Homeಕರ್ನಾಟಕ"ಬಾಟ್ಲಿನೂ ಹಳೇದು, ವೈನೂ ಹಳೇದು": ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ವ್ಯಂಗ್ಯ

“ಬಾಟ್ಲಿನೂ ಹಳೇದು, ವೈನೂ ಹಳೇದು”: ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

ನಿನ್ನೆ (ಫೆ.1) ಕೇಂದ್ರ ಬಿಜೆಪಿ ಸರ್ಕಾರದ ಮಧ್ಯಂತರ ಬಜೆಟ್‌ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್‌ನಲ್ಲಿ ಮಂಡನೆ ಮಾಡಿದ್ದಾರೆ.

ಕೇವಲ 59 ನಿಮಿಷಗಳಲ್ಲಿ ವಿತ್ತ ಸಚಿವೆ ಓದಿ ಮುಗಿಸಿದ ಬಜೆಟ್‌ನಲ್ಲಿ ದೊಡ್ಡ ಮಟ್ಟ ಯಾವುದೇ ಘೋಷಣೆಗಳನ್ನು ಮಾಡಿಲ್ಲ. ಈಗಾಗಲೇ ಇರುವ ಕೆಲ ಯೋಜನೆಗಳನ್ನು ಮುಂದುವರಿಸಲಾಗಿದೆ.

ಈ ಬಾರಿ ಬಜೆಟ್‌ನಲ್ಲಿ ಮುಂದುವರೆಸಿರುವ ಒಂದು ಪ್ರಮುಖ ಯೋಜನೆಯೆಂದರೆ, ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡುವುದು. ಅಭಿವೃದ್ದಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ರಾಜ್ಯಗಳಿಗೆ 50 ವರ್ಷಗಳವರೆಗೆ 75 ಸಾವಿರ ಕೋಟಿ ರೂಪಾಯಿ ದೀರ್ಘಕಾಲಿನ ಬಡ್ಡಿರಹಿತ ಸಾಲ ನೀಡುವ ಯೋಜನೆಯನ್ನು ಮುಂದುವರಿಸಲಾಗುವುದು ಎಂದು ಕೇಂದ್ರ ಘೋಷಣೆ ಮಾಡಿದೆ.

ವಿತ್ತ ಸಚಿವರ ಈ ಘೋಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. “ಬಾಟ್ಲಿನೂ ಹಳೇದು, ವೈನೂ ಹಳೇದು” ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ. ಕರ್ನಾಟಕದಿಂದ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ಒಕ್ಕೂಟ ಸರ್ಕಾರ ಮರಳಿ ಕರ್ನಾಟಕಕ್ಕೆ ಕೊಡುತ್ತಿರುವುದು ಚಿಪ್ಪು ಮಾತ್ರ. ಕನ್ನಡಿಗರ ಬೆವರಿನ ಹಣವನ್ನು ಕನ್ನಡಿಗರಿಗೇ ಸಾಲವಾಗಿ ಕೊಡುವುದು ಯಾವ ಸೀಮೆಯ ಅರ್ಥ ಶಾಸ್ತ್ರ? ಹಿಂದಿನ ಬಜೆಟ್ಟನ್ನೇ ಇಂದು ಓದಿದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಆಯ್ಕೆಯಾದ ಋಣಕ್ಕೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಕಳೆದ ವರ್ಷದ ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದ ನಿರ್ಮಲಾ ಸೀತಾರಾಮನ್‌ ರಾಜ್ಯಗಳಿಗೆ ಬಡ್ಡಿರಹಿತ ಸಾಲ ನೀಡುವ ಬಗ್ಗೆ ಘೋಷಣೆ ಮಾಡಿದ್ದರು. ಈ ಬಾರಿ ಆ ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಸಲಾಗಿದೆ. ಕೆಲ ಮಾಧ್ಯಮಗಳು ಇದನ್ನು ಈ ಬಾರಿಯ ಬಜೆಟ್‌ನ ದೊಡ್ಡ ಘೋಷಣೆಯಾಗಿ ಪರಿಗಣಿಸಿದೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಂತ್ರಿಗಳು ಕೇಂದ್ರ ನಮ್ಮ ಪಾಲಿನ ಅನುದಾನ ಕೊಡುತ್ತಿಲ್ಲ ಎಂದು ಆರೋಪಿಸುತ್ತಲೇ ಇದ್ದಾರೆ. ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ, ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದರು.

ಇದನ್ನೂ ಓದಿ: ಇದು ವಿಕಸಿತ ಅಲ್ಲ, ವಿನಾಶಕಾರಿ ಬಜೆಟ್ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...