Homeಮುಖಪುಟಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

ಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು ಗೋಹತ್ಯೆಯ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಗೋಹತ್ಯೆ ಮಾಡಿದ ಆರೋಪದ ಮೇಲೆ  ಬಜರಂಗದಳದ ಮೊರಾದಾಬಾದ್ ಜಿಲ್ಲಾಧ್ಯಕ್ಷ ಸೇರಿದಂತೆ ನಾಲ್ವರನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮೊರಾದಾಬಾದ್ ಜಿಲ್ಲೆಯ ಚೇತ್ರಂಪುರ ಗ್ರಾಮದ ಶಹಾಬುದ್ದೀನ್, ಬಜರಂಗದಳದ ಮುಖಂಡ ಮೋನು ಬಿಷ್ಣೋಯ್ ಅಲಿಯಾಸ್ ಸುಮಿತ್ ಮತ್ತು ಆತನ ಸಹಚರರಾರ ರಮಣ್ ಚೌಧರಿ ಮತ್ತು ರಾಜೀವ್ ಚೌಧರಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ ಶಹಾಬುದ್ದೀನ್‌ಗೆ, ಮಕ್ಸೂದ್‌ ಎಂಬಾತನ ಜೊತೆ ವೈಯಕ್ತಿಕ ವೈಷಮ್ಯ ಇತ್ತು. ಈತ ಬಜರಂಗ ದಳದ ಕಾರ್ಯಕರ್ತರ ಸಹಾಯವನ್ನು ಪಡೆದು ಗೋಹತ್ಯೆ ಕೇಸ್‌ನಲ್ಲಿ ಮಕ್ಸೂದ್‌ ಎಂಬಾತನನ್ನು ಜೈಲಿಗೆ ಕಳುಹಿಸಿದ್ದಾನೆ. ಹರಿದ್ವಾರಕ್ಕೆ ಹೋಗಲು ಶ್ರಾವಣ ಮಾಸದಲ್ಲಿ ಹಿಂದೂ ಯಾತ್ರಿಕರು ಹೆಚ್ಚಾಗಿ ಬಳಸುವ ರಸ್ತೆಯಾದ ಕನ್ವರ್ ಪಥ್‌ನಿಂದ ಜನವರಿ 16ರಂದು ಹಸುವಿನ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದರ ನಂತರ ಜನವರಿ 28ರ ರಾತ್ರಿ ಗೋಹತ್ಯೆಯ ಮತ್ತೊಂದು ಘಟನೆ ಕೆಲವು ಕಿಲೋಮೀಟರ್ ದೂರದಲ್ಲಿರುವ ಚೆತ್ರಾಮ್‌ಪುರ ಗ್ರಾಮದಲ್ಲಿ ನಡೆದಿದೆ. ಎರಡೂ ಘಟನೆಗಳು ಅನುಮಾನಾಸ್ಪದ ಮತ್ತು ಪರಸ್ಪರ ಸಂಬಂಧವನ್ನು ಹೊಂದಿರುವಂತೆ ಕಂಡು ಬಂದಿತ್ತು. ಇದು ಕೇವಲ ಗೋಹತ್ಯೆಯ ಪ್ರಕರಣವಲ್ಲ, ಖಂಡಿತವಾಗಿಯೂ ಅದರಲ್ಲಿ ಕೆಲವು ಹಿಡನ್ ಅಜೆಂಡಾ ಇದೆ ಎಂಬ ಅನುಮಾನವಿತ್ತು ಎಂದು ಮೊರಾದಾಬಾದ್‌ನ ಪೊಲೀಸ್‌ ಅಧೀಕ್ಷಕ ಹೇಮರಾಜ್ ಮೀನಾ ಹೇಳಿದ್ದಾರೆ.

