Homeಮುಖಪುಟ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ...’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತರಾಟೆಗೆ ತೆಗೆದುಕೊಂಡಿದ್ದಾರೆ.
‘ಬಿಜೆಪಿಯು ಹತಾಶೆಯ ಕಾರ್ಯದಲ್ಲಿ ಜೆಎಂಎಂ ಮುಖ್ಯಸ್ಥರನ್ನು ಬೆದರಿಸಲು ಪ್ರಯತ್ನಿಸುತ್ತಿದೆ’ ಎಂದು ಸ್ಟಾಲಿನ್ ಹೇಳಿದರೆ, ‘ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಎಲ್ಲರನ್ನು ಜೈಲಿಗೆ ತಳ್ಳುತ್ತಿದೆ’ ಎಂದು ಬ್ಯಾನರ್ಜಿ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, ‘ಹೇಮಂತ್ ಸೊರೇನ್ ಅವರ ಬಂಧನವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರತೀಕಾರದ ಸ್ಪಷ್ಟ ಪ್ರದರ್ಶನವಾಗಿದೆ’ ಎಂದು ಹೇಳಿದ್ದಾರೆ.

‘ಗೌರವಾನ್ವಿತ ಜಾರ್ಖಂಡ್ ಮುಖ್ಯಮಂತ್ರಿ ತಿರು ಹೇಮಂತ್ ಸೊರೇನ್ ಅವರ ಬಂಧನವು ಕೇಂದ್ರ ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಅಬ್ಬರದ ಪ್ರದರ್ಶನವಾಗಿದೆ. ಬುಡಕಟ್ಟು ನಾಯಕನಿಗೆ ಕಿರುಕುಳ ನೀಡಲು ತನಿಖಾ ಸಂಸ್ಥೆಗಳನ್ನು ಬಳಸಲಾಗುತ್ತಿದೆ. ಈ ಕೃತ್ಯವು ಹತಾಶೆ ಮತ್ತು ಅಧಿಕಾರದ ದುರುಪಯೋಗವನ್ನು ಹೊಂದಿದೆ. ಬಿಜೆಪಿಯ ಕೊಳಕು ತಂತ್ರಗಳು ವಿರೋಧದ ಧ್ವನಿಗಳನ್ನು ಮೌನಗೊಳಿಸುವುದಿಲ್ಲ’ ಎಂದು ಅವರು ಬರೆದುಕೊಂಡಿದ್ದಾರೆ.

‘ಬಿಜೆಪಿಯ ಸೇಡಿನ ರಾಜಕಾರಣದ ಹೊರತಾಗಿಯೂ, ತಿರು ಹೇಮಂತ್ ಸೋರೆನ್ ಅವರು ದೃಢವಾಗಿ ನಿಂತಿದ್ದು, ತಲೆಬಾಗಲು ನಿರಾಕರಿಸುತ್ತಾರೆ. ಪ್ರತಿಕೂಲ ಪರಿಸ್ಥಿತಿಯಲ್ಲಿ ಅವರ ಸ್ಥೈರ್ಯವು ಶ್ಲಾಘನೀಯವಾಗಿದೆ. ಬಿಜೆಪಿಯ ಗೂಂಡಾಗಿರಿ ತಂತ್ರಗಳ ವಿರುದ್ಧ ಹೋರಾಡುವ ಅವರ ಸಂಕಲ್ಪವು ಸ್ಫೂರ್ತಿಯಾಗಿದೆ’ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ:

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುತ್ತಿದೆ ಎಂದು ಬ್ಯಾನರ್ಜಿ ಗುರುವಾರ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಹೊತ್ತಿನಲ್ಲಿ ಹೇಮಂತ್ ಸೊರೇನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧಿಸಿತ್ತು. ಅವರ ಸರ್ಕಾರದಲ್ಲಿ ಸಚಿವರಾಗಿರುವ ಚಂಪೈ ಸೊರೇನ್ ಅವರು ಜೆಎಂಎಂ-ಕಾಂಗ್ರೆಸ್ ಸರ್ಕಾರದ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ.

ಇಡಿ ಕ್ರಮಕ್ಕೆ ಹಲವು ವಿರೋಧ ಪಕ್ಷದ ನಾಯಕರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೆಎಂಎಂ ನಾಯಕನ ಬಂಧನದ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸೌಗತ ರಾಯ್, ‘ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳ ಭಾಗವಾಗಿದೆ. ಇಡಿ ಮತ್ತು ಸಿಬಿಐ (ಕೇಂದ್ರ ತನಿಖಾ ಸಂಸ್ಥೆ) ಸರ್ಕಾರದ ಪ್ರಮುಖ ಅಸ್ತ್ರಗಳಾಗಿವೆ..’ ಎಂದು ಹೇಳಿದ್ದಾರೆ.

‘ಈ ಬಂಧನವು ಬಿಜೆಪಿಯ ಬುಡಕಟ್ಟು ವಿರೋಧಿ ಮನಸ್ಥಿತಿಗೆ ಬಗೆದ ದ್ರೋಹ’ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

‘ಹೇಮಂತ್ ಸೊರೇನ್ ಅವರ ಬಂಧನವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವ ಪ್ರಯತ್ನವಾಗಿದೆ. ಮುಂದಿನ ಒಂದು ತಿಂಗಳಲ್ಲಿ ಇನ್ನೂ ಅನೇಕ ವಿರೋಧ ಪಕ್ಷದ ನಾಯಕರನ್ನು ಬಂಧಿಸುವುದು ನನಗೆ ಖಚಿತವಾಗಿದೆ…’ ಎಂದು ದೆಹಲಿ ಸಚಿವೆ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ‘ಎಕ್ಸ್’ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಜಾರ್ಖಂಡ್: ನ್ಯಾಯಾಂಗ ಬಂಧನಕ್ಕೆ ಹೇಮಂತ್, ಸರ್ಕಾರ ರಚಿಸುವಂತೆ ಚಂಪೈಗೆ ರಾಜ್ಯಪಾಲರಿಂದ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...