Homeಮುಖಪುಟಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನಾನು ಬಜೆಟ್ ಭಾಷಣವನ್ನು ಕೇಳಿಸಿಕೊಂಡಿದ್ದೇನೆ. ಹಣಕಾಸು ಸಚಿವರು ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಕೆಲವು ಹೊಸ ಯೋಜನೆಗಳನ್ನು ತರುತ್ತಾರೆ, ಅವರ ಸಂಕಷ್ಟಗಳಿಗೆ ಅಲ್ಲಿ ಒಂದಷ್ಟಾದರೂ ಪರಿಹಾರಗಳು ಇರುತ್ತವೆ ಎಂದು ಭಾವಿಸಿದ್ದೆ. ಆದರೆ, ಈ ಬಜೆಟ್‌ನಲ್ಲಿ ಅಂಥದ್ದೇನೂ ಇಲ್ಲ. ಪ್ರತಿ ವರ್ಷದಂತೆ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಕೇವಲ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಟೀಕಿಸಿದ್ದಾರೆ.

‘ದೊಡ್ಡದಾಗಿ ಮಾತನಾಡುವುದು, ಸತ್ಯವನ್ನೂ ಮೀರಿಸುವಂತೆ ಸುಳ್ಳು ಹೇಳುವುದು ಈ ಸರ್ಕಾರದ ಅಭ್ಯಾಸವಾಗಿದೆ. 2014 ಮತ್ತು 2024ನ್ನು ಹೋಲಿಸಿ ಸದನದಲ್ಲಿ ಶ್ವೇತಪತ್ರ ಮಂಡಿಸುವುದಾಗಿ ಹಣಕಾಸು ಸಚಿವರು ಬಜೆಟ್‌ನಲ್ಲಿ ಹೇಳಿದ್ದಾರೆ. ಆದ್ದರಿಂದ ಅವರಿಗೆ ಕೇಳಬೇಕು, ಕಳೆದ 10 ವರ್ಷಗಳಲ್ಲಿ ಸರ್ಕಾರ ನೀಡಿದ ಭರವಸೆಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ? ಎಷ್ಟು ಉಳಿದಿವೆ? ಬಜೆಟ್‌ನಲ್ಲಿ ಆ ಭರವಸೆಗಳ ಪ್ರಸ್ತಾಪವೇ ಇಲ್ಲ. ವಾರ್ಷಿಕ 2 ಕೋಟಿ ಉದ್ಯೋಗಗಳು, ರೈತರ ಆದಾಯವನ್ನು ದ್ವಿಗುಣಗೊಳಿಸುವುದು, 2022 ರ ವೇಳೆಗೆ ಎಲ್ಲರಿಗೂ ಶಾಶ್ವತ ಮನೆಗಳು, 100 ಸ್ಮಾರ್ಟ್ ಸಿಟಿಗಳು, ಈ ಎಲ್ಲಾ ಭರವಸೆಗಳು ಇಲ್ಲಿಯವರೆಗೆ ಏಕೆ ಈಡೇರಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘2014ರಲ್ಲಿ 4.6% ರಷ್ಟಿದ್ದ ಕೃಷಿ ಬೆಳವಣಿಗೆ ದರ ಈ ವರ್ಷ 1.8% ಆಯಿತು? ಯುಪಿಎ ಅವಧಿಯಲ್ಲಿ ನಮ್ಮ ಕೃಷಿ ಸರಾಸರಿ ಶೇ.4ರಷ್ಟಿತ್ತು, ಅದು ಏಕೆ ಅರ್ಧಕ್ಕೆ ಕುಸಿದಿದೆ? ಪ್ರತಿದಿನ 31 ಮಂದಿ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? 2014ರಲ್ಲಿ ಒಟ್ಟು ಬಜೆಟ್‌ನ 4.55% ರಷ್ಟಿದ್ದ ಶಿಕ್ಷಣ ಬಜೆಟ್ 3.2% ಕ್ಕೆ ಹೇಗೆ ಕುಸಿಯಿತು? ಒಟ್ಟು ಬಜೆಟ್‌ಗೆ ಹೋಲಿಸಿದರೆ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಪಾಲು ಏಕೆ ನಿರಂತರವಾಗಿ ಕುಸಿಯುತ್ತಿದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ರಕ್ಷಣಾ ಬಜೆಟ್ ಮತ್ತು ಆರೋಗ್ಯ ಬಜೆಟ್ ಏಕೆ ಕುಸಿಯುತ್ತಿದೆ? ಇಡೀ ಬಜೆಟ್‌ನಲ್ಲಿ ‘ಉದ್ಯೋಗ’ ಎಂಬ ಪದವನ್ನು ಒಂದೇ ಬಾರಿ ಬಳಸಲಾಗಿದೆ. ನಿರುದ್ಯೋಗವು 45 ವರ್ಷಗಳಲ್ಲಿ ಅತಿ ಹೆಚ್ಚು ಏಕೆ? 20-24 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ 45% ರಷ್ಟು ಏಕಿದೆ? ಮೋದಿ ಸರ್ಕಾರ 3 ಕೋಟಿಗೂ ಹೆಚ್ಚು ಜನರ ಉದ್ಯೋಗವನ್ನು ಏಕೆ ಕಿತ್ತುಕೊಂಡಿತು? ಪ್ರತಿ ತಿಂಗಳು ಪತ್ರಿಕೆಗಳು ಏಕೆ ಸೋರಿಕೆಯಾಗುತ್ತಿವೆ? ಗಗನಕ್ಕೇರುತ್ತಿರುವ ಬೆಲೆ ಏರಿಕೆಯಿಂದ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಅಗತ್ಯ ವಸ್ತುಗಳ ಮೇಲೆ 5% ರಿಂದ 18% ಜಿಎಸ್‌ಟಿ ಏಕೆ ವಿಧಿಸಲಾಗಿದೆ? ಹಿಟ್ಟು, ಬೇಳೆಕಾಳು, ಅಕ್ಕಿ, ಹಾಲು ಮತ್ತು ತರಕಾರಿಗಳ ಬೆಲೆ ಏಕೆ ಹೆಚ್ಚುತ್ತಿದೆ? ಇದನ್ನು ಹೇಳುವವರು ಯಾರೂ ಇಲ್ಲ’ ಎಂದು ಸಾಲು ಸಾಲು ಪ್ರಶ್ನೆಗಳನ್ನು ಮೋದಿ ಸರ್ಕಾರದ ಮುಂದಿಟ್ಟಿದ್ದಾರೆ.

