Homeಮುಖಪುಟಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನಾನು ಬಜೆಟ್ ಭಾಷಣವನ್ನು ಕೇಳಿಸಿಕೊಂಡಿದ್ದೇನೆ. ಹಣಕಾಸು ಸಚಿವರು ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಕೆಲವು ಹೊಸ ಯೋಜನೆಗಳನ್ನು ತರುತ್ತಾರೆ, ಅವರ ಸಂಕಷ್ಟಗಳಿಗೆ ಅಲ್ಲಿ ಒಂದಷ್ಟಾದರೂ ಪರಿಹಾರಗಳು ಇರುತ್ತವೆ ಎಂದು ಭಾವಿಸಿದ್ದೆ. ಆದರೆ, ಈ ಬಜೆಟ್‌ನಲ್ಲಿ ಅಂಥದ್ದೇನೂ ಇಲ್ಲ. ಪ್ರತಿ ವರ್ಷದಂತೆ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಕೇವಲ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಟೀಕಿಸಿದ್ದಾರೆ.

‘ದೊಡ್ಡದಾಗಿ ಮಾತನಾಡುವುದು, ಸತ್ಯವನ್ನೂ ಮೀರಿಸುವಂತೆ ಸುಳ್ಳು ಹೇಳುವುದು ಈ ಸರ್ಕಾರದ ಅಭ್ಯಾಸವಾಗಿದೆ. 2014 ಮತ್ತು 2024ನ್ನು ಹೋಲಿಸಿ ಸದನದಲ್ಲಿ ಶ್ವೇತಪತ್ರ ಮಂಡಿಸುವುದಾಗಿ ಹಣಕಾಸು ಸಚಿವರು ಬಜೆಟ್‌ನಲ್ಲಿ ಹೇಳಿದ್ದಾರೆ. ಆದ್ದರಿಂದ ಅವರಿಗೆ ಕೇಳಬೇಕು, ಕಳೆದ 10 ವರ್ಷಗಳಲ್ಲಿ ಸರ್ಕಾರ ನೀಡಿದ ಭರವಸೆಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ? ಎಷ್ಟು ಉಳಿದಿವೆ? ಬಜೆಟ್‌ನಲ್ಲಿ ಆ ಭರವಸೆಗಳ ಪ್ರಸ್ತಾಪವೇ ಇಲ್ಲ. ವಾರ್ಷಿಕ 2 ಕೋಟಿ ಉದ್ಯೋಗಗಳು, ರೈತರ ಆದಾಯವನ್ನು ದ್ವಿಗುಣಗೊಳಿಸುವುದು, 2022 ರ ವೇಳೆಗೆ ಎಲ್ಲರಿಗೂ ಶಾಶ್ವತ ಮನೆಗಳು, 100 ಸ್ಮಾರ್ಟ್ ಸಿಟಿಗಳು, ಈ ಎಲ್ಲಾ ಭರವಸೆಗಳು ಇಲ್ಲಿಯವರೆಗೆ ಏಕೆ ಈಡೇರಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘2014ರಲ್ಲಿ 4.6% ರಷ್ಟಿದ್ದ ಕೃಷಿ ಬೆಳವಣಿಗೆ ದರ ಈ ವರ್ಷ 1.8% ಆಯಿತು? ಯುಪಿಎ ಅವಧಿಯಲ್ಲಿ ನಮ್ಮ ಕೃಷಿ ಸರಾಸರಿ ಶೇ.4ರಷ್ಟಿತ್ತು, ಅದು ಏಕೆ ಅರ್ಧಕ್ಕೆ ಕುಸಿದಿದೆ? ಪ್ರತಿದಿನ 31 ಮಂದಿ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? 2014ರಲ್ಲಿ ಒಟ್ಟು ಬಜೆಟ್‌ನ 4.55% ರಷ್ಟಿದ್ದ ಶಿಕ್ಷಣ ಬಜೆಟ್ 3.2% ಕ್ಕೆ ಹೇಗೆ ಕುಸಿಯಿತು? ಒಟ್ಟು ಬಜೆಟ್‌ಗೆ ಹೋಲಿಸಿದರೆ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಪಾಲು ಏಕೆ ನಿರಂತರವಾಗಿ ಕುಸಿಯುತ್ತಿದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ರಕ್ಷಣಾ ಬಜೆಟ್ ಮತ್ತು ಆರೋಗ್ಯ ಬಜೆಟ್ ಏಕೆ ಕುಸಿಯುತ್ತಿದೆ? ಇಡೀ ಬಜೆಟ್‌ನಲ್ಲಿ ‘ಉದ್ಯೋಗ’ ಎಂಬ ಪದವನ್ನು ಒಂದೇ ಬಾರಿ ಬಳಸಲಾಗಿದೆ. ನಿರುದ್ಯೋಗವು 45 ವರ್ಷಗಳಲ್ಲಿ ಅತಿ ಹೆಚ್ಚು ಏಕೆ? 20-24 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ 45% ರಷ್ಟು ಏಕಿದೆ? ಮೋದಿ ಸರ್ಕಾರ 3 ಕೋಟಿಗೂ ಹೆಚ್ಚು ಜನರ ಉದ್ಯೋಗವನ್ನು ಏಕೆ ಕಿತ್ತುಕೊಂಡಿತು? ಪ್ರತಿ ತಿಂಗಳು ಪತ್ರಿಕೆಗಳು ಏಕೆ ಸೋರಿಕೆಯಾಗುತ್ತಿವೆ? ಗಗನಕ್ಕೇರುತ್ತಿರುವ ಬೆಲೆ ಏರಿಕೆಯಿಂದ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಅಗತ್ಯ ವಸ್ತುಗಳ ಮೇಲೆ 5% ರಿಂದ 18% ಜಿಎಸ್‌ಟಿ ಏಕೆ ವಿಧಿಸಲಾಗಿದೆ? ಹಿಟ್ಟು, ಬೇಳೆಕಾಳು, ಅಕ್ಕಿ, ಹಾಲು ಮತ್ತು ತರಕಾರಿಗಳ ಬೆಲೆ ಏಕೆ ಹೆಚ್ಚುತ್ತಿದೆ? ಇದನ್ನು ಹೇಳುವವರು ಯಾರೂ ಇಲ್ಲ’ ಎಂದು ಸಾಲು ಸಾಲು ಪ್ರಶ್ನೆಗಳನ್ನು ಮೋದಿ ಸರ್ಕಾರದ ಮುಂದಿಟ್ಟಿದ್ದಾರೆ.

