Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ: ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ ಮುಸ್ಲಿಂ ಪರ ಅರ್ಜಿದಾರರು

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ: ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ ಮುಸ್ಲಿಂ ಪರ ಅರ್ಜಿದಾರರು

- Advertisement -
- Advertisement -

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿ ನಿನ್ನೆ ಆದೇಶ ಹೊರಡಿಸಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಅಲಹಾಬಾದ್ ಹೈಕೋರ್ಟ್‌ ಮೊರೆ ಹೋಗಲು ಮುಸ್ಲಿಂ ಪರ ಅರ್ಜಿದಾರರು ಮುಂದಾಗಿದ್ದಾರೆ.

ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಬ್ಯಾರಿಕೇಡ್‌ಗಳನ್ನು ತೆಗೆಯುವುದು ಸೇರಿದಂತೆ ವ್ಯವಸ್ಥೆಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಅರ್ಚಕರಿಂದ ಪ್ರಾರ್ಥನೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿತ್ತು.

ವಾರಣಾಸಿ ನ್ಯಾಯಾಲಯದ ಈ ಆದೇಶದ ಕುರಿತು ಪ್ರತಿಕ್ರಿಯಿಸಿದ ಮುಸ್ಲಿಂ ಪರ ವಕೀಲ ಅಖ್ಲಾಕ್ ಅಹ್ಮದ್, ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವುದಾಗಿ ಹೇಳಿದ್ದಾರೆ. ಈ ಆದೇಶವು 2022ರ ಅಡ್ವೊಕೇಟ್ ಕಮಿಷನರ್ ವರದಿ, 1937ರ ಎಎಸ್‌ಐ ವರದಿಯನ್ನು ಕಡೆಗಣಿಸಿದೆ. 1993ರ ಮೊದಲು ಪ್ರಾರ್ಥನೆಗಳನ್ನು ನಡೆಸಿರುವ ಬಗ್ಗೆ ಹಿಂದೂ ಕಡೆಯವರು ಯಾವುದೇ ಸಾಕ್ಷ್ಯವನ್ನು ನೀಡಿಲ್ಲ.  ಸ್ಥಳದಲ್ಲಿ ಅಂತಹ ಯಾವುದೇ ವಿಗ್ರಹವಿರಲಿಲ್ಲ ಎಂದು ಹೇಳಿದ್ದಾರೆ.

ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ವಕೀಲ ಮೆರಾಜುದ್ದೀನ್ ಸಿದ್ದಿಕಿ, ಅದೇಶದ ವಿರುದ್ಧ ಉನ್ನತ ನ್ಯಾಯಾಲಯಗಳ ಮೊರೆ ಹೋಗುತ್ತೇವೆ. ನಾನು ಅಂತಹ ಯಾವುದೇ ಆದೇಶವನ್ನು ಸ್ವೀಕರಿಸುವುದಿಲ್ಲ,  ನಾವು ಕಾನೂನು ಹೋರಾಟ ಮಾಡುತ್ತೇವೆ, ರಾಜಕೀಯ ಲಾಭ ಪಡೆಯಲು ಇದು ನಡೆಯುತ್ತಿದೆ, ಬಾಬ್ರಿಯಲ್ಲಿ ಮಾಡಿದ ಅದೇ ವಿಧಾನವನ್ನು ಇಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕಮಿಷನರ್ ವರದಿ ಮತ್ತು ಎಎಸ್‌ಐ ವರದಿಯು ಒಳಗೆ ಏನೂ ಇಲ್ಲ ಎಂದು ಹೇಳಿತ್ತು,  ನ್ಯಾಯಾಲಯದ ಆದೇಶದಿಂದ ನಮಗೆ ತುಂಬಾ ಅಸಮಾಧಾನವಾಗಿದೆ. 1993ಕ್ಕಿಂತ ಮೊದಲು ಅಲ್ಲಿ ಪ್ರಾರ್ಥನೆಗಳು ನಡೆದಿವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಮೆರಾಜುದ್ದೀನ್ ಸಿದ್ದಿಕಿ ಹೇಳಿದ್ದಾರೆ.

ನ್ಯಾಯಾಲಯ ನಿನ್ನೆ ನೀಡಿದ ಆದೇಶದ ಬಳಿಕ ಮಾತನಾಡಿದ್ದ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಜಿಲ್ಲಾಡಳಿತವು ಈ ಬಗ್ಗೆ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿ ಒಟ್ಟು 4 ನೆಲ ಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿತ್ತು.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...