Homeಮುಖಪುಟಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

ಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು ಗೋಹತ್ಯೆಯ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಗೋಹತ್ಯೆ ಮಾಡಿದ ಆರೋಪದ ಮೇಲೆ  ಬಜರಂಗದಳದ ಮೊರಾದಾಬಾದ್ ಜಿಲ್ಲಾಧ್ಯಕ್ಷ ಸೇರಿದಂತೆ ನಾಲ್ವರನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮೊರಾದಾಬಾದ್ ಜಿಲ್ಲೆಯ ಚೇತ್ರಂಪುರ ಗ್ರಾಮದ ಶಹಾಬುದ್ದೀನ್, ಬಜರಂಗದಳದ ಮುಖಂಡ ಮೋನು ಬಿಷ್ಣೋಯ್ ಅಲಿಯಾಸ್ ಸುಮಿತ್ ಮತ್ತು ಆತನ ಸಹಚರರಾರ ರಮಣ್ ಚೌಧರಿ ಮತ್ತು ರಾಜೀವ್ ಚೌಧರಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ ಶಹಾಬುದ್ದೀನ್‌ಗೆ, ಮಕ್ಸೂದ್‌ ಎಂಬಾತನ ಜೊತೆ ವೈಯಕ್ತಿಕ ವೈಷಮ್ಯ ಇತ್ತು. ಈತ ಬಜರಂಗ ದಳದ ಕಾರ್ಯಕರ್ತರ ಸಹಾಯವನ್ನು ಪಡೆದು ಗೋಹತ್ಯೆ ಕೇಸ್‌ನಲ್ಲಿ ಮಕ್ಸೂದ್‌ ಎಂಬಾತನನ್ನು ಜೈಲಿಗೆ ಕಳುಹಿಸಿದ್ದಾನೆ. ಹರಿದ್ವಾರಕ್ಕೆ ಹೋಗಲು ಶ್ರಾವಣ ಮಾಸದಲ್ಲಿ ಹಿಂದೂ ಯಾತ್ರಿಕರು ಹೆಚ್ಚಾಗಿ ಬಳಸುವ ರಸ್ತೆಯಾದ ಕನ್ವರ್ ಪಥ್‌ನಿಂದ ಜನವರಿ 16ರಂದು ಹಸುವಿನ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದರ ನಂತರ ಜನವರಿ 28ರ ರಾತ್ರಿ ಗೋಹತ್ಯೆಯ ಮತ್ತೊಂದು ಘಟನೆ ಕೆಲವು ಕಿಲೋಮೀಟರ್ ದೂರದಲ್ಲಿರುವ ಚೆತ್ರಾಮ್‌ಪುರ ಗ್ರಾಮದಲ್ಲಿ ನಡೆದಿದೆ. ಎರಡೂ ಘಟನೆಗಳು ಅನುಮಾನಾಸ್ಪದ ಮತ್ತು ಪರಸ್ಪರ ಸಂಬಂಧವನ್ನು ಹೊಂದಿರುವಂತೆ ಕಂಡು ಬಂದಿತ್ತು. ಇದು ಕೇವಲ ಗೋಹತ್ಯೆಯ ಪ್ರಕರಣವಲ್ಲ, ಖಂಡಿತವಾಗಿಯೂ ಅದರಲ್ಲಿ ಕೆಲವು ಹಿಡನ್ ಅಜೆಂಡಾ ಇದೆ ಎಂಬ ಅನುಮಾನವಿತ್ತು ಎಂದು ಮೊರಾದಾಬಾದ್‌ನ ಪೊಲೀಸ್‌ ಅಧೀಕ್ಷಕ ಹೇಮರಾಜ್ ಮೀನಾ ಹೇಳಿದ್ದಾರೆ.

