Homeಮುಖಪುಟಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

- Advertisement -
- Advertisement -

ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಡೆಸುತ್ತಿರುವ ಪ್ರಾಥಮಿಕ ಶಾಲೆಯೊಂದರ ಮೂವರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕಳೆದ ಎರಡು ವರ್ಷಗಳಿಂದ ಶಾಲೆಯ ಆವರಣದ ಹೊರಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ 8, 10 ಮತ್ತು 12 ವರ್ಷ ವಯಸ್ಸಿನ ಹುಡುಗಿಯರನ್ನು ಅವರದ್ದೇ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 9 ವರ್ಷದ ಹುಡುಗ ಅಪರಿಚಿತ ವ್ಯಕ್ತಿಯ ಬಳಿಗೆ ಕರೆದೊಯ್ದಿದ್ದಾನೆ. ಜನವರಿ 23 ರಿಂದ ತಿರುವನ್ಮಿಯೂರ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರೂ, ಜನವರಿ 31 ರವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

9 ವರ್ಷದ ಬಾಲಕ ಇತ್ತೀಚೆಗೆ ನಾಲ್ಕನೇ ಹುಡುಗಿಯನ್ನೂ ಅಪರಿಚಿತ ವ್ಯಕ್ತಿ ಬಳಿ ಕರೆದೊಯ್ದಿದ್ದ. ಆದರೆ, ಆಕೆ ಆತನ ಕೈಯಿಂದ ತಪ್ಪಿಸಿಕೊಂಡು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಮೂವರು ಸಂತ್ರಸ್ತ ಬಾಲಕಿಯರನ್ನು ವಿಚಾರಿಸಿದಾಗ, ಮೊದಲು ಅವರು ಮಾಹಿತಿ ನೀಡಿರಲಿಲ್ಲ. ಬಳಿಕ ನಡೆದಿರುವ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆರೋಪಿ ಬಾಲಕಿಯರಿಗೆ ಅವರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕೆ ಅವರು ದೌರ್ಜನ್ಯದ ಬಗ್ಗೆ ಯಾರಿಗೂ ತಿಳಿಸಿಲ್ಲ ಎಂದು ವರದಿ ತಿಳಿಸಿದೆ.

ಒಬ್ಬ ಬಾಲಕಿಯ ಪೋಷಕರು ಜನವರಿ 23 ರಂದು ಪೊಲೀಸರನ್ನು ಸಂಪರ್ಕಿಸಿ ಲಿಖಿತವಾಗಿ ದೂರು ನೀಡಿದ್ದಾರೆ. ಆದರೆ, ದೂರಿನ ಪ್ರತಿಗೆ ಸಹಿ ಹಾಕಲು ಅವರು ಹೆದರುತ್ತಿದ್ದರು ಎಂದು ನ್ಯೂಸ್‌ ಮಿನಿಟ್ ಹೇಳಿದೆ. ಬಾಲಕಿಯೊಬ್ಬಳ ಪೋಷಕರು ದೂರು ದಾಖಲಿಸಿದ ಬಳಿಕ, ಬಾಲಕಿಯರನ್ನು ಆರೋಪಿಯ ಬಳಿಗೆ ಕರೆದೊಯ್ಯುತ್ತಿದ್ದ ಒಂಬತ್ತು ವರ್ಷದ ಬಾಲಕ ಮತ್ತು ಆತನ ತಾಯಿಯನ್ನು ತಿರುವನ್ಮಿಯೂರ್ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಬಾಲಕನನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಆತನನ್ನು ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾರಂತೆ. ಬಾಲ ನ್ಯಾಯ ಮಂಡಳಿಯ ಮುಂದೆ ಬಾಲಕನನ್ನು ಹಾಜರುಪಡಿಸಬೇಕಾದ ಪೊಲೀಸರು, ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ದೇವನೇಯನ್ ಹೇಳಿದ್ದಾರೆ.

ಬಾಲಕಿಯರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಲಿಖಿತ ದೂರು ನೀಡದ ಕಾರಣ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿರುವನ್ಮಿಯೂರ್ ಪೊಲೀಸ್ ಠಾಣೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಪ್ರಸ್ತುತ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿದ್ದು, ಎಫ್‌ಐಆರ್ ದಾಖಲಿಸಲು ಪೊಲೀಸರು ಅವರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಶಾಲೆಯ ಸಿಬ್ಬಂದಿ ಸಂತ್ರಸ್ತ ಬಾಲಕಿಯರೊಂದಿಗೆ ಮಾತನಾಡಿದ್ದಾರೆ. ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಜಿಸಿಸಿಯ ಉಪ ಆಯುಕ್ತ (ಶಿಕ್ಷಣ) ಶರಣ್ಯ ಆರಿ ಹೇಳಿದ್ದಾಗಿ ನ್ಯೂಸ್‌ ಮಿನಿಟ್ ತಿಳಿಸಿದೆ.

ಇನ್ನೂ ಎಫ್‌ಐಆರ್ ದಾಖಲಿಸದಿರುವ ಪೊಲೀಸರ ಕ್ರಮವು ಅಪರಾಧವಾಗಿದೆ. ಏಕೆಂದರೆ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 19 ಕಡ್ಡಾಯವಾಗಿ ಎಫ್‌ಐಆರ್‌ ದಾಖಲಿಸುವಂತೆ ಹೇಳುತ್ತದೆ. ಪೊಲೀಸರು ಮಾಡಿರುವ ತಪ್ಪಿಗೆ ಅವರು ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶವಿಲ್ಲದೆ ಪೊಲೀಸರು ಎಫ್‌ಐಆರ್ ದಾಖಲಿಸಬಹುದು ಎಂದು ದೇವನೇಯನ್ ತಿಳಿಸಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವಿದೆ. ಅವರು ಕೂಡಲೇ ಎಫ್‌ಐಆರ್ ದಾಖಲಿಸಿ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು ಎಂದು ದೇವನೇಯನ್ ಟೀಕಿಸಿದ್ದಾರೆ. ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರ ಮತ್ತು ಸೊಸೆ ದಲಿತ ಬಾಲಕಿಯ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಉಲ್ಲೇಖಿಸಿದ ಅವರು “ತಿರುವನ್ಮಿಯೂರ್ ಪೊಲೀಸರು ಈ ರೀತಿಯ ಪ್ರಕರಣವನ್ನು ನಿರ್ಲಕ್ಷ್ಯದಿಂದ ನಿರ್ವಹಿಸುತ್ತಿರುವುದು ಇದು ಎರಡನೇ ಬಾರಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...