Homeಮುಖಪುಟಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಜೆಡಿಎಸ್‌, ಬಿಹಾರದಲ್ಲಿ ಜೆಡಿಯು ಸೇರಿದಂತೆ ಅನೇಕ ಪಕ್ಷಗಳು ಈಗಾಗಲೇ ಬಿಜೆಪಿಯ ತೆಕ್ಕೆಗೆ ಬಿದ್ದಿವೆ. ಇದರ ಮುಂದಿವರಿದ ಭಾಗವಾಗಿ ಕೇರಳದ ಜನಪಕ್ಷಂ (ಜಾತ್ಯತೀತ) ಬಿಜೆಪಿ ಜೊತೆ ವಿಲೀನಗೊಂಡಿದೆ.

ಏಳು ಬಾರಿಯ ಕೇರಳ ಶಾಸಕ ಪಿಸಿ ಜಾರ್ಜ್ ನೇತೃತ್ವದ ಕೇರಳ ಜನಪಕ್ಷಂ (ಜಾತ್ಯತೀತ) ಬುಧವಾರ ನವದೆಹಲಿಯಲ್ಲಿ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಪಕ್ಷ ವಿಲೀನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕು ಎಂಬುವುದು ಪಕ್ಷದ ಕಾರ್ಯಕರ್ತರ ಸಾಮಾನ್ಯ ಭಾವನೆಯಾಗಿದೆ. ಹೀಗಾಗಿ, ನಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದೇವೆ ಎಂದಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಕೈ ಬಲಪಡಿಸುವ ಸಲುವಾಗಿ ಕೇರಳ ಜನಪಕ್ಷಂ (ಜಾತ್ಯತೀತ) ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಈ ಮೂಲಕ ಕೇರಳದಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಬೆಂಬಲಕ್ಕೆ ಪ್ರಬಲ ತಂಡವೊಂದು ಸೃಷ್ಟಿಯಾಗಿದೆ ಎಂದು ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಹೇಳಿದ್ದಾರೆ.

ಪಿಸಿ ಜಾರ್ಜ್ ಅವರ ಪಕ್ಷವನ್ನು ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಳ್ಳುವುದು ಬಿಜೆಪಿಯ ಯೋಜನೆಯಾಗಿತ್ತು. ಆದರೆ, ಮುಂದಿನ ದಿನಗಳಲ್ಲಿ ಜಾರ್ಜ್‌ ಒಕ್ಕೂಟ ತೊರೆದರೆ ಸಮಸ್ಯೆಯಾಗಲಿದೆ. ಅವರು ಆಗಾಗ ಪಕ್ಷದಿಂದ ಪಕ್ಷಕ್ಕೆ ಬೆಂಬಲವನ್ನು ಬದಲಾಯಿಸುತ್ತಿರುತ್ತಾರೆ. ಹಾಗಾಗಿ, ಪಕ್ಷವನ್ನೇ ವಿಲೀನ ಮಾಡಲು ಬಿಜೆಪಿ ಆಯ್ಕೆ ನೀಡಿತ್ತು. ಅದರಂತೆ, ಜಾರ್ಜ್‌ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಜಾರ್ಜ್ ಅವರು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ ಎರಡರ ಭಾಗವಾಗಿದ್ದ ಪ್ರಾದೇಶಿಕ ಪಕ್ಷಗಳಾದ ಕೇರಳ ಕಾಂಗ್ರೆಸ್ (ಮಣಿ) ಮತ್ತು ಕೇರಳ ಕಾಂಗ್ರೆಸ್ (ಜೋಸೆಫ್) ನ ಪ್ರಮುಖ ನಾಯಕರಾಗಿದ್ದರು.

ನಂತರ ಅವರು ಎರಡೂ ರಂಗಗಳಿಂದ ದೂರವಿದ್ದರು. 2016 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕೊಟ್ಟಾಯಂ ಜಿಲ್ಲೆಯ ತಮ್ಮ ತವರು ಪೂಣಜಾರ್‌ನಿಂದ ಸ್ಪರ್ಧಿಸಿದ್ದ ಅವರು ಯಶಸ್ಸು ಗಳಿಸಿದ್ದರು. ಆದರೆ 2021ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

2000 ಇಸವಿಯ ಆರಂಭದಲ್ಲಿ ಕೇರಳ ಕಾಂಗ್ರೆಸ್ (ಜೋಸೆಫ್) ನಿಂದ ಬೇರ್ಪಟ್ಟ ನಂತರ ಕೇರಳ ಕಾಂಗ್ರೆಸ್ (ಜಾತ್ಯತೀತ) ಪಕ್ಷವನ್ನು ಪಿಸಿ ಜಾರ್ಜ್ ಸ್ಥಾಪಿಸಿದ್ದರು. ಜಾರ್ಜ್ ಅವರ ಪಕ್ಷದ ವಿಲೀನವನ್ನು ಬಿಜೆಪಿಯ ಕ್ರಿಶ್ಚಿಯನ್ ಪ್ರಚಾರ ಕಾರ್ಯಕ್ರಮದ ಭಾಗವಾಗಿ ಪರಿಗಣಿಸಬಹುದು ಎಂದು ಮಾಧ್ಯಮಗಳು ಹೇಳಿವೆ.

ಇದನ್ನೂ ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...