Homeಮುಖಪುಟವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

- Advertisement -
- Advertisement -

ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರವಿರುವ ಉತ್ತರಪ್ರದೇಶದಲ್ಲಿ ವಿವಾಹಕ್ಕೆ ಸಂಬಂಧಿಸಿದ  ಬಹುದೊಡ್ಡ ಹಗರಣವೊಂದು ಬೆಳಕಿಗೆ ಬಂದಿದ್ದು, ನೂರಾರು ವಧುಗಳು ವರರಿಲ್ಲದೆ ವಿವಾಹವಾಗಿದ್ದಾರೆ. ‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿ ಕೋಟ್ಯಾಂತರ ರೂ. ಹಗರಣ ನಡೆದಿರುವ ಆರೋಪ ಕೇಳಿ ಬಂದಿದೆ.

ಉತ್ತರಪ್ರದೇಶದ ಬಲಿಯಾ ಪ್ರದೇಶದಲ್ಲಿ ಸುಮಾರು 568 ವಧುಗಳು ಹಣಕ್ಕಾಗಿ ವರರಿಲ್ಲದೆ ವಿವಾಹವಾಗಿದ್ದಾರೆ. ವಿವಾಹ ಸಮಾರಂಭವು ಜನವರಿ 25ರಂದು ನಡೆದಿದೆ ಮತ್ತು ವಧುವಿನಂತೆ ನಟಿಸಿದ ಯುವತಿಯರು ತಮ್ಮ ಭಾವಿ ಪತಿಗಳಿಲ್ಲದೆ ಏಕಾಂಗಿಯಾಗಿ ಮದುವೆಯ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಕುರಿತ ಅಚ್ಚರಿಯ ವಿಡಿಯೋಗಳು ಕೂಡ ವೈರಲ್‌ ಆಗಿದೆ.

ಮುಖ್ಯಮಂತ್ರಿಗಳ ವಿವಾಹ ಯೋಜನೆಯಡಿ ನೀಡುವ ಹಣವನ್ನು ಕಬಳಿಸಲು ಸ್ಥಳೀಯ ಆಡಳಿತವು ಈ ನಕಲಿ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಯೋಜನೆಯಡಿಯಲ್ಲಿ ಸರಕಾರವು ತನ್ನ ಮದುವೆಯ ಸಮಯದಲ್ಲಿ ಪ್ರತಿಯೊಬ್ಬ ಬಡ ವಧುವಿಗೆ 51,000 ರೂ.ನೀಡುತ್ತಾರೆ. ಆದರೆ ವಿವಾಹ ಕಾರ್ಯಕ್ರಮದ ಸಂಘಟಕರು ಯಾದೃಚ್ಛಿಕವಾಗಿ ಹುಡುಗಿಯರನ್ನು ಒಟ್ಟುಗೂಡಿಸಿ ಹಣಕ್ಕಾಗಿ ವಧುವಿನಂತೆ ಪೋಸ್ ನೀಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಮೊದಲು ಪತ್ರಕರ್ತ ಸಚಿನ್ ಗುಪ್ತಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನವರಿ 25ರಂದು ಮುಖ್ಯಮಂತ್ರಿಗಳ ಗುಂಪು ವಿವಾಹ ಯೋಜನೆಯಡಿ 568 ಜೋಡಿಗಳು ವಿವಾಹವಾದರು. ವರನಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ವಧುಗಳಿಗೆ ಮಾಲೆ ಹಾಕಲಾಯಿತು. ಅನೇಕರು ಹಲವು ವರ್ಷಗಳ ಹಿಂದೆಯೇ ಮದುವೆಯಾಗಿದ್ದರು. ವಿವಾಹ ಕಾರ್ಯಕ್ರಮದಲ್ಲಿ ವಧು-ವರರಾಗಿ ಕಾಣಿಸಿಕೊಂಡವರಲ್ಲಿ ಅನೇಕರು ಸಹೋದರ-ಸಹೋದರಿಯರಾಗಿದ್ದರು. ದಂಪತಿಗಳಂತೆ ಪೋಸ್ ಕೊಡಲು ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಳ್ಳಲು ಮತ್ತು ಸರ್ಕಾರದ ಹಣವನ್ನು ಹಂಚಿಕೊಳ್ಳಲು ಈ ಎಲ್ಲಾ ನಾಟಕವನ್ನು ಮಾಡಲಾಗಿದೆ ಎಂದು ಪೋಸ್ಟ್‌ನಲ್ಲಿ ಆರೋಪಿಸಿದ್ದರು.

