Homeಕರ್ನಾಟಕಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

ಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

- Advertisement -
- Advertisement -

ರಾಜ್ಯದ ಸಹಕಾರ ಸಂಘಗಳಲ್ಲಿನ ಸುಸ್ತಿದಾರ ರೈತರು ಸಾಲದ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಹಾಗೂ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತದ ₹142.47 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣವನ್ನು ₹47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. 2023-24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ;’ಳಿಗೆ ₹60 ಕೋಟಿ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ನೀಡಲಾಯಿತು.

ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ₹263 ಕೋಟಿಗಳ ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಬೆಳಗಾವಿ ಜಿಲ್ಲೆಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು ₹287.55 ಕೋಟಿ ಮೊತ್ತದಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ ₹519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಸಭೆ ಅನುಮೋದನೆ ನೀಡಿದೆ.

ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ ₹158.10 ಕೋಟಿ ಯೋಜನಾ ವರದಿಗೆ ಅನುಮೋದನೆ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹499 ಕೋಟಿ ಮೊತ್ತದ ಯೋಜನೆ ಆರಂಭಕ್ಕೆ ಸರ್ಕಾರ ಒಪ್ಪಿಕೊಂಡಿದೆ.

‘ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು, ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿ ₹52.81 ಕೋಟಿ ವೆಚ್ಚದಲ್ಲಿ ಮತ್ತು ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ₹47.18 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ ₹120 ಕೋಟಿ ಕ್ರಿಯಾ ಯೋಜನೆಗೆ ಅನುಮತಿ ನೀಡಿ, ದಿನಾಂಕ: 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು. ಜತೆಗೆ, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ , ಲಾಂಡ್ರಿ ಕಟ್ಟಡ, ಎಸ್ ಟಿ ಪಿ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು ₹150 ಕೋಟಿ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹455 ಕೋಟಿಗಳ ಕಾಮಗಾರಿಗೆ ಸಭೆ ಒಪ್ಪಿಕೊಂಡಿದೆ.

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ ₹208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆ, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು ₹440.20 ಕೋಟಿಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.

ಇದನ್ನೂ ಓದಿ; ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...