‘ಸಾಮಾನ್ಯರ ಆದಾಯ ಹೆಚ್ಚಿದೆ ಎಂದು ಹಣಕಾಸು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು, ವಾಸ್ತವದಲ್ಲಿ ಗ್ರಾಮೀಣ ಭಾರತದಲ್ಲಿ ಕಳೆದ 5 ವರ್ಷಗಳಲ್ಲಿ ಕೂಲಿ ಕಡಿಮೆಯಾಗಿದೆ. ಕಳೆದ 10 ವರ್ಷಗಳಲ್ಲಿ ಗ್ರಾಮೀಣ ಜನರ ಕೂಲಿ ಹೆಚ್ಚಾಗುವ ಬದಲು ಕುಸಿದಿದೆ. ಹಣಕಾಸು ಸಚಿವರು ಇಡೀ ಬಜೆಟ್ ಭಾಷಣದಲ್ಲಿ ಮನರೇಗಾ ಹೆಸರನ್ನು ಉಲ್ಲೇಖಿಸಲಿಲ್ಲ. ಏಕೆಂದರೆ ಯುಪಿಎ ಕಾಲದಲ್ಲಿ ವರ್ಷದಲ್ಲಿ 100 ದಿನ ಕೆಲಸ ಸಿಗುತ್ತಿತ್ತು, ಅದು ಈಗ ಕೇವಲ 48 ದಿನಗಳಿಗೆ ಇಳಿದಿದೆ. ಒಟ್ಟು ಬಜೆಟ್‌ಗೆ ಹೋಲಿಸಿದರೆ ಈ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಬಜೆಟ್ಅನ್ನು ಸಹ ಕಡಿಮೆ ಮಾಡಿದೆ. 2005ರಲ್ಲಿ ಶೇ.30ರಷ್ಟಿದ್ದ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಈಗ ಶೇ.24ಕ್ಕೆ ಏಕೆ ಕುಸಿದಿದೆ’ ಎಂದು ಹೇಳಿದ್ದಾರೆ.

‘ಹೊಸ ಸರಣಿಯ ಪ್ರಕಾರ, ಕಾಂಗ್ರೆಸ್-ಯುಪಿಎ ಆಡಳಿತದಲ್ಲಿ 8% ರಷ್ಟಿದ್ದ ದೇಶದ ಸರಾಸರಿ ಆರ್ಥಿಕ ಬೆಳವಣಿಗೆ ದರವು ಈ ಸರ್ಕಾರದಲ್ಲಿ 5.6% ಕ್ಕೆ ಏಕೆ ಕುಸಿಯಿತು? ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಲಾಗುತ್ತಿದೆ. ಕೇವಲ ಹೆಸರುಗಳನ್ನು ಬದಲಾಯಿಸುವ ಮೂಲಕ ಯೋಜನೆಗಳನ್ನು ಪ್ರಾರಂಭಿಸಲಾಗುತ್ತದೆ. ಆದರೆ ಹಳೆಯ ಭರವಸೆಗಳು ಏನಾಯಿತು ಎಂದು ಹೇಳಲಾಗಿಲ್ಲ? ತೋರಿಸುತ್ತಿರುವ ಹೊಸ ಕನಸುಗಳು ಹೇಗೆ ಈಡೇರುತ್ತವೆ? ವಾಸ್ತವವಾಗಿ, ಯಾವುದೇ ಬಜೆಟ್‌ನಲ್ಲಿ ಎರಡು ವಿವರಗಳಿರುತ್ತವೆ. ಒಂದು ಕಳೆದ ವರ್ಷದ ವಿವರಗಳು ಮತ್ತು ಇನ್ನೊಂದು ಮುಂಬರುವ ವರ್ಷದ ದೃಷ್ಟಿ. ಈ ಎರಡೂ ವಿಷಯಗಳು ಈ ಬಜೆಟ್‌ನಲ್ಲಿ ಕಾಣೆಯಾಗಿವೆ’ ಎಂದು ಖರ್ಗೆ ಅವರು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...