ವೀಡಿಯೊದಲ್ಲಿ ವಧುವಿನ ಉಡುಪಿನಲ್ಲಿರುವ ಯುವತಿಯರು ಧ್ವನಿವರ್ಧಕದಲ್ಲಿ ನೀಡಲಾದ ಸಲಹೆಗಳ ಪ್ರಕಾರ, ತಮ್ಮನ್ನು ತಾವು ಹಾರ ಹಾಕಿಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವು ಪುರುಷರು ಕೂಡ ಹೂಮಾಲೆಗಳನ್ನು ಹಾಕಿಕೊಂಡಿದ್ದರು. ಆದರೆ ಅವರು ನಿಜವಾಗಿಯೂ ಮದುವೆಯಾಗಲಿಲ್ಲ, ಬರೀ ಡ್ರಾಮ ಮಾಡಿದ್ದರು ಎನ್ನುವುದು ಬಯಲಾಗಿದೆ.

ವಂಚನೆ ಆರೋಪದ ಮೇಲೆ ಎಫ್‌ಐಆರ್‌:

ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿಯಲ್ಲಿ ವಂಚನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಮಾಜ ಕಲ್ಯಾಣ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ ಮತ್ತು ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜನವರಿ 25 ರಂದು ಮಣಿಯಾರ್ ಇಂಟರ್ ಕಾಲೇಜಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈಗಾಗಲೇ ಮದುವೆಯಾಗಿದ್ದ ಅನೇಕರು ಮತ್ತೆ ಮದುವೆಯಾಗಿದ್ದಾರೆ. ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯು ಸಮಾಜ ಕಲ್ಯಾಣ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವಕ-ಯುವತಿಯರ ವಿವಾಹಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಮತ್ತು ಅರ್ಚನಾ, ರಂಜನಾ ಯಾದವ್, ಸುಮನ್ ಚೌಹಾಣ್, ಪ್ರಿಯಾಂಕಾ, ಸೋನಂ, ಪೂಜಾ, ಸಂಜು ಮತ್ತು ರಮಿತಾ ಸೇರಿದಂತೆ ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮನಿಯಾರ್ ಎಸ್‌ಎಚ್‌ಒ ಮಂತೋಷ್ ಸಿಂಗ್ ತಿಳಿಸಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿರುವ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೀಪಕ್ ಶ್ರೀವಾಸ್ತವ ಮಾತನಾಡಿ, ಈ ಯೋಜನೆಯಡಿ ಸಾಮೂಹಿಕ ವಿವಾಹ ನಡೆದ ಬಳಿಕ ಈಗಾಗಲೇ ವಿವಾಹವಾಗಿದ್ದ ವಧು-ವರರು ಮತ್ತೆ ವಿವಾಹವಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜನವರಿ 29ರಂದು ಮುಖ್ಯ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಅನರ್ಹ ಅರ್ಜಿದಾರರು ನೈಜ ಸಂಗತಿಗಳನ್ನು ಮರೆಮಾಚುವ ಮೂಲಕ ಯೋಜನೆಯಡಿ ಲಾಭ ಪಡೆಯಲು ಅಕ್ರಮವಾಗಿ ಅರ್ಜಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ರವೀಂದ್ರಕುಮಾರ್ ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದ ಫಲಾನುಭವಿಗಳಿಗೆ ಇನ್ನೂ ಹಣ ವಿತರಣೆಯಾಗಿಲ್ಲ. ಇದುವರೆಗೆ ಸಹಾಯಕ ಅಭಿವೃದ್ಧಿ ಅಧಿಕಾರಿ ಹಾಗೂ ಎಂಟು ಮಂದಿ ಫಲಾನುಭವಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿ ತಪ್ಪಿತಸ್ಥರೆಂದು ತಿಳಿದು ಬಂದಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಆಡಳಿತಾರೂಢ ಬಿಜೆಯ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಯುವತಿಯರ ಜೀವನದ ಮೇಲೆ ಭಾವನಾತ್ಮಕ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿಯಲ್ಲಿ 51,000ರೂ.ಗಳನ್ನು ಪಾವತಿಸಲಾಗುತ್ತದೆ. ಇದರಲ್ಲಿ 35,000ರೂ.ವಧುವಿಗೆ, 10,000ರೂ.ವೈವಾಹಿಕ ಸಾಮಗ್ರಿಗಳನ್ನು ಖರೀದಿಸಲು ಮತ್ತು 6,000ರೂ. ಕಾರ್ಯಕ್ರಮಕ್ಕೆ ವೆಚ್ಚವಾಗಿ ಪಾವತಿಸಲಾಗುತ್ತದೆ ಎಂದು ಸರ್ಕಾರದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...