Homeಮುಖಪುಟಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

ಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

- Advertisement -
- Advertisement -

ಜಾರ್ಖಾಂಡ್‌ ಸಿಎಂ ಹುದ್ದೆಗೆ  ಹೇಮಂತ್ ಸೊರೆನ್ ರಾಜೀನಾಮೆ ಬೆನ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಂಚಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದಾರೆ.

ಜಾರ್ಖಾಂಡ್‌ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಹೇಮಂತ್ ಸೊರೆನ್ ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಈ ಬಂಧನ ನಡೆದಿದೆ. ಆಡಳಿತಾರೂಢ ಮೈತ್ರಿಕೂಟವು ಹೇಳಿದಂತೆ ಹೇಮಂತ್ ಸೊರೆನ್ ಅವರ ಆಪ್ತ ಮತ್ತು ರಾಜ್ಯ ಸಾರಿಗೆ ಸಚಿವ ಚಂಪೈ ಸೊರೆನ್ ಅವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ಈಗಾಗಲೇ ಬೆಂಬಲಿಗ ಶಾಸಕರೊಂದಿಗೆ ಚಂಪೈ ಸೊರೆನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನಕ್ಕೆ ಅನುಮತಿ ಕೇಳಿದ್ದಾರೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಹಿಂದೆ ಹೇಮಂತ್ ಸೊರೆನ್ ಅವರನ್ನು ಮೂರು ಬಾರಿ ಅವರನ್ನು ವಿಚಾರಣೆ ಮಾಡಲಾಗಿತ್ತು. ಮೊದಲ ನವೆಂಬರ್ 2021ರಲ್ಲಿ EDಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಜನವರಿ 20 ಮತ್ತು 31ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಸಮನ್ಸ್ ರಾಂಚಿಯಲ್ಲಿ ಭೂಮಿ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತ್ತು.

ಸೊರೇನ್ ಅವರ ದೆಹಲಿಯ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಹೋಗಿದ್ದರು. ಈ ವೇಳೆ ನಾಟಕೀಯ ಬೆಳವಣಿಗೆ ನಡೆದಿತ್ತು. ಸೊರೇನ್ ಅವರು ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದರು. ಇಡಿ ಅಧಿಕಾರಿಗಳು 36 ಲಕ್ಷ ನಗದು ಹಾಗೂ 1 ಕೋಟಿಗೂ ಹೆಚ್ಚು ಬೆಲೆ ಬಾಳುವ ಬಿಎಂಡಬ್ಲ್ಯು ಎಕ್ಸ್‌7 ಕಾರನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಸೊರೇನ್ ಅವರು ರಾಂಚಿಯಲ್ಲಿ ಕಾಣಿಸಿಕೊಂಡಿದ್ದರು. ಬುಧವಾರ ಸಲ್ಲಿಸಿದ ದೂರಿನಲ್ಲಿ ಬಿಎಂಡಬ್ಲ್ಯು ಕಾರಿನ ಮಾಲೀಕ ನಾನಲ್ಲ. ನಾನು ಯಾವುದೇ ಅಕ್ರಮ ಹಣವನ್ನು ಹೊಂದಿಲ್ಲ ಎಂದು ಹೇಮಂತ್ ಸೊರೇನ್ ಹೇಳಿದ್ದರು.

600 ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಏಳು ಸಮನ್ಸ್‌ಗಳನ್ನು ಹೇಮಂತ್ ಸೊರೆನ್‌ಗೆ ನೀಡಲಾಗಿತ್ತು. ಬಂಧನದ ನಿರೀಕ್ಷೆಯಲ್ಲಿದ್ದ ಸೊರೆನ್‌ ಮಂಗಳವಾರ ಮೈತ್ರಿಕೂಟದ ಶಾಸಕರೊಂದಿಗೆ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯ ಪ್ರಶ್ನೆಗೆ ಚರ್ಚೆ ನಡೆಸಿದರು. ಅವರ ಪತ್ನಿ ಕಲ್ಪನಾ ಸೊರೆನ್ ಸಿಎಂ ಹುದ್ದೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳನ್ನು ಗಮನಿಸಿ ಈ ಆಲೋಚನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಭೂ ಹಗರಣ ಪ್ರಕರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ ದೊಡ್ಡ ದಂಧೆಯನ್ನು ಒಳಗೊಂಡಿದೆ ಇಡಿ ಆರೋಪಿಸಿದೆ. ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛಾವಿ ರಂಜನ್ ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ 14 ಜನರನ್ನು ಇದುವರೆಗೆ ಬಂಧಿಸಲಾಗಿದೆ.

ಇದನ್ನು ಓದಿ: ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...