದಿ ಪ್ರಕಟಿಸಿದ್ದು, ಮಾಲ್ಡೀವ್ಸ್ ಸಂಸತ್‌ನಲ್ಲಿ ಮೂವರು ಸಚಿವರನ್ನು ನೇಮಿಸುವುದರ ವಿರುದ್ದ ಸಂಸದರು ಮತ ಚಲಾಯಿಸಿದ್ದಾರೆ. ಅದಕ್ಕೂ ಮುನ್ನ ನಡೆದ ಸಂಸದರ ನಡುವಿನ ಗಲಾಟೆಯಲ್ಲಿ ಒಬ್ಬರು ಸಂಸದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಇಲ್ಲೂ ಅಧ್ಯಕ್ಷ ಮುಯಿಝು ಅವರಿಗೆ ಥಳಿಸಿದ ಬಗ್ಗೆ ಉಲ್ಲೇಖಿಸಿಲ್ಲ.

ಸುದ್ದಿ ಲಿಂಕ್

ವಿವಿಧ ಮೂಲಗಳನ್ನು ಪರಿಶೀಲಿಸಿದಾಗ, ವೈರಲ್‌ ಆಗುತ್ತಿರುವ ವಿಡಿಯೋ ಜನವರಿ 28ರಂದು ಮಾಲ್ಡೀವ್ಸ್‌ ಸಂಸತ್‌ನಲ್ಲಿ ಸಂಸದರ ನಡುವೆ ನಡೆದ ಗಲಾಟೆಯದ್ದು, ಅಲ್ಲದೆ ಭಾರತ ವಿರೋಧಿ ನಿಲುವು ಖಂಡಿಸಿ ಸಂಸದರು ಅಧ್ಯಕ್ಷ ಮುಝಿಝು ಅವರಿಗೆ ಥಳಿಸಿರುವುದು ಅಲ್ಲ ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ಆಸ್ತಿ ಜಗಳದ ವಿಡಿಯೋ ಹಿಂದೂಗಳ ಮೇಲೆ ಮುಸ್ಲಿಮರ ದಾಳಿಯೆಂದು ತಪ್ಪಾಗಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...