Homeಮುಖಪುಟಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಜೆಡಿಎಸ್‌, ಬಿಹಾರದಲ್ಲಿ ಜೆಡಿಯು ಸೇರಿದಂತೆ ಅನೇಕ ಪಕ್ಷಗಳು ಈಗಾಗಲೇ ಬಿಜೆಪಿಯ ತೆಕ್ಕೆಗೆ ಬಿದ್ದಿವೆ. ಇದರ ಮುಂದಿವರಿದ ಭಾಗವಾಗಿ ಕೇರಳದ ಜನಪಕ್ಷಂ (ಜಾತ್ಯತೀತ) ಬಿಜೆಪಿ ಜೊತೆ ವಿಲೀನಗೊಂಡಿದೆ.

ಏಳು ಬಾರಿಯ ಕೇರಳ ಶಾಸಕ ಪಿಸಿ ಜಾರ್ಜ್ ನೇತೃತ್ವದ ಕೇರಳ ಜನಪಕ್ಷಂ (ಜಾತ್ಯತೀತ) ಬುಧವಾರ ನವದೆಹಲಿಯಲ್ಲಿ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಪಕ್ಷ ವಿಲೀನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕು ಎಂಬುವುದು ಪಕ್ಷದ ಕಾರ್ಯಕರ್ತರ ಸಾಮಾನ್ಯ ಭಾವನೆಯಾಗಿದೆ. ಹೀಗಾಗಿ, ನಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದೇವೆ ಎಂದಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಕೈ ಬಲಪಡಿಸುವ ಸಲುವಾಗಿ ಕೇರಳ ಜನಪಕ್ಷಂ (ಜಾತ್ಯತೀತ) ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಈ ಮೂಲಕ ಕೇರಳದಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಬೆಂಬಲಕ್ಕೆ ಪ್ರಬಲ ತಂಡವೊಂದು ಸೃಷ್ಟಿಯಾಗಿದೆ ಎಂದು ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಹೇಳಿದ್ದಾರೆ.

ಪಿಸಿ ಜಾರ್ಜ್ ಅವರ ಪಕ್ಷವನ್ನು ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಳ್ಳುವುದು ಬಿಜೆಪಿಯ ಯೋಜನೆಯಾಗಿತ್ತು. ಆದರೆ, ಮುಂದಿನ ದಿನಗಳಲ್ಲಿ ಜಾರ್ಜ್‌ ಒಕ್ಕೂಟ ತೊರೆದರೆ ಸಮಸ್ಯೆಯಾಗಲಿದೆ. ಅವರು ಆಗಾಗ ಪಕ್ಷದಿಂದ ಪಕ್ಷಕ್ಕೆ ಬೆಂಬಲವನ್ನು ಬದಲಾಯಿಸುತ್ತಿರುತ್ತಾರೆ. ಹಾಗಾಗಿ, ಪಕ್ಷವನ್ನೇ ವಿಲೀನ ಮಾಡಲು ಬಿಜೆಪಿ ಆಯ್ಕೆ ನೀಡಿತ್ತು. ಅದರಂತೆ, ಜಾರ್ಜ್‌ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಜಾರ್ಜ್ ಅವರು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ ಎರಡರ ಭಾಗವಾಗಿದ್ದ ಪ್ರಾದೇಶಿಕ ಪಕ್ಷಗಳಾದ ಕೇರಳ ಕಾಂಗ್ರೆಸ್ (ಮಣಿ) ಮತ್ತು ಕೇರಳ ಕಾಂಗ್ರೆಸ್ (ಜೋಸೆಫ್) ನ ಪ್ರಮುಖ ನಾಯಕರಾಗಿದ್ದರು.

ನಂತರ ಅವರು ಎರಡೂ ರಂಗಗಳಿಂದ ದೂರವಿದ್ದರು. 2016 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕೊಟ್ಟಾಯಂ ಜಿಲ್ಲೆಯ ತಮ್ಮ ತವರು ಪೂಣಜಾರ್‌ನಿಂದ ಸ್ಪರ್ಧಿಸಿದ್ದ ಅವರು ಯಶಸ್ಸು ಗಳಿಸಿದ್ದರು. ಆದರೆ 2021ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

2000 ಇಸವಿಯ ಆರಂಭದಲ್ಲಿ ಕೇರಳ ಕಾಂಗ್ರೆಸ್ (ಜೋಸೆಫ್) ನಿಂದ ಬೇರ್ಪಟ್ಟ ನಂತರ ಕೇರಳ ಕಾಂಗ್ರೆಸ್ (ಜಾತ್ಯತೀತ) ಪಕ್ಷವನ್ನು ಪಿಸಿ ಜಾರ್ಜ್ ಸ್ಥಾಪಿಸಿದ್ದರು. ಜಾರ್ಜ್ ಅವರ ಪಕ್ಷದ ವಿಲೀನವನ್ನು ಬಿಜೆಪಿಯ ಕ್ರಿಶ್ಚಿಯನ್ ಪ್ರಚಾರ ಕಾರ್ಯಕ್ರಮದ ಭಾಗವಾಗಿ ಪರಿಗಣಿಸಬಹುದು ಎಂದು ಮಾಧ್ಯಮಗಳು ಹೇಳಿವೆ.

ಇದನ್ನೂ ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...