Homeಮುಖಪುಟಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

- Advertisement -
- Advertisement -

ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಡೆಸುತ್ತಿರುವ ಪ್ರಾಥಮಿಕ ಶಾಲೆಯೊಂದರ ಮೂವರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕಳೆದ ಎರಡು ವರ್ಷಗಳಿಂದ ಶಾಲೆಯ ಆವರಣದ ಹೊರಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ 8, 10 ಮತ್ತು 12 ವರ್ಷ ವಯಸ್ಸಿನ ಹುಡುಗಿಯರನ್ನು ಅವರದ್ದೇ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 9 ವರ್ಷದ ಹುಡುಗ ಅಪರಿಚಿತ ವ್ಯಕ್ತಿಯ ಬಳಿಗೆ ಕರೆದೊಯ್ದಿದ್ದಾನೆ. ಜನವರಿ 23 ರಿಂದ ತಿರುವನ್ಮಿಯೂರ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರೂ, ಜನವರಿ 31 ರವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

9 ವರ್ಷದ ಬಾಲಕ ಇತ್ತೀಚೆಗೆ ನಾಲ್ಕನೇ ಹುಡುಗಿಯನ್ನೂ ಅಪರಿಚಿತ ವ್ಯಕ್ತಿ ಬಳಿ ಕರೆದೊಯ್ದಿದ್ದ. ಆದರೆ, ಆಕೆ ಆತನ ಕೈಯಿಂದ ತಪ್ಪಿಸಿಕೊಂಡು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಮೂವರು ಸಂತ್ರಸ್ತ ಬಾಲಕಿಯರನ್ನು ವಿಚಾರಿಸಿದಾಗ, ಮೊದಲು ಅವರು ಮಾಹಿತಿ ನೀಡಿರಲಿಲ್ಲ. ಬಳಿಕ ನಡೆದಿರುವ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆರೋಪಿ ಬಾಲಕಿಯರಿಗೆ ಅವರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕೆ ಅವರು ದೌರ್ಜನ್ಯದ ಬಗ್ಗೆ ಯಾರಿಗೂ ತಿಳಿಸಿಲ್ಲ ಎಂದು ವರದಿ ತಿಳಿಸಿದೆ.

ಒಬ್ಬ ಬಾಲಕಿಯ ಪೋಷಕರು ಜನವರಿ 23 ರಂದು ಪೊಲೀಸರನ್ನು ಸಂಪರ್ಕಿಸಿ ಲಿಖಿತವಾಗಿ ದೂರು ನೀಡಿದ್ದಾರೆ. ಆದರೆ, ದೂರಿನ ಪ್ರತಿಗೆ ಸಹಿ ಹಾಕಲು ಅವರು ಹೆದರುತ್ತಿದ್ದರು ಎಂದು ನ್ಯೂಸ್‌ ಮಿನಿಟ್ ಹೇಳಿದೆ. ಬಾಲಕಿಯೊಬ್ಬಳ ಪೋಷಕರು ದೂರು ದಾಖಲಿಸಿದ ಬಳಿಕ, ಬಾಲಕಿಯರನ್ನು ಆರೋಪಿಯ ಬಳಿಗೆ ಕರೆದೊಯ್ಯುತ್ತಿದ್ದ ಒಂಬತ್ತು ವರ್ಷದ ಬಾಲಕ ಮತ್ತು ಆತನ ತಾಯಿಯನ್ನು ತಿರುವನ್ಮಿಯೂರ್ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಬಾಲಕನನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಆತನನ್ನು ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾರಂತೆ. ಬಾಲ ನ್ಯಾಯ ಮಂಡಳಿಯ ಮುಂದೆ ಬಾಲಕನನ್ನು ಹಾಜರುಪಡಿಸಬೇಕಾದ ಪೊಲೀಸರು, ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ದೇವನೇಯನ್ ಹೇಳಿದ್ದಾರೆ.

ಬಾಲಕಿಯರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಲಿಖಿತ ದೂರು ನೀಡದ ಕಾರಣ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿರುವನ್ಮಿಯೂರ್ ಪೊಲೀಸ್ ಠಾಣೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಪ್ರಸ್ತುತ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿದ್ದು, ಎಫ್‌ಐಆರ್ ದಾಖಲಿಸಲು ಪೊಲೀಸರು ಅವರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಶಾಲೆಯ ಸಿಬ್ಬಂದಿ ಸಂತ್ರಸ್ತ ಬಾಲಕಿಯರೊಂದಿಗೆ ಮಾತನಾಡಿದ್ದಾರೆ. ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಜಿಸಿಸಿಯ ಉಪ ಆಯುಕ್ತ (ಶಿಕ್ಷಣ) ಶರಣ್ಯ ಆರಿ ಹೇಳಿದ್ದಾಗಿ ನ್ಯೂಸ್‌ ಮಿನಿಟ್ ತಿಳಿಸಿದೆ.

ಇನ್ನೂ ಎಫ್‌ಐಆರ್ ದಾಖಲಿಸದಿರುವ ಪೊಲೀಸರ ಕ್ರಮವು ಅಪರಾಧವಾಗಿದೆ. ಏಕೆಂದರೆ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 19 ಕಡ್ಡಾಯವಾಗಿ ಎಫ್‌ಐಆರ್‌ ದಾಖಲಿಸುವಂತೆ ಹೇಳುತ್ತದೆ. ಪೊಲೀಸರು ಮಾಡಿರುವ ತಪ್ಪಿಗೆ ಅವರು ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶವಿಲ್ಲದೆ ಪೊಲೀಸರು ಎಫ್‌ಐಆರ್ ದಾಖಲಿಸಬಹುದು ಎಂದು ದೇವನೇಯನ್ ತಿಳಿಸಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವಿದೆ. ಅವರು ಕೂಡಲೇ ಎಫ್‌ಐಆರ್ ದಾಖಲಿಸಿ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು ಎಂದು ದೇವನೇಯನ್ ಟೀಕಿಸಿದ್ದಾರೆ. ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರ ಮತ್ತು ಸೊಸೆ ದಲಿತ ಬಾಲಕಿಯ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಉಲ್ಲೇಖಿಸಿದ ಅವರು “ತಿರುವನ್ಮಿಯೂರ್ ಪೊಲೀಸರು ಈ ರೀತಿಯ ಪ್ರಕರಣವನ್ನು ನಿರ್ಲಕ್ಷ್ಯದಿಂದ ನಿರ್ವಹಿಸುತ್ತಿರುವುದು ಇದು ಎರಡನೇ ಬಾರಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...