‘ಸಾಮಾನ್ಯರ ಆದಾಯ ಹೆಚ್ಚಿದೆ ಎಂದು ಹಣಕಾಸು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು, ವಾಸ್ತವದಲ್ಲಿ ಗ್ರಾಮೀಣ ಭಾರತದಲ್ಲಿ ಕಳೆದ 5 ವರ್ಷಗಳಲ್ಲಿ ಕೂಲಿ ಕಡಿಮೆಯಾಗಿದೆ. ಕಳೆದ 10 ವರ್ಷಗಳಲ್ಲಿ ಗ್ರಾಮೀಣ ಜನರ ಕೂಲಿ ಹೆಚ್ಚಾಗುವ ಬದಲು ಕುಸಿದಿದೆ. ಹಣಕಾಸು ಸಚಿವರು ಇಡೀ ಬಜೆಟ್ ಭಾಷಣದಲ್ಲಿ ಮನರೇಗಾ ಹೆಸರನ್ನು ಉಲ್ಲೇಖಿಸಲಿಲ್ಲ. ಏಕೆಂದರೆ ಯುಪಿಎ ಕಾಲದಲ್ಲಿ ವರ್ಷದಲ್ಲಿ 100 ದಿನ ಕೆಲಸ ಸಿಗುತ್ತಿತ್ತು, ಅದು ಈಗ ಕೇವಲ 48 ದಿನಗಳಿಗೆ ಇಳಿದಿದೆ. ಒಟ್ಟು ಬಜೆಟ್‌ಗೆ ಹೋಲಿಸಿದರೆ ಈ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಬಜೆಟ್ಅನ್ನು ಸಹ ಕಡಿಮೆ ಮಾಡಿದೆ. 2005ರಲ್ಲಿ ಶೇ.30ರಷ್ಟಿದ್ದ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಈಗ ಶೇ.24ಕ್ಕೆ ಏಕೆ ಕುಸಿದಿದೆ’ ಎಂದು ಹೇಳಿದ್ದಾರೆ.

‘ಹೊಸ ಸರಣಿಯ ಪ್ರಕಾರ, ಕಾಂಗ್ರೆಸ್-ಯುಪಿಎ ಆಡಳಿತದಲ್ಲಿ 8% ರಷ್ಟಿದ್ದ ದೇಶದ ಸರಾಸರಿ ಆರ್ಥಿಕ ಬೆಳವಣಿಗೆ ದರವು ಈ ಸರ್ಕಾರದಲ್ಲಿ 5.6% ಕ್ಕೆ ಏಕೆ ಕುಸಿಯಿತು? ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಲಾಗುತ್ತಿದೆ. ಕೇವಲ ಹೆಸರುಗಳನ್ನು ಬದಲಾಯಿಸುವ ಮೂಲಕ ಯೋಜನೆಗಳನ್ನು ಪ್ರಾರಂಭಿಸಲಾಗುತ್ತದೆ. ಆದರೆ ಹಳೆಯ ಭರವಸೆಗಳು ಏನಾಯಿತು ಎಂದು ಹೇಳಲಾಗಿಲ್ಲ? ತೋರಿಸುತ್ತಿರುವ ಹೊಸ ಕನಸುಗಳು ಹೇಗೆ ಈಡೇರುತ್ತವೆ? ವಾಸ್ತವವಾಗಿ, ಯಾವುದೇ ಬಜೆಟ್‌ನಲ್ಲಿ ಎರಡು ವಿವರಗಳಿರುತ್ತವೆ. ಒಂದು ಕಳೆದ ವರ್ಷದ ವಿವರಗಳು ಮತ್ತು ಇನ್ನೊಂದು ಮುಂಬರುವ ವರ್ಷದ ದೃಷ್ಟಿ. ಈ ಎರಡೂ ವಿಷಯಗಳು ಈ ಬಜೆಟ್‌ನಲ್ಲಿ ಕಾಣೆಯಾಗಿವೆ’ ಎಂದು ಖರ್ಗೆ ಅವರು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...