Homeಮುಖಪುಟರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

ರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ, ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ ಜನವರಿ 31ರ ಬುಧವಾರದಂದು ಕೇರಳದ ಕ್ಯಾಲಿಕಟ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಕಲ್ಯಾಣ ವಿಭಾಗದ ಡೀನ್ ಸುತ್ತೋಲೆ ಹೊರಡಿಸಿದ್ದಾರೆ.

ಮಂದಿರ ಉದ್ಘಾಟನೆಯ ದಿನದಂದು ಕ್ಯಾಂಪಸ್‌ನೊಳಗೆ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿತ್ತು. ರಾಮ ಮಂದಿರ ಉದ್ಘಾಟನೆ ನಿಮಿತ್ತ ಕಾರ್ಯಕ್ರಮವನ್ನು ಆಯೋಜಿಸಿದ್ದ ಒಂದು ಗುಂಪು ಮತ್ತು ಪ್ರತಿಭಟನೆ ನಡೆಸುತ್ತಿದ್ದ ಇನ್ನೊಂದು ಗುಂಪಿನ ನಡುವೆ ಜಗಳ ನಡೆದಿತ್ತು. ಅಮಾನತುಗೊಂಡ ವಿದ್ಯಾರ್ಥಿ ಸೇರಿದಂತೆ ಪ್ರತಿಭಟನಾ ನಿರತರು ‘ಭಾರತ ರಾಮ ರಾಜ್ಯವಲ್ಲ’ ಎಂಬ ಬರಹದ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದರು.

ಡೀನ್ ಹೊರಡಿಸಿದ ಸುತ್ತೋಲೆಯಲ್ಲಿ ಸಂಸ್ಥೆಯ ಶಿಸ್ತು ಸಮಿತಿಯು ನಡೆಸಿದ ತನಿಖೆಯಲ್ಲಿ ಅಮಾನತುಗೊಂಡ ವಿದ್ಯಾರ್ಥಿಯನ್ನು ಒಳಗೊಂಡಿರುವ “ಕಾನೂನುಬಾಹಿರ ಪ್ರತಿಭಟನೆಯು ಕ್ಯಾಂಪಸ್‌ನಲ್ಲಿ ಅಶಾಂತಿಗೆ ಕಾರಣವಾಗಿದೆ. ಸಮಾಜದಲ್ಲಿ ಅಶಾಂತಿಗೆ ಪ್ರಚೋದಿಸಲು ವಿದ್ಯಾರ್ಥಿ ಕಾರಣನಾಗಿದ್ದಾನೆ. ತನ್ನ ಬೇಜವಾಬ್ದಾರಿ ವರ್ತನೆಯ ಮೂಲಕ ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ಸಂಸ್ಥೆಯ ಗೌರವವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಹೇಳಲಾಗಿದೆಯತೆ.

ಈ ಹಿಂದೆಯೂ ವಿದ್ಯಾರ್ಥಿ ಕ್ಯಾಂಪಸ್‌ನೊಳಗೆ ನಿಯಮ ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಅದು ಪುನರಾವರ್ತನೆಯಾಗಿರುವ ಹಿನ್ನೆಲೆ, ಅಮಾನತು ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ದಿ ನ್ಯೂಸ್‌ ಮಿನಿಟ್ ವರದಿ ಪ್ರಕಾರ, ವಿಡಿಯೋವೊಂದರಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಸೌಮ್ಯವಾದ ವಾಗ್ವಾದ ನಡೆದಿರುವುದು ಕಾಣಬಹುದು. ಎರಡು ಗುಂಪುಗಳ ಪೈಕಿ ಒಂದು ಗುಂಪಿನವರು ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ, ಮತ್ತೊಂದು ಗುಂಪಿನವರು ಇದು ‘ರಾಮ ರಾಜ್ಯವಲ್ಲ ಭಾರತ’ ಎಂಬ ಘೋಷಣೆ ಮೊಳಗಿಸಿದ್ದಾರೆ. ಆದರೆ, ಮಂದಿರ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಡೀನ್ ಆಮಾನತುಗೊಳಿಸಿದ್ದಾರೆ.

“ಡೀನ್ ಹೇಳಿದಂತೆ ಈ ಹಿಂದೆ ನನ್ನ ವಿರುದ್ದ ನಿಯಮ ಉಲ್ಲಂಘಿಸಿದ ಯಾವುದೇ ಆರೋಪಗಳಿಲ್ಲ. ಕಳೆದ ವರ್ಷ ಆರೆಸ್ಸೆಸ್ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡ ಕಾರ್ಯಕ್ರಮವೊಂದು ಕ್ಯಾಂಪಸ್‌ನಲ್ಲಿ ನಡೆದಿತ್ತು. ಅದನ್ನು ವಿರುದ್ದ ನಾವು ಉಪಸವಾಸ ಸತ್ಯಾಗ್ರಹ ನಡೆಸಿದ್ದೆವು. ಆ ವಿಚಾರವನ್ನು ಉಲ್ಲೇಖಿಸಿ ಟಾರ್ಗೆಟ್ ಮಾಡಲಾಗಿದೆ” ಎಂದು ಅಮಾನತುಗೊಂಡ ವಿದ್ಯಾರ್ಥಿ ಹೇಳಿದ್ದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ವಿಭಾಗದ ವಿದ್ಯಾರ್ಥಿಯನ್ನು ಜನವರಿ 30,2025 ರವರೆಗೆ ಒಂದು ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ. ಈ ಅವಧಿಯಲ್ಲಿ, ಕಾಲೇಜಿನ ಅನುಮತಿಯಿಲ್ಲದೆ ಹಾಸ್ಟೆಲ್ ಆವರಣ ಸೇರಿದಂತೆ ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದು ಬಂದಿದೆ.

ಡೀನ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಎನ್‌ಐಟಿ ಕ್ಯಾಲಿಕಟ್‌ ನಿರ್ದೇಶಕರ ವಿರುದ್ದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...