Homeಕರ್ನಾಟಕಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

ಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

- Advertisement -
- Advertisement -

ರಾಜ್ಯದ ಸಹಕಾರ ಸಂಘಗಳಲ್ಲಿನ ಸುಸ್ತಿದಾರ ರೈತರು ಸಾಲದ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಹಾಗೂ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತದ ₹142.47 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣವನ್ನು ₹47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. 2023-24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ;’ಳಿಗೆ ₹60 ಕೋಟಿ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ನೀಡಲಾಯಿತು.

ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ₹263 ಕೋಟಿಗಳ ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಬೆಳಗಾವಿ ಜಿಲ್ಲೆಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು ₹287.55 ಕೋಟಿ ಮೊತ್ತದಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ ₹519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಸಭೆ ಅನುಮೋದನೆ ನೀಡಿದೆ.

ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ ₹158.10 ಕೋಟಿ ಯೋಜನಾ ವರದಿಗೆ ಅನುಮೋದನೆ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹499 ಕೋಟಿ ಮೊತ್ತದ ಯೋಜನೆ ಆರಂಭಕ್ಕೆ ಸರ್ಕಾರ ಒಪ್ಪಿಕೊಂಡಿದೆ.

‘ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು, ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿ ₹52.81 ಕೋಟಿ ವೆಚ್ಚದಲ್ಲಿ ಮತ್ತು ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ₹47.18 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ ₹120 ಕೋಟಿ ಕ್ರಿಯಾ ಯೋಜನೆಗೆ ಅನುಮತಿ ನೀಡಿ, ದಿನಾಂಕ: 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು. ಜತೆಗೆ, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ , ಲಾಂಡ್ರಿ ಕಟ್ಟಡ, ಎಸ್ ಟಿ ಪಿ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು ₹150 ಕೋಟಿ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹455 ಕೋಟಿಗಳ ಕಾಮಗಾರಿಗೆ ಸಭೆ ಒಪ್ಪಿಕೊಂಡಿದೆ.

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ ₹208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆ, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು ₹440.20 ಕೋಟಿಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.

ಇದನ್ನೂ ಓದಿ; ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...