Homeಮುಖಪುಟಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

ಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

- Advertisement -
- Advertisement -

ಜಾರ್ಖಾಂಡ್‌ ಸಿಎಂ ಹುದ್ದೆಗೆ  ಹೇಮಂತ್ ಸೊರೆನ್ ರಾಜೀನಾಮೆ ಬೆನ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಂಚಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದಾರೆ.

ಜಾರ್ಖಾಂಡ್‌ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಹೇಮಂತ್ ಸೊರೆನ್ ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಈ ಬಂಧನ ನಡೆದಿದೆ. ಆಡಳಿತಾರೂಢ ಮೈತ್ರಿಕೂಟವು ಹೇಳಿದಂತೆ ಹೇಮಂತ್ ಸೊರೆನ್ ಅವರ ಆಪ್ತ ಮತ್ತು ರಾಜ್ಯ ಸಾರಿಗೆ ಸಚಿವ ಚಂಪೈ ಸೊರೆನ್ ಅವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ಈಗಾಗಲೇ ಬೆಂಬಲಿಗ ಶಾಸಕರೊಂದಿಗೆ ಚಂಪೈ ಸೊರೆನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನಕ್ಕೆ ಅನುಮತಿ ಕೇಳಿದ್ದಾರೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಹಿಂದೆ ಹೇಮಂತ್ ಸೊರೆನ್ ಅವರನ್ನು ಮೂರು ಬಾರಿ ಅವರನ್ನು ವಿಚಾರಣೆ ಮಾಡಲಾಗಿತ್ತು. ಮೊದಲ ನವೆಂಬರ್ 2021ರಲ್ಲಿ EDಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಜನವರಿ 20 ಮತ್ತು 31ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಸಮನ್ಸ್ ರಾಂಚಿಯಲ್ಲಿ ಭೂಮಿ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತ್ತು.

ಸೊರೇನ್ ಅವರ ದೆಹಲಿಯ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಹೋಗಿದ್ದರು. ಈ ವೇಳೆ ನಾಟಕೀಯ ಬೆಳವಣಿಗೆ ನಡೆದಿತ್ತು. ಸೊರೇನ್ ಅವರು ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದರು. ಇಡಿ ಅಧಿಕಾರಿಗಳು 36 ಲಕ್ಷ ನಗದು ಹಾಗೂ 1 ಕೋಟಿಗೂ ಹೆಚ್ಚು ಬೆಲೆ ಬಾಳುವ ಬಿಎಂಡಬ್ಲ್ಯು ಎಕ್ಸ್‌7 ಕಾರನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಸೊರೇನ್ ಅವರು ರಾಂಚಿಯಲ್ಲಿ ಕಾಣಿಸಿಕೊಂಡಿದ್ದರು. ಬುಧವಾರ ಸಲ್ಲಿಸಿದ ದೂರಿನಲ್ಲಿ ಬಿಎಂಡಬ್ಲ್ಯು ಕಾರಿನ ಮಾಲೀಕ ನಾನಲ್ಲ. ನಾನು ಯಾವುದೇ ಅಕ್ರಮ ಹಣವನ್ನು ಹೊಂದಿಲ್ಲ ಎಂದು ಹೇಮಂತ್ ಸೊರೇನ್ ಹೇಳಿದ್ದರು.

600 ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಏಳು ಸಮನ್ಸ್‌ಗಳನ್ನು ಹೇಮಂತ್ ಸೊರೆನ್‌ಗೆ ನೀಡಲಾಗಿತ್ತು. ಬಂಧನದ ನಿರೀಕ್ಷೆಯಲ್ಲಿದ್ದ ಸೊರೆನ್‌ ಮಂಗಳವಾರ ಮೈತ್ರಿಕೂಟದ ಶಾಸಕರೊಂದಿಗೆ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯ ಪ್ರಶ್ನೆಗೆ ಚರ್ಚೆ ನಡೆಸಿದರು. ಅವರ ಪತ್ನಿ ಕಲ್ಪನಾ ಸೊರೆನ್ ಸಿಎಂ ಹುದ್ದೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳನ್ನು ಗಮನಿಸಿ ಈ ಆಲೋಚನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಭೂ ಹಗರಣ ಪ್ರಕರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ ದೊಡ್ಡ ದಂಧೆಯನ್ನು ಒಳಗೊಂಡಿದೆ ಇಡಿ ಆರೋಪಿಸಿದೆ. ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛಾವಿ ರಂಜನ್ ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ 14 ಜನರನ್ನು ಇದುವರೆಗೆ ಬಂಧಿಸಲಾಗಿದೆ.

ಇದನ್ನು ಓದಿ: ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...