Homeಮುಖಪುಟಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ (ಎಎಂಯು) ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರದಲ್ಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಇಂದು ತನ್ನ ತೀರ್ಪು ಕಾಯ್ದಿರಿಸಿದೆ ಎಂದು live law ವರದಿ ಮಾಡಿದೆ. ಪೀಠವು 8 ದಿನಗಳ ಕಾಲ ಎರಡೂ ಕಡೆಯ ವಾದಗಳನ್ನು ಆಲಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಸೂರ್ಯ ಕಾಂತ್, ಜೆಬಿ ಪರ್ದಿವಾಲಾ, ದೀಪಂಕರ್ ದತ್ತಾ, ಮನೋಜ್ ಮಿಶ್ರಾ ಮತ್ತು ಎಸ್‌ಸಿ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಎಎಂಯು ಅಲ್ಪಸಂಖ್ಯಾತ ಸಂಸ್ಥೆ ಅಲ್ಲ ಎಂಬ ಅಲಹಾಬಾದ್ ಹೈಕೋರ್ಟ್‌ನ 2006ರ ತೀರ್ಪಿನ ವಿರುದ್ದದ ಮೇಲ್ಮನವಿಯನ್ನು ಆಲಿಸುತ್ತಿದೆ.

2019ರಲ್ಲಿ, ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಾಧೀಶರ ಪೀಠವು, ಪ್ರಕರಣವನ್ನು 7 ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಈ ಪ್ರಕರಣದಲ್ಲಿ ಉದ್ಭವಿಸುವ ಸಮಸ್ಯೆಗಳೆಂದರೆ, ಒಂದು ಶಾಸನದಿಂದ (ಎಎಂಯು ಕಾಯಿದೆ-1920) ಸ್ಥಾಪಿಸಲ್ಪಟ್ಟ ಮತ್ತು ಆಡಳಿತ ನಡೆಸುವ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆದುಕೊಳ್ಳಬಹುದೇ ಎಂಬುವುದಾಗಿದೆ.

ಎಎಂಯು ಮತ್ತು ಎಎಂಯು ಓಲ್ಡ್ ಬಾಯ್ಸ್ ಅಸೋಸಿಯೇಷನ್ ಪರ ಹಿರಿಯ ವಕೀಲರಾದ ಡಾ ರಾಜೀವ್ ಧವನ್ ಮತ್ತು ಕಪಿಲ್ ಸಿಬಲ್ ವಾದಿಸುತ್ತಿದ್ದಾರೆ. ಸಲ್ಮಾನ್ ಖುರ್ಷಿದ್, ಶಾದನ್ ಫರಾಸತ್ ಮಧ್ಯಸ್ಥಗಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ನೀರಜ್ ಕಿಶನ್ ಕೌಲ್, ಗುರು ಕೃಷ್ಣ ಕುಮಾರ್, ವಿನಯ್ ನವರೆ, ಯತೀಂದರ್ ಸಿಂಗ್, ವಿಕ್ರಮಜಿತ್ ಬ್ಯಾನರ್ಜಿ (ಎಎಸ್‌ಜಿ) ಮತ್ತು ಕೆ ಎಂ ನಟರಾಜ್ (ಎಎಸ್‌ಜಿ) ಸೇರಿದಂತೆ ಹಲವಾರು ಇತರ ಹಿರಿಯ ವಕೀಲರು ಸಹ ಪ್ರತಿವಾದಿಗಳು ಮತ್ತು ಮಧ್ಯಸ್ಥಗಾರರ ಪರವಾಗಿ ವಾದ ಮಂಡಿಸಿದ್ದಾರೆ.

8 ದಿನಗಳ ಸುದೀರ್ಘ ವಿಚಾರಣೆಯಯಲ್ಲಿ ನ್ಯಾಯಪೀಠದ ಮುಂದೆ ಹಲವಾರು ಪ್ರಮುಖ ಅಂಶಗಳು ಚರ್ಚೆಯಾಗಿವೆ. ಭಾರತೀಯ ಸಂವಿಧಾನದ 30ನೇ ವಿಧಿಯ ವ್ಯಾಖ್ಯಾನದಿಂದ ಹಿಡಿದು, ಲಿಸ್ಟ್‌ 1 ರ ಎಂಟ್ರಿ 63 ಎಎಂಯುನ ಕಾರ್ಯ ನಿರ್ವಹಣೆ, ಇತಿಹಾಸ ಮತ್ತು 1951 ರಿಂದ 1981 ರವರೆಗೆ ಮೂಲ 1920 ಎಎಂಯು ಕಾಯಿದೆಗೆ ತಂದ ವಿವಿಧ ತಿದ್ದುಪಡಿಗಳ ವಿಶ್ಲೇಷಣೆಯೂ ನ್ಯಾಯಾಲಯದಲ್ಲಿ ನಡೆದಿದೆ.

ಇದನ್ನೂ ಓದಿ: ಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...