ಎರಡನೇ ಘಟನೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿಯ ಪ್ಯಾಂಟ್ ಮತ್ತು ಮಕ್ಸೂದ್ ಅವರ ಫೋಟೋ ಇರುವ ವ್ಯಾಲೆಟ್ ಪತ್ತೆಯಾಗಿದೆ. ಈ ಬಗ್ಗೆ ಮಕ್ಸೂದ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಗ್ರಾಮದ ಕೆಲವು ಜನರೊಂದಿಗೆ ದ್ವೇಷವನ್ನು ಹೊಂದಿದ್ದರು ಎಂದು ಹೇಳಿದ್ದಾರೆ. ಈ ಕಾರಣದಿಂದಾಗಿ ಆತನ ವಿರುದ್ಧ ಪಿತೂರಿ ನಡೆಸಿರುವ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಶಹಾಬುದ್ದೀನ್ ಹೆಸರನ್ನು ಮಕ್ಸೂದ್‌ ಹೇಳಿದ್ದಾರೆ. ಶಹಾಬುದ್ದೀನ್‌ನನ್ನು ವಿಚಾರಣೆಗೆ ಒಳಪಡಿಸಿದಾಗ ಮೋನು ಬಿಷ್ಣೋಯ್, ರಾಜೀವ್ ಚೌಧರಿ ಮತ್ತು ರಮಣ್ ಚೌಧರಿ ಅವರ ಸಹಾಯವನ್ನು ಪಡೆದು ಕೃತ್ಯವನ್ನು ನಡೆಸಿರುವುದು ಬಹಿರಂಗವಾಗಿದೆ ಎಂದು ಹೇಮರಾಜ್ ಮೀನಾ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ಮೋನು ಬಿಷ್ಣೋಯ್‌ ಕೊಲೆ ಯತ್ನ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ. ಜೈಲಿನಿಂದ ಬಂದ ಈತ ಛಜ್ಲೈತ್ ಠಾಣೆಯ ಪೊಲೀಸರಿಗೆ ತನ್ನ ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲಿಸುವಂತೆ ಒತ್ತಾಯಿಸುತ್ತಿದ್ದ. ಅಧಿಕಾರಿಗಳು ಈತನ ಮಾತನ್ನು ನಿರಾಕರಿಸಿದಾಗ ಅವರ ವಿರುದ್ಧ ಸಂಚು ರೂಪಿಸಿದ್ದಾನೆ. ಮೊದಲು ಅವರು ಜನವರಿ 14ರಂದು ಶಹಾಬುದ್ದೀನ್ ಸಹಚರ ನಯೀಮ್‌ಗೆ 2,000ರೂ.ನೀಡಿ ಕೃತ್ಯಕ್ಕೆ ತಂತ್ರವನ್ನು ರೂಪಿಸಿದ್ದರು. ಹಸುವಿನ ತಲೆಯನ್ನು ತಂದು ಛಜಲೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಡುವಂತೆ ಹೇಳಿದ್ದ. ಯಾರದೋ ಮನೆಯಿಂದ ಹಸುವನ್ನು ಕದ್ದು, ಅದನ್ನು ಕೊಂದು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಎಸ್‌ಎಸ್‌ಪಿ ಮೀನಾ ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿಸಿಟಿವಿ, ಮೊಬೈಲ್ ನೆಟ್‌ವರ್ಕ್‌ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಕೃತ್ಯವನ್ನು ಬಯಲು ಮಾಡಿದ್ದಾರೆ. ಮೊರಾದಾಬಾದ್ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 ಬಿ(ಕ್ರಿಮಿನಲ್ ಪಿತೂರಿ), 211 , 380 457  ಮತ್ತು 411 ಮತ್ತು ಗೋಹತ್ಯೆ ಕಾಯಿದೆಯ ಸೆಕ್ಷನ್‌ಗಳಡಿಯಲ್ಲಿ ಕೇಸ್‌ ದಾಖಲಿಸಿದ್ದಾರೆ ಎಂದು ಮೀನಾ ಹೇಳಿದ್ದಾರೆ.

ಇದನ್ನು ಓದಿ: ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...