Homeಮುಖಪುಟರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

ರಾಮಮಂದಿರ ಉದ್ಘಾಟನೆಯಂದು ಪ್ರತಿಭಟಿಸಿದ್ದ ವಿದ್ಯಾರ್ಥಿ ಅಮಾನತು: ಎನ್‌ಐಟಿ ಕ್ಯಾಲಿಕಟ್‌ ಕ್ರಮಕ್ಕೆ ಭಾರೀ ವಿರೋಧ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ, ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ ಜನವರಿ 31ರ ಬುಧವಾರದಂದು ಕೇರಳದ ಕ್ಯಾಲಿಕಟ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಕಲ್ಯಾಣ ವಿಭಾಗದ ಡೀನ್ ಸುತ್ತೋಲೆ ಹೊರಡಿಸಿದ್ದಾರೆ.

ಮಂದಿರ ಉದ್ಘಾಟನೆಯ ದಿನದಂದು ಕ್ಯಾಂಪಸ್‌ನೊಳಗೆ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿತ್ತು. ರಾಮ ಮಂದಿರ ಉದ್ಘಾಟನೆ ನಿಮಿತ್ತ ಕಾರ್ಯಕ್ರಮವನ್ನು ಆಯೋಜಿಸಿದ್ದ ಒಂದು ಗುಂಪು ಮತ್ತು ಪ್ರತಿಭಟನೆ ನಡೆಸುತ್ತಿದ್ದ ಇನ್ನೊಂದು ಗುಂಪಿನ ನಡುವೆ ಜಗಳ ನಡೆದಿತ್ತು. ಅಮಾನತುಗೊಂಡ ವಿದ್ಯಾರ್ಥಿ ಸೇರಿದಂತೆ ಪ್ರತಿಭಟನಾ ನಿರತರು ‘ಭಾರತ ರಾಮ ರಾಜ್ಯವಲ್ಲ’ ಎಂಬ ಬರಹದ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದರು.

ಡೀನ್ ಹೊರಡಿಸಿದ ಸುತ್ತೋಲೆಯಲ್ಲಿ ಸಂಸ್ಥೆಯ ಶಿಸ್ತು ಸಮಿತಿಯು ನಡೆಸಿದ ತನಿಖೆಯಲ್ಲಿ ಅಮಾನತುಗೊಂಡ ವಿದ್ಯಾರ್ಥಿಯನ್ನು ಒಳಗೊಂಡಿರುವ “ಕಾನೂನುಬಾಹಿರ ಪ್ರತಿಭಟನೆಯು ಕ್ಯಾಂಪಸ್‌ನಲ್ಲಿ ಅಶಾಂತಿಗೆ ಕಾರಣವಾಗಿದೆ. ಸಮಾಜದಲ್ಲಿ ಅಶಾಂತಿಗೆ ಪ್ರಚೋದಿಸಲು ವಿದ್ಯಾರ್ಥಿ ಕಾರಣನಾಗಿದ್ದಾನೆ. ತನ್ನ ಬೇಜವಾಬ್ದಾರಿ ವರ್ತನೆಯ ಮೂಲಕ ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ಸಂಸ್ಥೆಯ ಗೌರವವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಹೇಳಲಾಗಿದೆಯತೆ.

ಈ ಹಿಂದೆಯೂ ವಿದ್ಯಾರ್ಥಿ ಕ್ಯಾಂಪಸ್‌ನೊಳಗೆ ನಿಯಮ ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಅದು ಪುನರಾವರ್ತನೆಯಾಗಿರುವ ಹಿನ್ನೆಲೆ, ಅಮಾನತು ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ದಿ ನ್ಯೂಸ್‌ ಮಿನಿಟ್ ವರದಿ ಪ್ರಕಾರ, ವಿಡಿಯೋವೊಂದರಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಸೌಮ್ಯವಾದ ವಾಗ್ವಾದ ನಡೆದಿರುವುದು ಕಾಣಬಹುದು. ಎರಡು ಗುಂಪುಗಳ ಪೈಕಿ ಒಂದು ಗುಂಪಿನವರು ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ, ಮತ್ತೊಂದು ಗುಂಪಿನವರು ಇದು ‘ರಾಮ ರಾಜ್ಯವಲ್ಲ ಭಾರತ’ ಎಂಬ ಘೋಷಣೆ ಮೊಳಗಿಸಿದ್ದಾರೆ. ಆದರೆ, ಮಂದಿರ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಡೀನ್ ಆಮಾನತುಗೊಳಿಸಿದ್ದಾರೆ.

“ಡೀನ್ ಹೇಳಿದಂತೆ ಈ ಹಿಂದೆ ನನ್ನ ವಿರುದ್ದ ನಿಯಮ ಉಲ್ಲಂಘಿಸಿದ ಯಾವುದೇ ಆರೋಪಗಳಿಲ್ಲ. ಕಳೆದ ವರ್ಷ ಆರೆಸ್ಸೆಸ್ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡ ಕಾರ್ಯಕ್ರಮವೊಂದು ಕ್ಯಾಂಪಸ್‌ನಲ್ಲಿ ನಡೆದಿತ್ತು. ಅದನ್ನು ವಿರುದ್ದ ನಾವು ಉಪಸವಾಸ ಸತ್ಯಾಗ್ರಹ ನಡೆಸಿದ್ದೆವು. ಆ ವಿಚಾರವನ್ನು ಉಲ್ಲೇಖಿಸಿ ಟಾರ್ಗೆಟ್ ಮಾಡಲಾಗಿದೆ” ಎಂದು ಅಮಾನತುಗೊಂಡ ವಿದ್ಯಾರ್ಥಿ ಹೇಳಿದ್ದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ವಿಭಾಗದ ವಿದ್ಯಾರ್ಥಿಯನ್ನು ಜನವರಿ 30,2025 ರವರೆಗೆ ಒಂದು ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ. ಈ ಅವಧಿಯಲ್ಲಿ, ಕಾಲೇಜಿನ ಅನುಮತಿಯಿಲ್ಲದೆ ಹಾಸ್ಟೆಲ್ ಆವರಣ ಸೇರಿದಂತೆ ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದು ಬಂದಿದೆ.

ಡೀನ್ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಎನ್‌ಐಟಿ ಕ್ಯಾಲಿಕಟ್‌ ನಿರ್ದೇಶಕರ ವಿರುದ್ದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...