ಎರಡನೇ ಘಟನೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿಯ ಪ್ಯಾಂಟ್ ಮತ್ತು ಮಕ್ಸೂದ್ ಅವರ ಫೋಟೋ ಇರುವ ವ್ಯಾಲೆಟ್ ಪತ್ತೆಯಾಗಿದೆ. ಈ ಬಗ್ಗೆ ಮಕ್ಸೂದ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಗ್ರಾಮದ ಕೆಲವು ಜನರೊಂದಿಗೆ ದ್ವೇಷವನ್ನು ಹೊಂದಿದ್ದರು ಎಂದು ಹೇಳಿದ್ದಾರೆ. ಈ ಕಾರಣದಿಂದಾಗಿ ಆತನ ವಿರುದ್ಧ ಪಿತೂರಿ ನಡೆಸಿರುವ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಶಹಾಬುದ್ದೀನ್ ಹೆಸರನ್ನು ಮಕ್ಸೂದ್‌ ಹೇಳಿದ್ದಾರೆ. ಶಹಾಬುದ್ದೀನ್‌ನನ್ನು ವಿಚಾರಣೆಗೆ ಒಳಪಡಿಸಿದಾಗ ಮೋನು ಬಿಷ್ಣೋಯ್, ರಾಜೀವ್ ಚೌಧರಿ ಮತ್ತು ರಮಣ್ ಚೌಧರಿ ಅವರ ಸಹಾಯವನ್ನು ಪಡೆದು ಕೃತ್ಯವನ್ನು ನಡೆಸಿರುವುದು ಬಹಿರಂಗವಾಗಿದೆ ಎಂದು ಹೇಮರಾಜ್ ಮೀನಾ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ಮೋನು ಬಿಷ್ಣೋಯ್‌ ಕೊಲೆ ಯತ್ನ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ. ಜೈಲಿನಿಂದ ಬಂದ ಈತ ಛಜ್ಲೈತ್ ಠಾಣೆಯ ಪೊಲೀಸರಿಗೆ ತನ್ನ ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲಿಸುವಂತೆ ಒತ್ತಾಯಿಸುತ್ತಿದ್ದ. ಅಧಿಕಾರಿಗಳು ಈತನ ಮಾತನ್ನು ನಿರಾಕರಿಸಿದಾಗ ಅವರ ವಿರುದ್ಧ ಸಂಚು ರೂಪಿಸಿದ್ದಾನೆ. ಮೊದಲು ಅವರು ಜನವರಿ 14ರಂದು ಶಹಾಬುದ್ದೀನ್ ಸಹಚರ ನಯೀಮ್‌ಗೆ 2,000ರೂ.ನೀಡಿ ಕೃತ್ಯಕ್ಕೆ ತಂತ್ರವನ್ನು ರೂಪಿಸಿದ್ದರು. ಹಸುವಿನ ತಲೆಯನ್ನು ತಂದು ಛಜಲೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಡುವಂತೆ ಹೇಳಿದ್ದ. ಯಾರದೋ ಮನೆಯಿಂದ ಹಸುವನ್ನು ಕದ್ದು, ಅದನ್ನು ಕೊಂದು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಎಸ್‌ಎಸ್‌ಪಿ ಮೀನಾ ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿಸಿಟಿವಿ, ಮೊಬೈಲ್ ನೆಟ್‌ವರ್ಕ್‌ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಕೃತ್ಯವನ್ನು ಬಯಲು ಮಾಡಿದ್ದಾರೆ. ಮೊರಾದಾಬಾದ್ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 ಬಿ(ಕ್ರಿಮಿನಲ್ ಪಿತೂರಿ), 211 , 380 457  ಮತ್ತು 411 ಮತ್ತು ಗೋಹತ್ಯೆ ಕಾಯಿದೆಯ ಸೆಕ್ಷನ್‌ಗಳಡಿಯಲ್ಲಿ ಕೇಸ್‌ ದಾಖಲಿಸಿದ್ದಾರೆ ಎಂದು ಮೀನಾ ಹೇಳಿದ್ದಾರೆ.

ಇದನ್ನು ಓದಿ: ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...