Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮುಂದುವರಿದಿದ್ದು, ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಕಾರ್ಮಿಕರ ಜೊತೆ ಸಮಾಲೋಚನೆಯನ್ನು ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಪುನರಾರಂಭಿಸಿದ್ದಾರೆ,  ಮುರ್ಷಿದಾಬಾದ್‌ನ ರಘುನಾಥಗಂಜ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಿನ್ನೆ ಯಾತ್ರೆಯು ಮಾಲ್ಡಾ ಜಿಲ್ಲೆಯ ಹರಿಶ್ಚಂದ್ರಪುರದಿಂದ ಪಶ್ಚಿಮ ಬಂಗಾಳಕ್ಕೆ ಮರುಪ್ರವೇಶಿಸುತ್ತಿದ್ದಂತೆ, ಸಿಪಿಐ(ಎಂ) ಕಾರ್ಯಕರ್ತರು ಮತ್ತು ಬೆಂಬಲಿಗರು ಕಾಂಗ್ರೆಸ್‌ ಯಾತ್ರೆಯಲ್ಲಿ ಸೇರಿಕೊಂಡಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಾಲ್ಡಾ ಜಿಲ್ಲೆಯಲ್ಲಿ ಯಾತ್ರೆಯ ಮಾರ್ಗದುದ್ದಕ್ಕೂ ಸಿಪಿಐ(ಎಂ) ಬೆಂಬಲಿಗರು ಪಕ್ಷದ ಕೆಂಪು ಬಾವುಟಗಳನ್ನು ಹಿಡಿದು ರಾಹುಲ್‌ ಗಾಂಧಿ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ರೀತಿಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಇಂದು “ಅಭೂತಪೂರ್ವ” ಎಂದು ಬಣ್ಣಿಸಿದ್ದಾರೆ. ಪ.ಬಂಗಾಳದಲ್ಲಿ ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಈ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

ರಾಹುಲ್‌ ಗಾಂಧಿ ಕಾರಿಗೆ ಕಲ್ಲು ತೂರಾಟ ನಡೆಸಲಾಗಿದೆಯಾ?

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ವಾಹನದ ಮುಂದೆ ಬರುತ್ತಿದ್ದಂತೆ ಹಠಾತ್ ಬ್ರೇಕ್ ಹಾಕಿದಾಗ ರಾಹುಲ್ ಗಾಂಧಿ ಅವರ ಕಾರಿನ ಹಿಂದಿನ ಕಿಟಕಿ ಗಾಜು ಪುಡಿಪುಡಿಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿಕೊಂಡಿದೆ. ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರಾಹುಲ್ ಜಿ ಅವರನ್ನು ಭೇಟಿಯಾಗಲು ಭಾರಿ ಜನರು ಬಂದಿದ್ದರು. ಈ ಗುಂಪಿನಲ್ಲಿ, ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ರಾಹುಲ್ ಜಿ ಅವರನ್ನು ಭೇಟಿ ಮಾಡಲು ಅವರ ಕಾರಿನ ಮುಂದೆ ಬಂದರು, ಇದರಿಂದಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಲಾಯಿತು. ಆಗ ಭದ್ರತಾ ವೃತ್ತದಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜಿಗೆ ಹಾನಿಯಾಗಿದೆ. ಜನನಾಯಕ ರಾಹುಲ್ ಗಾಂಧಿ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಸಾರ್ವಜನಿಕರು ಅವರೊಂದಿಗಿದ್ದಾರೆ, ಸಾರ್ವಜನಿಕರು ಅವರನ್ನು ಸುರಕ್ಷಿತವಾಗಿರಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಪ.ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ಮಾಲ್ಡಾ ಜಿಲ್ಲೆಯಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳು ಕಾರಿಗೆ “ಕಲ್ಲು ತೂರಾಟ” ಮಾಡದ್ದಾರೆ ಎಂದು ಹೇಳಿದ್ದರು.

ಈ ಕುರಿತು ಕಾಂಗ್ರೆಸ್‌ನ ಸುಪ್ರಿಯಾ ಶ್ರೀನಾಟೆ ಅವರು ಸ್ಪಷ್ಟನೆಯನ್ನು ನೀಡಿದ್ದು, ಸುಳ್ಳು ಸುದ್ದಿಗಳಿಗೆ ಸ್ಪಷ್ಟೀಕರಣದ ಅಗತ್ಯವಿದೆ. ರಾಹುಲ್ ಜೀ ಅವರನ್ನು ಭೇಟಿಯಾಗಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಅವರನ್ನು ಭೇಟಿ ಮಾಡಲು ಮುಂದಾದಾಗ, ಕಾರು ನಿಲ್ಲಿಸಬೇಕಾಯಿತು. ಸೆಕ್ಯುರಿಟಿ ಸರ್ಕಲ್ ನಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜು ಮುರಿದಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಜನವರಿ 14ರಂದು ಮಣಿಪುರದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದ್ದು, 67 ದಿನಗಳಲ್ಲಿ 6,713 ಕಿಲೋಮೀಟರ್ ಕ್ರಮಿಸಲಿದೆ. 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಯಾತ್ರೆ ಸಾಗಿ ಮಾರ್ಚ್ 20 ರಂದು ಮುಂಬೈನಲ್ಲಿ ಯಾತ್ರೆ ಸಮಾಪ್ತಿಗೊಳ್ಳಲಿದೆ.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...